AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು

ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿದ ಕಿರಾತಕ, ಸ್ನೇಹಿತ ಮನೆಯಲ್ಲಿ ಇಲ್ಲದಿರುವಾಗ ಮನೆಗೆ ಬಂದು ಹೋಗುವುದರ ಮೂಲಕ ಆತನ ಪತ್ನಿಯ ಜೊತೆ ಅನೈತಿಕ ಸಂಬಂಧ ಬೆಳೆಸಿದ್ದ. ಇದನ್ನು ಪ್ರಶ್ನಿಸಿದ ಕಾರಣ ಸ್ವತಃ ಪತ್ನಿ ಹಾಗೂ ಪತ್ನಿಯ ಪ್ರೀಯಕರ ಸೇರಿಕೊಂಡು ಆತನಿಗೆ ಕಿರಕುಳ ನೀಡಿದ್ದಾರೆ. ಈ ಹಿನ್ನಲೆ ಮನನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು
ಮೃತ ರ್ದುದೈವಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jul 19, 2023 | 12:28 PM

Share

ಚಿಕ್ಕಬಳ್ಳಾಪುರ, ಜು.19: ತಾಲೂಕಿನ ಗುವ್ವಲಕಾನಹಳ್ಳಿ ಗ್ರಾಮದ ನಿವಾಸಿ ಸುರೇಶ ಹಾಗೂ ತುಮಕೂರು ಜಿಲ್ಲೆಯ ಬುಕ್ಕಾ ಪಟ್ಟಣ ನಿವಾಸಿ ಹೇಮಾ ಎಂಬುವವರು 15 ವರ್ಷಗಳ ಹಿಂದೆ ಮದುವೆ ಮಾಡಿಕೊಂಡು ಸುಖ ಸಂಸಾರ ನಡೆಸಿದ್ರು. ದಂಪತಿಗೆ 14 ವರ್ಷ ಹಾಗೂ 9 ವರ್ಷದ ಇಬ್ಬರು ಗಂಡು ಮಕ್ಕಳು ಇದ್ದಾರೆ. ಹೇಮಾಳಿಗೆ ಸ್ವತಃ ಗಂಡನೆ ಅಂಗನವಾಡಿ ಶಾಲೆಯ ಶಿಕ್ಷಕಿ(Teacher) ಹುದ್ದೆಯನ್ನು ಕೊಡಿಸಿದ್ದನಂತೆ. ಸುಖ ಸಂಸಾರದ ಮದ್ಯೆ ಸ್ನೇಹಿತ ಹುನೇಗಲ್ ಗ್ರಾಮದ ನಿವಾಸಿ ಗಂಗಾಧರ್ ಎನ್ನುವಾತ ಆಗಾಗ ಮನೆಗೆ ಬಂದು ಹೊಗುತ್ತಿದ್ದ. ಕೊನೆಗೆ ಸ್ನೇಹಿತನ ಕಿತಾಪತಿಗೆ ಸುರೇಶ ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸುರೇಶ್​ನ ಪತ್ನಿ ಹೇಮಾ, ಅಂಗನವಾಡಿ ಶಿಕ್ಷಕಿಯಾಗಿ ಹುನೇಗಲ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಳು. ಸುರೇಶ್​ ಸ್ನೇಹಿತ ಗಂಗಾಧರ್​ಗೆ ಆತನ ಪತ್ನಿ ಹೇಮಾ ಮೇಲೆ ಕಣ್ಣು ಹಾಕಿದ್ದಾನೆ. ಬಳಿಕ ಆತನ ಪತ್ನಿಯನ್ನು ಪ್ರೀತಿಸಿ, ಅನೈತಿಕ ಸಂಬಂಧ ಬೆಳೆಸಿದ್ದನಂತೆ. ಈ ವಿಚಾರ ಗೊತ್ತಾಗಿ ಎರಡು ಕುಟುಂಬಸ್ಥರು ಇಬ್ಬರಿಗೂ ಬೈಯ್ದು, ಬುದ್ದಿವಾದ ಹೇಳಿದ್ರೂ ತಿದ್ದಿಕೊಳ್ಳದೆ ವಿನಾಃಕಾರಣ ಸುರೇಶನ ಮೇಲೆ ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಪೊಲೀಸರಿಗೆ ದೂರು ನೀಡುವುದರ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರಂತೆ. ಇದರಿಂದ ಮನನೊಂದ ಸುರೇಶ. ತನ್ನ ಸಾವಿಗೆ ಪತ್ನಿ ಹೇಮಾ ಹಾಗೂ ಸ್ನೇಹಿತ ಗಂಗಾಧರ್ ಕಾರಣವೆಂದು ಆಡಿಯೊ ರೆಕಾರ್ಡ್ ಮಾಡಿ ಆತ್ಮಹತ್ಯೆಗೂ ಶರಣಾಗಿದ್ದಾನೆ.

ಇದನ್ನೂ ಓದಿ:ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ

ಸುರೇಶ ಸಾಯುವುದಕ್ಕೂ ಮುನ್ನ ಆಡಿಯೊ ರೆಕಾರ್ಡ ಮಾಡಿ ತನ್ನ ಸ್ನೇಹಿತರು ಬಂಧು ಬಳಗಕ್ಕೆ ಕಳುಹಿಸಿದ್ದು, ತನ್ನ ಸಾವಿಗೆ ಪತ್ನಿ ಹೇಮಾ ಹಾಗೂ ಗಂಗಾಧರ್ ಕಾರಣ, ತನ್ನ ಶವ ಸಂಸ್ಕಾರಕ್ಕೆ ತನ್ನ ಹೆಂಡತಿ ಹಾಗೂ ನನ್ನ ಮಕ್ಕಳು ಸಹ ಬರಬಾರದು. ಹಿಡಿ ಮಣ್ಣು ಸಹ ಹಾಕಬಾರದೆಂದು ಅವಲತ್ತುಕೊಂಡಿದ್ದಾನೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಹೇಮಾ ಹಾಗೂ ಗಂಗಾಧರ್ ವಿರುದ್ದ ಪ್ರಕರಣ ದಾಖಲು ಮಾಡಿಕೊಂಡು ಇಬ್ಬರನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Wed, 19 July 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ