AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗ ದಾಳಿಂಬೆಗೆ ಬಂದಿದೆ ಚಿನ್ನದ ಬೆಲೆ; ರೈತನ ತೋಟಕ್ಕೆ ನುಗ್ಗಿ 5 ಲಕ್ಷ ರೂ ಮೌಲ್ಯದ ದಾಳಿಂಬೆ ಹಣ್ಣುಗಳ ಕಳ್ಳತನ ಮಾಡಿದರು!

ದಾಳಿಂಬೆಗೆ ಚಿನ್ನದ ಬೆಲೆ ಇರುವ ಕಾರಣ ಚಿಕ್ಕಬಳ್ಳಾಪುರ ತಾಲ್ಲೂಕಿನ ವಿವಿಧಡೆ ಕಳ್ಳತನ ನಡೆದಿವೆ. ರೈತರು ಪೊಲೀಸ್ ಠಾಣೆಗೆ ದೂರು ನೀಡಿದರೆ, ತೋಟಕ್ಕೆ ನೀವೇ ಕಾವಲು ಕಾಯಿರಿ ಎಂದು ಪೊಲೀಸರು ಉಚಿತ ಸಲಹೆ ನೀಡಿದ್ದಾರಂತೆ. ಆದರೂ ಪಟ್ಟುಬಿಡದ ಅಜ್ಜವಾರದ ರೈತ ಚನ್ನಕೇಶವ ಚಿಕ್ಕಬಳ್ಳಾಪುರ ಗ್ರಾ. ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾನೆ.

ಈಗ ದಾಳಿಂಬೆಗೆ ಬಂದಿದೆ ಚಿನ್ನದ ಬೆಲೆ; ರೈತನ ತೋಟಕ್ಕೆ ನುಗ್ಗಿ 5 ಲಕ್ಷ ರೂ ಮೌಲ್ಯದ ದಾಳಿಂಬೆ ಹಣ್ಣುಗಳ ಕಳ್ಳತನ ಮಾಡಿದರು!
ರೈತನ ತೋಟಕ್ಕೆ ನುಗ್ಗಿ 5 ಲಕ್ಷ ರೂ ಮೌಲ್ಯದ ದಾಳಿಂಬೆ ಹಣ್ಣುಗಳ ಕಳ್ಳತನ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಸಾಧು ಶ್ರೀನಾಥ್​|

Updated on:Sep 16, 2023 | 3:07 PM

Share

ಉತ್ತಮ ಗುಣಮಟ್ಟದ ಒಂದು ಕೆ.ಜಿ. ದಾಳಿಂಬೆಗೆ (pomegranate) 200 ರೂಪಾಯಿಯಷ್ಟು ಚಿನ್ನದ ಬೆಲೆಯಿದೆ. ಇದರಿಂದ ಕಳ್ಳರ ಕಣ್ಣು ರೈತರ ದಾಳಿಂಬೆ ತೋಟಗಳ ಮೇಲೆ ಬಿದ್ದಿದೆ. ಕುಂಬಾರನಿಗೆ ವರ್ಷ, ದೊಣ್ಣೆಗೆ ನಿಮಿಷ ಎನ್ನುವ ಹಾಗೆ ವರ್ಷವಿಡೀ ಬೆಳೆದಿದ್ದ ದಾಳಿಂಬೆಯನ್ನು ಕಳ್ಳರು ರಾತ್ರೋರಾತ್ರಿ ಕಳ್ಳತನ ಮಾಡುವುದರ ಮೂಲಕ ರೈತನನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಈ ಕುರಿತು ಒಂದು ವರದಿ. ಕಳೆದ ಒಂದು ತಿಂಗಳ ಹಿಂದೆ ಟೊಮೆಟೋಗೆ ಚಿನ್ನದ ಬೆಲೆ ಬಂದಿತ್ತು. ಆಗ ಕಳ್ಳರು (thief) ಟೊಮೆಟೋ ಕದಿಯುತ್ತಿದ್ದರು. ಈಗ ಟೊಮೆಟೋ ನಂತರ ರೈತರು (farmer) ಬೆಳೆದ ದಾಳಿಂಬೆಗೆ ಚಿನ್ನದ ಬೆಲೆ ಬಂದಿದೆ. ಕೆಜಿ ದಾಳಿಂಬೆಗೆ 200 ರೂಪಾಯಿ ಬೆಲೆ ಇದೆ. ಇನ್ನು ಚಿಕ್ಕಬಳ್ಳಾಪುರ (chikkaballapur) ತಾಲ್ಲೂಕಿನ ಅಜ್ಜವಾರ ಗ್ರಾಮದ ರೈತ ಚನ್ನಕೇಶವ 3 ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಗುಣಮಟ್ಟದ ದಾಳಿಂಬೆ ಬೆಳೆದಿದ್ದಾನೆ.

ಇನ್ನೇನು ದಾಳಿಂಬೆ ಕಟಾವು ಮಾಡಿ, ಮಾರುಕಟ್ಟೆಗೆ ಸಾಗಿಸಬೇಕಿತ್ತು, ಅಷ್ಟರಲ್ಲಿ ಕಳ್ಳರ ದುಷ್ಟ ಕಣ್ಣು ರೈತನ ದಾಳಿಂಬೆ ಮೇಲೆ ಬಿದ್ದಿದೆ. ರಾತ್ರೋರಾತ್ರಿ ತೋಟಕ್ಕೆ ನುಗ್ಗಿ 5-6 ಟನ್‌ಗಳಷ್ಟು ದಾಳಿಂಬೆ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

ಈಗಾಗಲೇ ರೈತರ ದಾಳಿಂಬೆ ತೋಟಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ರೈತ ಚನ್ನಕೇಶವ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ತೋಟದ ಸುತ್ತಲೂ ವಿದ್ಯುತ್ ತಂತಿ ಬೇಲಿ ಹಾಕಿಸಿದ್ದಾರೆ. ಜೊತೆಗೆ ತೋಟದ ಸುತ್ತಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಕಣ್ಗಾವಲಿಟ್ಟಿದ್ದಾನೆ. ಅಲ್ಲಿಗೂ ಕರೆಂಟ್ ಇಲ್ಲದ ಸಮಯ ನೋಡಿಕೊಂಡು ಕಳ್ಳರು ತೋಟಕ್ಕೆ ನುಗ್ಗಿ ಕಟಾವಿಗೆ ಬಂದಿದ್ದ ದಾಳಿಂಬೆಯನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ! ಈ ರೀತಿಯಾದರೆ ರೈತರು ಬದುಕುವುದ್ಯಾಗೇ ಎಂದು ಪ್ರಶ್ನೆ ಮಾಡುತ್ತಿದ್ದಾರೆ ರೈತ ರಾಜಣ್ಣ.

ಇನ್ನು ದಾಳಿಂಬೆಗೆ ಚಿನ್ನದ ಬೆಲೆ ಇರುವ ಕಾರಣ ಚಿಕ್ಕಬಳ್ಳಾಪುರ ತಾಲ್ಲೂಕಿನ ಅಜ್ಜವಾರ, ನಂದಿ ಕ್ರಾಸ್, ಚದಲಪುರ, ಪಟ್ರೇನಹಳ್ಳಿ, ನಾಯನಹಳ್ಳಿ ಸೇರಿದಂತೆ ತಾಲ್ಲೂಕಿನ ವಿವಿಧಡೆ ಕಳ್ಳತನಗಳು ನಡೆದಿವೆ. ರೈತರು ಪೊಲೀಸ್ ಠಾಣೆಗೆ ದೂರು ನೀಡಿದರೆ, ತೋಟಕ್ಕೆ ನೀವೇ ಕಾವಲು ಕಾಯಿರಿ ಎಂದು ಪೊಲೀಸರು ಉಚಿತ ಸಲಹೆ ನೀಡಿದ್ದಾರಂತೆ. ಆದರೂ ಪಟ್ಟುಬಿಡದ ಅಜ್ಜವಾರದ ರೈತ ಚನ್ನಕೇಶವ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:04 pm, Sat, 16 September 23

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ