AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ತಂದೆ, ತಾಯಿ, ದೊಡ್ಡಪ್ಪನಿಂದಲೇ ಮಗಳ ಹತ್ಯೆ; ಪರ್ವಿನಾ ಕೊಲೆ ರಹಸ್ಯ ಬಯಲು ಮಾಡಿದ ಪೊಲೀಸರು

Chikkaballapura: ಇದೇ ತಿಂಗಳ 5 ರಂದು ಪರ್ವಿನಾ ಶವವಾಗಿ ಪತ್ತೆಯಾಗಿದ್ದಳು. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.

Crime News: ತಂದೆ, ತಾಯಿ, ದೊಡ್ಡಪ್ಪನಿಂದಲೇ ಮಗಳ ಹತ್ಯೆ; ಪರ್ವಿನಾ ಕೊಲೆ ರಹಸ್ಯ ಬಯಲು ಮಾಡಿದ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 27, 2021 | 3:28 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗ್ರಾಮ ವಾಟದಹೊಸಹಳ್ಳಿಯಲ್ಲಿ ಪರ್ವಿನಾ ಎಂಬಾಕೆಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪರ್ವಿನಾ ಬಾನು ಸಾವು ಪ್ರಕರಣದ ತನಿಖೆ ಒಂದು ಹಂತ ತಲುಪಿದೆ. ಈ ವೇಳೆ, ದುಷ್ಕೃತ್ಯಕ್ಕೆ ಕುಟುಂಬದ ಸದಸ್ಯರೇ ಕಾರಣ ಎಂಬ ವಿಚಾರ ಬಯಲಾಗಿದೆ. ಹೆತ್ತ ತಂದೆ, ತಾಯಿ, ದೊಡ್ಡಪ್ಪನಿಂದಲೇ ಪರ್ವಿನಾ ಕೊಲೆ ನಡೆಸಲಾಗಿರುವ ಅಂಶ ಬೆಳಕಿಗೆ ಬಂದಿದೆ.

ಸ್ವತಃ ಪೋಷಕರೇ ಕೊಲೆ ಮಾಡಿ ಪರ್ವೀನಾಳನ್ನು ಬಾವಿಗೆ ಬಿಸಾಡಿರುವ ವಿಚಾರ ಬಯಲಾಗಿದೆ. ವಾಟದಹೊಸಹಳ್ಳಿಯಲ್ಲಿ ಪರ್ವಿನಾ ಕೊಲೆ ಮಾಡಲಾಗಿತ್ತು. ಪರ್ವಿನಾ, ತನ್ನ ಪತಿ ಮೃತಪಟ್ಟ ಬಳಿಕ ಮತ್ತೊಬ್ಬರ ಜತೆ ಸಂಬಂಧ ಇಟ್ಟುಕೊಂಡಿದ್ದಳು. ದಿನಕ್ಕೊಬ್ಬರಂತೆ ಸಂಬಂಧ ಇಟ್ಟುಕೊಳ್ಳುತ್ತಿದ್ದ ಆರೋಪ ಕೇಳಿಬಂದಿತ್ತು. ಇದರಿಂದ ಮರ್ಯಾದೆ ಹೋಗುತ್ತಿದೆ ಎಂದು ಪೋಷಕರು ಮಗಳನ್ನೇ ಹತ್ಯೆಗೈದಿರುವ ವಿಚಾರ ಬಯಲಾಗಿದೆ. ಗುಲ್ಜರ್, ಪೈಯಾಜ್, ಪ್ಯಾರೆಜಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವತಃ ತಂದೆ ತಾಯಿ ಹಾಗೂ ದೊಡ್ಡಪ್ಪ ಸೇರಿಕೊಂಡು ಮಗಳನ್ನು ಕೊಲೆ ಮಾಡಿದ್ದರು. ಕೊಲೆ ಕೃತ್ಯ ನಡೆಸಿ ಮೃತದೇಹವನ್ನು ಪಾಳು ಬಾವಿಯೊಂದರಲ್ಲಿ ಎಸೆದಿದ್ದರು. ವಾಟದಹೊಸಹಳ್ಳಿ ಗ್ರಾಮದ ಪಾಳು ಬಾವಿಯಲ್ಲಿ ಪರ್ವಿನಾ ಶವ ಪತ್ತೆಯಾಗಿತ್ತು. ಹಗ್ಗದಿಂದ ಪರ್ವಿನಾ ಕತ್ತು ಹಿಸುಕಿ ಕೊಲೆ ಮಾಡಿ ಶವ ಬಿಸಾಡಿರುವ ಮಾಹಿತಿ ತಿಳಿದುಬಂದಿತ್ತು. ಇದೇ ತಿಂಗಳ 5 ರಂದು ಪರ್ವಿನಾ ಶವವಾಗಿ ಪತ್ತೆಯಾಗಿದ್ದಳು. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸ್ಥಳ ಮಹಜರು ವೇಳೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು, ಆರೋಪಿ ಮತ್ತು ಮುಖ್ಯಪೇದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಇದನ್ನೂ ಓದಿ: ಮಡಿಕೇರಿ: ಆಸ್ತಿ ಆಸೆಗೆ ವಿಕಲಚೇತನ ವ್ಯಕ್ತಿಯನ್ನೇ ಕೊಲೆಗೈದ ಚಿಕ್ಕಪ್ಪ; ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?