ಮದುವೆ ನಿರಾಕರಿಸಿದ್ದಕ್ಕೆ ಶಿಕ್ಷಕಿ ಜತೆ ಪೇದೆ ಅಸಭ್ಯ ವರ್ತನೆ

ಚಿಕ್ಕಬಳ್ಳಾಪುರ: ಮದುವೆ ನಿರಾಕರಿಸಿದ್ದಕ್ಕೆ ಶಿಕ್ಷಕಿ ಜತೆ ಪೇದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಗುಡಿಬಂಡೆಯ ಶಾಲೆಯಲ್ಲಿ ನಡೆದಿದೆ. ಖಾಸಗಿ ಶಾಲೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕಿಯನ್ನು ಮದುವೆಯಾಗುವಂತೆ ಗುಡಿಬಂಡೆ ಪೊಲೀಸ್ ಠಾಣೆಯ ಗುಪ್ತವಾರ್ತೆಯ ಪೇದೆ ರಮೇಶ್ ಪೀಡಿಸಿದ್ದಾನೆ. ಶಿಕ್ಷಕರು ಮತ್ತು ಮಕ್ಕಳೆದುರೇ ಶಿಕ್ಷಕಿ ಕೈ ಹಿಡಿದು ಎಳೆದಾಡಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ರಮೇಶ್ ವರ್ತನೆಗೆ ಶಿಕ್ಷಕಿ ಶಾಲೆಯಲ್ಲೇ ಕಣ್ಣೀರಿಟ್ಟಿದ್ದಾರೆ. ನೊಂದ ಶಿಕ್ಷಕಿ ಹಾಗೂ ಶಾಲೆ ಮುಖ್ಯಸ್ಥರು ಪೇದೆ ರಮೇಶ್ ವಿರುದ್ಧ ಗುಡಿಬಂಡೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಿಕ್ಷಕಿ ಪೋಷಕರು ರಮೇಶ್ ವಿರುದ್ಧ […]

ಮದುವೆ ನಿರಾಕರಿಸಿದ್ದಕ್ಕೆ ಶಿಕ್ಷಕಿ ಜತೆ ಪೇದೆ ಅಸಭ್ಯ ವರ್ತನೆ
ಸಾಧು ಶ್ರೀನಾಥ್​

Updated on: Jan 09, 2020 | 4:20 PM

ಚಿಕ್ಕಬಳ್ಳಾಪುರ: ಮದುವೆ ನಿರಾಕರಿಸಿದ್ದಕ್ಕೆ ಶಿಕ್ಷಕಿ ಜತೆ ಪೇದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಗುಡಿಬಂಡೆಯ ಶಾಲೆಯಲ್ಲಿ ನಡೆದಿದೆ. ಖಾಸಗಿ ಶಾಲೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕಿಯನ್ನು ಮದುವೆಯಾಗುವಂತೆ ಗುಡಿಬಂಡೆ ಪೊಲೀಸ್ ಠಾಣೆಯ ಗುಪ್ತವಾರ್ತೆಯ ಪೇದೆ ರಮೇಶ್ ಪೀಡಿಸಿದ್ದಾನೆ.

ಶಿಕ್ಷಕರು ಮತ್ತು ಮಕ್ಕಳೆದುರೇ ಶಿಕ್ಷಕಿ ಕೈ ಹಿಡಿದು ಎಳೆದಾಡಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ರಮೇಶ್ ವರ್ತನೆಗೆ ಶಿಕ್ಷಕಿ ಶಾಲೆಯಲ್ಲೇ ಕಣ್ಣೀರಿಟ್ಟಿದ್ದಾರೆ. ನೊಂದ ಶಿಕ್ಷಕಿ ಹಾಗೂ ಶಾಲೆ ಮುಖ್ಯಸ್ಥರು ಪೇದೆ ರಮೇಶ್ ವಿರುದ್ಧ ಗುಡಿಬಂಡೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಿಕ್ಷಕಿ ಪೋಷಕರು ರಮೇಶ್ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us