ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು

ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿದ ಕಿರಾತಕ, ಸ್ನೇಹಿತ ಮನೆಯಲ್ಲಿ ಇಲ್ಲದಿರುವಾಗ ಮನೆಗೆ ಬಂದು ಹೋಗುವುದರ ಮೂಲಕ ಆತನ ಪತ್ನಿಯ ಜೊತೆ ಅನೈತಿಕ ಸಂಬಂಧ ಬೆಳೆಸಿದ್ದ. ಇದನ್ನು ಪ್ರಶ್ನಿಸಿದ ಕಾರಣ ಸ್ವತಃ ಪತ್ನಿ ಹಾಗೂ ಪತ್ನಿಯ ಪ್ರೀಯಕರ ಸೇರಿಕೊಂಡು ಆತನಿಗೆ ಕಿರಕುಳ ನೀಡಿದ್ದಾರೆ. ಈ ಹಿನ್ನಲೆ ಮನನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು
ಮೃತ ರ್ದುದೈವಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 19, 2023 | 12:28 PM

ಚಿಕ್ಕಬಳ್ಳಾಪುರ, ಜು.19: ತಾಲೂಕಿನ ಗುವ್ವಲಕಾನಹಳ್ಳಿ ಗ್ರಾಮದ ನಿವಾಸಿ ಸುರೇಶ ಹಾಗೂ ತುಮಕೂರು ಜಿಲ್ಲೆಯ ಬುಕ್ಕಾ ಪಟ್ಟಣ ನಿವಾಸಿ ಹೇಮಾ ಎಂಬುವವರು 15 ವರ್ಷಗಳ ಹಿಂದೆ ಮದುವೆ ಮಾಡಿಕೊಂಡು ಸುಖ ಸಂಸಾರ ನಡೆಸಿದ್ರು. ದಂಪತಿಗೆ 14 ವರ್ಷ ಹಾಗೂ 9 ವರ್ಷದ ಇಬ್ಬರು ಗಂಡು ಮಕ್ಕಳು ಇದ್ದಾರೆ. ಹೇಮಾಳಿಗೆ ಸ್ವತಃ ಗಂಡನೆ ಅಂಗನವಾಡಿ ಶಾಲೆಯ ಶಿಕ್ಷಕಿ(Teacher) ಹುದ್ದೆಯನ್ನು ಕೊಡಿಸಿದ್ದನಂತೆ. ಸುಖ ಸಂಸಾರದ ಮದ್ಯೆ ಸ್ನೇಹಿತ ಹುನೇಗಲ್ ಗ್ರಾಮದ ನಿವಾಸಿ ಗಂಗಾಧರ್ ಎನ್ನುವಾತ ಆಗಾಗ ಮನೆಗೆ ಬಂದು ಹೊಗುತ್ತಿದ್ದ. ಕೊನೆಗೆ ಸ್ನೇಹಿತನ ಕಿತಾಪತಿಗೆ ಸುರೇಶ ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸುರೇಶ್​ನ ಪತ್ನಿ ಹೇಮಾ, ಅಂಗನವಾಡಿ ಶಿಕ್ಷಕಿಯಾಗಿ ಹುನೇಗಲ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಳು. ಸುರೇಶ್​ ಸ್ನೇಹಿತ ಗಂಗಾಧರ್​ಗೆ ಆತನ ಪತ್ನಿ ಹೇಮಾ ಮೇಲೆ ಕಣ್ಣು ಹಾಕಿದ್ದಾನೆ. ಬಳಿಕ ಆತನ ಪತ್ನಿಯನ್ನು ಪ್ರೀತಿಸಿ, ಅನೈತಿಕ ಸಂಬಂಧ ಬೆಳೆಸಿದ್ದನಂತೆ. ಈ ವಿಚಾರ ಗೊತ್ತಾಗಿ ಎರಡು ಕುಟುಂಬಸ್ಥರು ಇಬ್ಬರಿಗೂ ಬೈಯ್ದು, ಬುದ್ದಿವಾದ ಹೇಳಿದ್ರೂ ತಿದ್ದಿಕೊಳ್ಳದೆ ವಿನಾಃಕಾರಣ ಸುರೇಶನ ಮೇಲೆ ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಪೊಲೀಸರಿಗೆ ದೂರು ನೀಡುವುದರ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರಂತೆ. ಇದರಿಂದ ಮನನೊಂದ ಸುರೇಶ. ತನ್ನ ಸಾವಿಗೆ ಪತ್ನಿ ಹೇಮಾ ಹಾಗೂ ಸ್ನೇಹಿತ ಗಂಗಾಧರ್ ಕಾರಣವೆಂದು ಆಡಿಯೊ ರೆಕಾರ್ಡ್ ಮಾಡಿ ಆತ್ಮಹತ್ಯೆಗೂ ಶರಣಾಗಿದ್ದಾನೆ.

ಇದನ್ನೂ ಓದಿ:ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ

ಸುರೇಶ ಸಾಯುವುದಕ್ಕೂ ಮುನ್ನ ಆಡಿಯೊ ರೆಕಾರ್ಡ ಮಾಡಿ ತನ್ನ ಸ್ನೇಹಿತರು ಬಂಧು ಬಳಗಕ್ಕೆ ಕಳುಹಿಸಿದ್ದು, ತನ್ನ ಸಾವಿಗೆ ಪತ್ನಿ ಹೇಮಾ ಹಾಗೂ ಗಂಗಾಧರ್ ಕಾರಣ, ತನ್ನ ಶವ ಸಂಸ್ಕಾರಕ್ಕೆ ತನ್ನ ಹೆಂಡತಿ ಹಾಗೂ ನನ್ನ ಮಕ್ಕಳು ಸಹ ಬರಬಾರದು. ಹಿಡಿ ಮಣ್ಣು ಸಹ ಹಾಕಬಾರದೆಂದು ಅವಲತ್ತುಕೊಂಡಿದ್ದಾನೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಹೇಮಾ ಹಾಗೂ ಗಂಗಾಧರ್ ವಿರುದ್ದ ಪ್ರಕರಣ ದಾಖಲು ಮಾಡಿಕೊಂಡು ಇಬ್ಬರನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Wed, 19 July 23

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’