AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯಿಂದ ಕಿರುಕುಳ ಆರೋಪ: ಡೆತ್​ ನೋಟ್​ ಬರೆದು ನವ ವಿವಾಹಿತೆ ಆತ್ಮಹತ್ಯೆ

ಪತಿ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಂಡಾವಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೇರೆ ಯುವತಿ ಜೊತೆ ಗಂಡನಿಗೆ ಸಂಬಂಧವಿದ್ದು, ಮದುವೆ ಬಳಿಕ ಈ ವಿಷಯ ನನಗೆ ಗೊತ್ತಾಗಿದೆ. ಇಬ್ಬರೂ ಯಾವಾಗಲೂ ಫೋನ್​, ಚಾಟಿಂಗ್​ ಮಾಡುತ್ತಿರುತ್ತಾರೆ. ಇದನ್ನು ಪ್ರಶ್ನಿಸಿದರೆ ಗಂಡ ಕೋಪಮಾಡಿಕೊಂಡು ಜಗಳವಾಡುತ್ತಾರೆ. ಅವರ ಕಿರುಕುಳದಿಂದಾಗಿ ಬೇಸತ್ತು ಸೂಸೈಡ್​ ಮಾಡಿಕೊಳ್ಳುತ್ತಿರೋದಾಗಿ ಡೆತ್​ ನೋಟ್​ ನಲ್ಲಿ ಆಕೆ ಆರೋಪಿಸಿದ್ದಾಳೆ.

ಪತಿಯಿಂದ ಕಿರುಕುಳ ಆರೋಪ: ಡೆತ್​ ನೋಟ್​ ಬರೆದು ನವ ವಿವಾಹಿತೆ ಆತ್ಮಹತ್ಯೆ
ನವ ವಿವಾಹಿತೆ ಆತ್ಮಹತ್ಯೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 09, 2025 | 11:36 AM

Share

ಚಿಕ್ಕಬಳ್ಳಾಪುರ, ಅಕ್ಟೋಬರ್​ 09: ಪತಿ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆ.ಎಸ್. ಜಯಶ್ರೀ (25) ಎಂದು ಗುರುತಿಸಲಾಗಿದ್ದು, 6 ತಿಂಗಳ ಹಿಂದೆಯಷ್ಟೇ ಚಂದ್ರಶೇಖರ್​ ಎಂಬವರ ಜೊತೆ ಈಕೆಯ ವಿವಾಹ ಆಗಿತ್ತು.

ಶಿಡ್ಲಘಟ್ಟ ತಾಲ್ಲೂಕಿನ ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್​ ಮತ್ತು ಜಯಶ್ರೀ ವಿವಾಹದ ಬಳಿಕ ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ ಬಳಿಕ ಪತಿ ಚಂದ್ರಶೇಖರ್​ ಬೇರೆ ಯುವತಿ ಜೊತೆ ಸದಾ ಚಾಟಿಂಗ್​ ಮಾಡ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಜಯಶ್ರೀಗೆ ಗೊತ್ತಾಗಿದೆ. ಇದನ್ನು ಆಕೆ ಪತಿ ಬಳಿ ಪ್ರಶ್ನಿಸಿದ್ದಾಳೆ. ಆ ಬಳಿಕ ಚಂದ್ರಶೇಖರ್​ ಜಯಶ್ರೀಗೆ ಕಿರುಕುಳ ನೀಡಲು ಆರಂಭಿಸಿದ್ದ. ಇದರಿಂದಾಗಿ ಬೇಸತ್ತಿದ್ದ ಜಯಶ್ರೀ ಡೆತ್​ ನೋಟ್​ ಬರೆದಿಟ್ಟು ತನ್ನ ತವರಾದ ಕೊಂಡಾವಲಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ್ ಬಂಧಿಸುವವರೆಗೆ ಶವ ಸಂಸ್ಕಾರ ಮಾಡಲ್ಲವೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಘಟನಾ ಸ್ಥಳಕ್ಕೆ ಗುಡಿಬಂಡೆ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ: 3 ದಿನದ ಹಿಂದೆ ಪತ್ನಿ ಕೊಂದು ಮಂಚದೊಳಗಿಟ್ಟು ಪತಿ ಪರಾರಿ!

ಡೆತ್​ ನೋಟ್​ ನಲ್ಲಿ ಏನಿದೆ?

ಮದುವೆ ಆಗುವಾಗ ಇಷ್ಟ ಪಟ್ಟು ಮಾಡಿಕೊಳ್ಳಬೇಕೇ ಹೊರತು ಕಷ್ಟ ಪಟ್ಟು ಅಲ್ಲ. ಸುಮ್ಮನೆ ನಾನು ಅವರಿಬ್ಬರ ಮಧ್ಯ ದಲ್ಲಿ ಯಾಕೆ ಅಡ್ಡ ಬರಬೇಕು. ಯಾವಾಗಲೂ ಇಬ್ಬರೂ ಫೋನ್, ಮೆಸೇಜ್ ಮಾಡುತ್ತಾ ಇರುತ್ತಾರೆ. ಯಾರ ಮೆಸೇಜ್, ಫೋನ್ ಅಂತ ಕೇಳಿದರೆ ಫ್ರೆಂಡ್ ಅಂತ ಹೇಳ್ತಾರೆ. ಎಷ್ಟೇ ಕ್ಲೋಸ್ ಫ್ರೆಂಡ್ ಆದರೂ ಯಾವಾಗಲು ಫೋನ್, ಮೆಸೇಜ್ ಮಾಡೋದು ಏನು ಇರುತ್ತೋ ನನಗೆ ಗೊತ್ತಿಲ್ಲ. ಏನು ಯಾವಾಗಲೂ ಆಕೆ ಜೊತೆ ಮೆಸೇಜ್ ಎಂದು ಕೇಳಿದರೆ ಕೋಪ ಮಾಡಿಕೊಂಡು ನನ್ನ ಜೊತೆ ಸರಿಯಾಗಿ ಮಾತಾಡಲ್ಲ. ಇವರಿಗೆ ನಾನು ಇಷ್ಟ ಇಲ್ಲವಂತೆ. ಇದು ನನಗೆ ಗೊತ್ತಾಗಿದ್ದು ಮದುವೆ ಬಳಿಕ. ಈ ವಿಷಯ ತಿಳಿದ ಮೇಲೆ ಮಾನಸಿಕವಾಗಿ ತುಂಬಾ ನೊಂದಿದ್ದೇನೆ. ಇವರಿಬ್ಬರ ನಡುವೆ ಇರುವ ಸಂಬಂಧದ ಬಗ್ಗೆ ನಮ್ಮ ತಂದೆ, ತಾಯಿಗೂ ಗೊತ್ತಿಲ್ಲ ಎಂಡು ಡೆತ್​ ನೋಟ್​ನಲ್ಲಿ ಜಯಶ್ರೀ ಬರೆದುಕೊಂಡಿದ್ದಾರೆ.

ಅಪರಿಚಿತ ಬಾಲಕಿ ಶವ ಪತ್ತೆ

ಮೈಸೂರಿನ ವಸ್ತುಪ್ರದರ್ಶನದ ಬಳಿ ಅಂದಾಜು 10-13 ವರ್ಷದ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಮೃತ ಬಾಲಕಿ ಮೈಸೂರು ದಸರಾಗೆ ಗೊಂಬೆ, ಬಲೂನ್ ಮಾರಲು ಬಂದವಳಾಗಿರಬಹುದು ಎಂದು ಅಂದಾಜಿಸಲಾಗಿದ್ದು, ನಜರಬಾದ್ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ಸ್ಥಳದಲ್ಲಿ ಮೊನ್ನೆ ವೆಂಕಟೇಶ್ ಎಂಬುವರ ಹತ್ಯೆಯಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ