AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ತಂದೆ, ತಾಯಿ, ದೊಡ್ಡಪ್ಪನಿಂದಲೇ ಮಗಳ ಹತ್ಯೆ; ಪರ್ವಿನಾ ಕೊಲೆ ರಹಸ್ಯ ಬಯಲು ಮಾಡಿದ ಪೊಲೀಸರು

Chikkaballapura: ಇದೇ ತಿಂಗಳ 5 ರಂದು ಪರ್ವಿನಾ ಶವವಾಗಿ ಪತ್ತೆಯಾಗಿದ್ದಳು. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.

Crime News: ತಂದೆ, ತಾಯಿ, ದೊಡ್ಡಪ್ಪನಿಂದಲೇ ಮಗಳ ಹತ್ಯೆ; ಪರ್ವಿನಾ ಕೊಲೆ ರಹಸ್ಯ ಬಯಲು ಮಾಡಿದ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on: Sep 27, 2021 | 3:28 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗ್ರಾಮ ವಾಟದಹೊಸಹಳ್ಳಿಯಲ್ಲಿ ಪರ್ವಿನಾ ಎಂಬಾಕೆಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪರ್ವಿನಾ ಬಾನು ಸಾವು ಪ್ರಕರಣದ ತನಿಖೆ ಒಂದು ಹಂತ ತಲುಪಿದೆ. ಈ ವೇಳೆ, ದುಷ್ಕೃತ್ಯಕ್ಕೆ ಕುಟುಂಬದ ಸದಸ್ಯರೇ ಕಾರಣ ಎಂಬ ವಿಚಾರ ಬಯಲಾಗಿದೆ. ಹೆತ್ತ ತಂದೆ, ತಾಯಿ, ದೊಡ್ಡಪ್ಪನಿಂದಲೇ ಪರ್ವಿನಾ ಕೊಲೆ ನಡೆಸಲಾಗಿರುವ ಅಂಶ ಬೆಳಕಿಗೆ ಬಂದಿದೆ.

ಸ್ವತಃ ಪೋಷಕರೇ ಕೊಲೆ ಮಾಡಿ ಪರ್ವೀನಾಳನ್ನು ಬಾವಿಗೆ ಬಿಸಾಡಿರುವ ವಿಚಾರ ಬಯಲಾಗಿದೆ. ವಾಟದಹೊಸಹಳ್ಳಿಯಲ್ಲಿ ಪರ್ವಿನಾ ಕೊಲೆ ಮಾಡಲಾಗಿತ್ತು. ಪರ್ವಿನಾ, ತನ್ನ ಪತಿ ಮೃತಪಟ್ಟ ಬಳಿಕ ಮತ್ತೊಬ್ಬರ ಜತೆ ಸಂಬಂಧ ಇಟ್ಟುಕೊಂಡಿದ್ದಳು. ದಿನಕ್ಕೊಬ್ಬರಂತೆ ಸಂಬಂಧ ಇಟ್ಟುಕೊಳ್ಳುತ್ತಿದ್ದ ಆರೋಪ ಕೇಳಿಬಂದಿತ್ತು. ಇದರಿಂದ ಮರ್ಯಾದೆ ಹೋಗುತ್ತಿದೆ ಎಂದು ಪೋಷಕರು ಮಗಳನ್ನೇ ಹತ್ಯೆಗೈದಿರುವ ವಿಚಾರ ಬಯಲಾಗಿದೆ. ಗುಲ್ಜರ್, ಪೈಯಾಜ್, ಪ್ಯಾರೆಜಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವತಃ ತಂದೆ ತಾಯಿ ಹಾಗೂ ದೊಡ್ಡಪ್ಪ ಸೇರಿಕೊಂಡು ಮಗಳನ್ನು ಕೊಲೆ ಮಾಡಿದ್ದರು. ಕೊಲೆ ಕೃತ್ಯ ನಡೆಸಿ ಮೃತದೇಹವನ್ನು ಪಾಳು ಬಾವಿಯೊಂದರಲ್ಲಿ ಎಸೆದಿದ್ದರು. ವಾಟದಹೊಸಹಳ್ಳಿ ಗ್ರಾಮದ ಪಾಳು ಬಾವಿಯಲ್ಲಿ ಪರ್ವಿನಾ ಶವ ಪತ್ತೆಯಾಗಿತ್ತು. ಹಗ್ಗದಿಂದ ಪರ್ವಿನಾ ಕತ್ತು ಹಿಸುಕಿ ಕೊಲೆ ಮಾಡಿ ಶವ ಬಿಸಾಡಿರುವ ಮಾಹಿತಿ ತಿಳಿದುಬಂದಿತ್ತು. ಇದೇ ತಿಂಗಳ 5 ರಂದು ಪರ್ವಿನಾ ಶವವಾಗಿ ಪತ್ತೆಯಾಗಿದ್ದಳು. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸ್ಥಳ ಮಹಜರು ವೇಳೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು, ಆರೋಪಿ ಮತ್ತು ಮುಖ್ಯಪೇದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಇದನ್ನೂ ಓದಿ: ಮಡಿಕೇರಿ: ಆಸ್ತಿ ಆಸೆಗೆ ವಿಕಲಚೇತನ ವ್ಯಕ್ತಿಯನ್ನೇ ಕೊಲೆಗೈದ ಚಿಕ್ಕಪ್ಪ; ಆರೋಪಿಗಳನ್ನು ಬಂಧಿಸಿದ ಪೊಲೀಸರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ