AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ನಿಂತಿದ್ದ ಅಪ್ರಾಪ್ತೆಯನ್ನೂ ಬಿಡದ ಕಾಮುಕ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ?

ಅಪ್ರಾಪ್ತ ವಿದ್ಯಾರ್ಥಿನಿಗೆ ಡ್ರಾಪ್ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಪೂರ್ತಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಅರೆಸ್ಟ್​​ ಮಾಡಿದ್ದು, ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.  ಸಂತ್ರಸ್ತೆ ಪಿಯುಸಿ ವಿದ್ಯಾರ್ಥಿನಿ ಎನ್ನಲಾಗಿದೆ.

ರಸ್ತೆ ಬದಿ ನಿಂತಿದ್ದ ಅಪ್ರಾಪ್ತೆಯನ್ನೂ ಬಿಡದ ಕಾಮುಕ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ?
ಬಂಧಿತ ಆರೋಪಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jan 13, 2026 | 7:26 PM

Share

ಚಿಕ್ಕಬಳ್ಳಾಪುರ, ಜನವರಿ 13: ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ರಾತ್ರಿ ಪೂರ್ತಿ ಕೂಂಬಿಂಗ್ ನಡೆಸಿ ಘಟನೆ ಸಂಬಂಧ ಆರೋಪಿ ಗಣೇಶ್​​ ಎಂಬಾತನನ್ನು ಬಂಧಿಸಿರುವ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂತ್ರಸ್ತೆ, ಬಾಗೇಪಲ್ಲಿಯಿಂದ ವಾಪಸ್ಸು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮಕ್ಕೆ ತೆರಳಲು ಪೆರೇಸಂದ್ರ ಕ್ರಾಸ್ ಬಳಿಯ ಬಸ್‍ನಿಲ್ದಾಣದಲ್ಲಿ ನಿಂತಿದ್ದಳು. ಆ ವೇಳೆ ಅಲ್ಲಿಗೆ ಬಂದ ಬೈಕ್ ಸವಾರ ಗಣೇಶ್​​ ಅಪ್ರಾಪ್ತ ವಿದ್ಯಾರ್ಥಿನಿಗೆ ಡ್ರಾಪ್ ಕೊಡುವ ನೆಪದಲ್ಲಿ ಆಕೆಯನ್ನು ಬೈಕ್ ಮೇಲೆ ಹತ್ತಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾನಂತೆ. ನಂತರ ಭಯ ಭೀತನಾದ ಆರೋಪಿ ತನ್ನ ಸ್ನೇಹಿತನಿಗೆ ಕರೆ ಮಾಡಿ ಮಾಡಿದ ಪಾಪಕೃತ್ಯವನ್ನು ಹೇಳಿಕೊಂಡಿದ್ದಾನೆ. ಗಣೇಶ್​​ ಸ್ನೇಹಿತ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಆ ಬೆನ್ನಲ್ಲೇ ಪೊಲೀಸರು ನಿರ್ಜನ ಪ್ರದೇಶಕ್ಕೆ ಬಂದು ಹುಡುಕಾಡಿದ್ದಾರೆ.

ಇದನ್ನೂ ಓದಿ: ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ ಆರೋಪ; ಸಂತ್ರಸ್ತೆ ಹೇಳಿದ್ದೇನು?

ವಿಷಯ ತಿಳಿಯುತ್ತಿದ್ದಂತೆ ಆರೋಪಿಯ ಮೊಬೈಲ್​​ ಟ್ರೇಸ್​​ ಮಾಡಲಾಗಿದ್ದು, ನಿರ್ಜನ ಪ್ರದೇಶದಲ್ಲಿ ಕೂಂಬಿಂಗ್ ನಡೆಸಿ ಆರೋಪಿ ಹಾಗೂ ಸಂತ್ರಸ್ತೆಯನ್ನು ಪತ್ತೆಹಚ್ಚಲಾಗಿದೆ. ಬಳಿಕ ವಿದ್ಯಾರ್ಥಿನಿಯನ್ನು ಸ್ಥಳೀಯ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ರವಾನಿಸಿದ್ದು, ಆರೋಪಿ ಗಣೇಶ್​​ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನು ಚಿಕ್ಕಬಳ್ಳಾಪುರ ಮೂಲದ ಆರೋಪಿ ಗಣೇಶನಿಗೆ ಮದುವೆಯಾಗಿ ಮಕ್ಕಳಿದ್ದಾರೆ ಎನ್ನುವ ವಿಷಯ ತನಿಖೆ ವೇಳೆ ಗೊತ್ತಾಗಿದೆ. ಸಂತ್ರಸ್ತ ಬಾಲಕಿ ಮೊದಲೇ ತಂದೆ ಕಳೆದುಕೊಂಡಿದ್ದು, ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು. ಘಟನೆಯಿಂದ ಆಕೆ ಮತ್ತಷ್ಟು ಅಘಾತಕ್ಕೆ ಒಳಗಾಗಿದ್ದಾಳೆ ಎನ್ನಲಾಗಿದ್ದು, ಪೆರೇಸಂದ್ರ ಠಾಣೆಯ ಪೊಲೀಸರು ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:52 pm, Tue, 13 January 26

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ