AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು

ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿದ ಕಿರಾತಕ, ಸ್ನೇಹಿತ ಮನೆಯಲ್ಲಿ ಇಲ್ಲದಿರುವಾಗ ಮನೆಗೆ ಬಂದು ಹೋಗುವುದರ ಮೂಲಕ ಆತನ ಪತ್ನಿಯ ಜೊತೆ ಅನೈತಿಕ ಸಂಬಂಧ ಬೆಳೆಸಿದ್ದ. ಇದನ್ನು ಪ್ರಶ್ನಿಸಿದ ಕಾರಣ ಸ್ವತಃ ಪತ್ನಿ ಹಾಗೂ ಪತ್ನಿಯ ಪ್ರೀಯಕರ ಸೇರಿಕೊಂಡು ಆತನಿಗೆ ಕಿರಕುಳ ನೀಡಿದ್ದಾರೆ. ಈ ಹಿನ್ನಲೆ ಮನನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು
ಮೃತ ರ್ದುದೈವಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 19, 2023 | 12:28 PM

Share

ಚಿಕ್ಕಬಳ್ಳಾಪುರ, ಜು.19: ತಾಲೂಕಿನ ಗುವ್ವಲಕಾನಹಳ್ಳಿ ಗ್ರಾಮದ ನಿವಾಸಿ ಸುರೇಶ ಹಾಗೂ ತುಮಕೂರು ಜಿಲ್ಲೆಯ ಬುಕ್ಕಾ ಪಟ್ಟಣ ನಿವಾಸಿ ಹೇಮಾ ಎಂಬುವವರು 15 ವರ್ಷಗಳ ಹಿಂದೆ ಮದುವೆ ಮಾಡಿಕೊಂಡು ಸುಖ ಸಂಸಾರ ನಡೆಸಿದ್ರು. ದಂಪತಿಗೆ 14 ವರ್ಷ ಹಾಗೂ 9 ವರ್ಷದ ಇಬ್ಬರು ಗಂಡು ಮಕ್ಕಳು ಇದ್ದಾರೆ. ಹೇಮಾಳಿಗೆ ಸ್ವತಃ ಗಂಡನೆ ಅಂಗನವಾಡಿ ಶಾಲೆಯ ಶಿಕ್ಷಕಿ(Teacher) ಹುದ್ದೆಯನ್ನು ಕೊಡಿಸಿದ್ದನಂತೆ. ಸುಖ ಸಂಸಾರದ ಮದ್ಯೆ ಸ್ನೇಹಿತ ಹುನೇಗಲ್ ಗ್ರಾಮದ ನಿವಾಸಿ ಗಂಗಾಧರ್ ಎನ್ನುವಾತ ಆಗಾಗ ಮನೆಗೆ ಬಂದು ಹೊಗುತ್ತಿದ್ದ. ಕೊನೆಗೆ ಸ್ನೇಹಿತನ ಕಿತಾಪತಿಗೆ ಸುರೇಶ ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸುರೇಶ್​ನ ಪತ್ನಿ ಹೇಮಾ, ಅಂಗನವಾಡಿ ಶಿಕ್ಷಕಿಯಾಗಿ ಹುನೇಗಲ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಳು. ಸುರೇಶ್​ ಸ್ನೇಹಿತ ಗಂಗಾಧರ್​ಗೆ ಆತನ ಪತ್ನಿ ಹೇಮಾ ಮೇಲೆ ಕಣ್ಣು ಹಾಕಿದ್ದಾನೆ. ಬಳಿಕ ಆತನ ಪತ್ನಿಯನ್ನು ಪ್ರೀತಿಸಿ, ಅನೈತಿಕ ಸಂಬಂಧ ಬೆಳೆಸಿದ್ದನಂತೆ. ಈ ವಿಚಾರ ಗೊತ್ತಾಗಿ ಎರಡು ಕುಟುಂಬಸ್ಥರು ಇಬ್ಬರಿಗೂ ಬೈಯ್ದು, ಬುದ್ದಿವಾದ ಹೇಳಿದ್ರೂ ತಿದ್ದಿಕೊಳ್ಳದೆ ವಿನಾಃಕಾರಣ ಸುರೇಶನ ಮೇಲೆ ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಪೊಲೀಸರಿಗೆ ದೂರು ನೀಡುವುದರ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರಂತೆ. ಇದರಿಂದ ಮನನೊಂದ ಸುರೇಶ. ತನ್ನ ಸಾವಿಗೆ ಪತ್ನಿ ಹೇಮಾ ಹಾಗೂ ಸ್ನೇಹಿತ ಗಂಗಾಧರ್ ಕಾರಣವೆಂದು ಆಡಿಯೊ ರೆಕಾರ್ಡ್ ಮಾಡಿ ಆತ್ಮಹತ್ಯೆಗೂ ಶರಣಾಗಿದ್ದಾನೆ.

ಇದನ್ನೂ ಓದಿ:ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ

ಸುರೇಶ ಸಾಯುವುದಕ್ಕೂ ಮುನ್ನ ಆಡಿಯೊ ರೆಕಾರ್ಡ ಮಾಡಿ ತನ್ನ ಸ್ನೇಹಿತರು ಬಂಧು ಬಳಗಕ್ಕೆ ಕಳುಹಿಸಿದ್ದು, ತನ್ನ ಸಾವಿಗೆ ಪತ್ನಿ ಹೇಮಾ ಹಾಗೂ ಗಂಗಾಧರ್ ಕಾರಣ, ತನ್ನ ಶವ ಸಂಸ್ಕಾರಕ್ಕೆ ತನ್ನ ಹೆಂಡತಿ ಹಾಗೂ ನನ್ನ ಮಕ್ಕಳು ಸಹ ಬರಬಾರದು. ಹಿಡಿ ಮಣ್ಣು ಸಹ ಹಾಕಬಾರದೆಂದು ಅವಲತ್ತುಕೊಂಡಿದ್ದಾನೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಹೇಮಾ ಹಾಗೂ ಗಂಗಾಧರ್ ವಿರುದ್ದ ಪ್ರಕರಣ ದಾಖಲು ಮಾಡಿಕೊಂಡು ಇಬ್ಬರನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Wed, 19 July 23

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ