AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗೂ ಯಾವುದೂ ಶಾಶ್ವತವಲ್ಲ, ನಾವೇನೂ ಶಾಶ್ವತವಾಗಿ ಮಂತ್ರಿಗಳಾಗಿಯೇ ಇರುವುದಿಲ್ಲ -ಸಚಿವ ಸಿ.ಪಿ.ಯೋಗೇಶ್ವರ್

ಸ್ವತಃ ಸಿಎಂ ಮಾಧ್ಯಮಗಳ ಮುಂದೆ ನಿಲುವು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಹೇಳಿಕೆಗೆ ನನ್ನದೇನು ಅಭಿಪ್ರಾಯವಿಲ್ಲ. ನನ್ನ ಸಮಸ್ಯೆ, ತೊಂದರೆಗಳ ಬಗ್ಗೆಯಷ್ಟೇ ಹೇಳಿಕೊಂಡಿದ್ದೆ. ನಮ್ಮ ಪಕ್ಷದ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಯಾರಿಗೂ ಯಾವುದೂ ಶಾಶ್ವತವಲ್ಲ, ನಾವೇನೂ ಶಾಶ್ವತವಾಗಿ ಮಂತ್ರಿಗಳಾಗಿಯೇ ಇರುವುದಿಲ್ಲ -ಸಚಿವ ಸಿ.ಪಿ.ಯೋಗೇಶ್ವರ್
ಸಚಿವ ಸಿ.ಪಿ.ಯೋಗೇಶ್ವರ್
TV9 Web
| Edited By: ಆಯೇಷಾ ಬಾನು|

Updated on: Jul 23, 2021 | 10:21 AM

Share

ಚಿಕ್ಕಬಳ್ಳಾಪುರ: ಯಾರಿಗೂ ಯಾವುದೂ ಶಾಶ್ವತವಲ್ಲ. ನಾವೇನೂ ಶಾಶ್ವತವಾಗಿ ಮಂತ್ರಿಗಳಾಗಿಯೇ ಇರುವುದಿಲ್ಲ ಎಂದು ನಂದಿಗಿರಿಧಾಮದಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಸದ್ಯ ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿರುವ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ. ಹಲವು ದಿನಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಕೂಗಿಗೆ ತಿಲಾಂಜಲಿ ಇಡಲು ಮುಂದಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸಿ.ಪಿ.ಯೋಗೇಶ್ವರ್ ಯಾರಿಗೂ ಯಾವುದೂ ಶಾಶ್ವತವಲ್ಲ ಎಂದು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು ಸ್ವತಃ ಸಿಎಂ ಮಾಧ್ಯಮಗಳ ಮುಂದೆ ನಿಲುವು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಹೇಳಿಕೆಗೆ ನನ್ನದೇನು ಅಭಿಪ್ರಾಯವಿಲ್ಲ. ನನ್ನ ಸಮಸ್ಯೆ, ತೊಂದರೆಗಳ ಬಗ್ಗೆಯಷ್ಟೇ ಹೇಳಿಕೊಂಡಿದ್ದೆ. ನಮ್ಮ ಪಕ್ಷದ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಸಿಎಂ ಬಿಎಸ್‌ ಯಡಿಯೂರಪ್ಪ ಹಿರಿಯರಿದ್ದಾರೆ. ಅವರೇ ಸ್ಪಷ್ಟನೆಯನ್ನ ನೀಡುತ್ತಿದ್ದಾರೆ. ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಯಾರೂ ಕೂಡ ಪರ್ಮನೆಂಟ್ ಆಗಿ ಸಚಿವರಾಗಿ ಇರಲ್ಲ. ಕುಮಾರಸ್ವಾಮಿ ನಮ್ಮ ರಾಜಕೀಯ ವಿರೋಧಿಗಳು. ಹಾಗಾಗಿ ನಾವು ಅವರನ್ನ ವಿರೋಧ ಮಾಡುತ್ತೇವೆ. ಕುಮಾರಸ್ವಾಮಿ ನಿಲುವೇ ದ್ವಂದ. ಅವರ ಕೆಲಸಕ್ಕಾಗಿ ಸಿಎಂ ಯಡಿಯೂರಪ್ಪ ಜೊತೆ ಸೇರುತ್ತಾರೆ ಎಂದರು.

ಇದನ್ನೂ ಓದಿ: ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಭೇಟಿ ನೀಡಿ ರೋಪ್ ವೇ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಿದ ಸಚಿವ ಸಿ.ಪಿ.ಯೋಗೇಶ್ವರ್

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!