AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20ಕ್ಕೂ ಹೆಚ್ಚು ಕುಖ್ಯಾತ ರೌಡಿಶೀಟರ್‌ ಮನೆ ಮೇಲೆ ಪೊಲೀಸರ ದಾಳಿ: ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿ ಆಗದಂತೆ ಎಚ್ಚರಿಕೆ

20ಕ್ಕೂ ಹೆಚ್ಚು ಕುಖ್ಯಾತ ರೌಡಿಶೀಟರ್​ ಮನೆಗಳ ಮೇಲೆ ಜಿಲ್ಲೆಯ ಗೌರಿಬಿದನೂರು ಠಾಣೆ ಪೊಲೀಸರಿಂದ ದಾಳಿ ಮಾಡಿದ್ದು, ಮಾರಕಾಸ್ತ್ರಗಳು, ಗನ್‌ಗಳಿಗಾಗಿ ಶೋಧ ಮಾಡಲಾಗಿದೆ.

20ಕ್ಕೂ ಹೆಚ್ಚು ಕುಖ್ಯಾತ ರೌಡಿಶೀಟರ್‌ ಮನೆ ಮೇಲೆ ಪೊಲೀಸರ ದಾಳಿ: ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿ ಆಗದಂತೆ ಎಚ್ಚರಿಕೆ
ಕುಖ್ಯಾತ ರೌಡಿಶೀಟರ್‌ ಮನೆ ಮೇಲೆ ಪೊಲೀಸರ ದಾಳಿ
ಗಂಗಾಧರ​ ಬ. ಸಾಬೋಜಿ
|

Updated on:Apr 03, 2023 | 10:56 PM

Share

ಚಿಕ್ಕಬಳ್ಳಾಪುರ: 20ಕ್ಕೂ ಹೆಚ್ಚು ಕುಖ್ಯಾತ ರೌಡಿಶೀಟರ್‌ (Rowdy Sheetrs) ಮನೆಗಳ ಮೇಲೆ ಜಿಲ್ಲೆಯ ಗೌರಿಬಿದನೂರು ಠಾಣೆ ಪೊಲೀಸರಿಂದ ದಾಳಿ ಮಾಡಲಾಗಿದೆ. ಮೊಹಮ್ಮದ್ ಜಕ್ರಿಯಾ, ಲಂಕೇಶ್‌, ವಿನಯಕುಮಾರ್‌, ರಾಮಿರೆಡ್ಡಿ ಅರ್ಜುನ್ ಗೌಡ ಹಾಗೂ ಚಿಗಟಗೆರೆ ಪ್ರವೀಣ್‌ ಸೇರಿದಂತೆ ಕುಖ್ಯಾತ ರೌಡಿಶೀಟರ್‌ ಮನೆಗಳಲ್ಲಿ ಮಾರಕಾಸ್ತ್ರಗಳು, ಗನ್‌ಗಳಿಗಾಗಿ ಶೋಧ ಮಾಡಲಾಗಿದೆ. ಬಳಿಕ ರೌಡಿಶೀಟರ್‌ಗಳನ್ನು ಠಾಣೆಗೆ ಕರೆತಂದು ಚುನಾವಣಾ ಅಕ್ರಮ, ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿ ಆಗದಂತೆ ಇನ್ಸ್‌ಪೆಕ್ಟರ್ ಕೆ.ಪಿ.ಸತ್ಯನಾರಾಯಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಐವರು ರೌಡಿಶೀಟರ್​ಗಳು ಗಡಿಪಾರು ಮಾಡಲು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಸೂಚನೆ ನೀಡಿದ್ದರು. ಅದರಂತೆ ಡಿಸಿಪಿ ಮುತ್ತುರಾಜ್ ಐವರನ್ನ ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿತ್ತು. ಸಮಾಜದ ಸ್ವಾಸ್ಥ್ಯ ಕದಡಿ ಅಶಾಂತಿ ಮೂಡಿಸುವ ಸಂಭಾವ್ಯವಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕಾನೂನು ಬಾಹಿರ ಚಟುವಟಿಕೆ, ಹಿಂಸೆ, ಬೆದರಿಕೆ, ಅಪರಾಧ ಚಟುವಟಿಕೆ ನಡೆಸದಂತೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಎಚ್ಚರಿಕೆ ನೀಡಿ ರೌಡಿ ಶೀಟರ್‌ಗಳನ್ನ ಗಡಿಪಾರಿಗೆ ಸೂಚನೆ ನೀಡಿದ್ದರು.

ಗಡಿಪಾರು ಮಾಡಲಾದ ರೌಡಿ ಶೀಟರ್‌ಗಳು

ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ರೌಡಿ ಶೀಟರ್ ಯಶವಂತ್ ಅಲಿಯಾಸ್ ಯಶು ಅಲಿಯಾಸ್ ಮಿಕ್ಕಿಯನ್ನ 4 ತಿಂಗಳು ಶಿವಮೊಗ್ಗ ಜಿಲ್ಲೆಗೆ ಗಡಿಪಾರು, ಸುಬಾನ್ ಅಲಿಯಾಸ್ ಕೊಯ್ತಾಬಾಬುನನ್ನ 4 ತಿಂಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಗೆ ಗಡಿಪಾರು, ಎನ್.ಆರ್.ಹಾಗೂ ಮಂಡಿ ಪೊಲೀಸ್ ಠಾಣಾ ರೌಡಿಶೀಟರ್ ಕೃಷ್ಣ ಅಲಿಯಾಸ್ ಕಿಟ್ಟಿಯನ್ನ 5 ತಿಂಗಳ ಕಾಲ ದಾವಣಗೆರೆ ಜಿಲ್ಲೆಗೆ ಗಡಿಪಾರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಐವರು ರೌಡಿಶೀಟರ್ ಮೈಸೂರು ಜಿಲ್ಲೆಯಿಂದ ಗಡಿಪಾರು

ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸೈಯದ್ ಅಯೂಬ್ ಅಲಿಯಾಸ್ ಬಿಡ್ಡನನ್ನ 5 ತಿಂಗಳು ಚಿಕ್ಕಮಂಗಳೂರು ಜಿಲ್ಲೆಗೆ ಗಡಿಪಾರು ಮತ್ತು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ತೌಸೀಫ್ ಖಾನ್ ಅಲಿಯಾಸ್ ಡಾನ್​ನನ್ನ 5 ತಿಂಗಳು ಚಿಕ್ಕಬಳ್ಳಾಪುರ ಜಿಲ್ಲೆಗೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆ ಈ ಐವರನ್ನ ಗಡಿಪಾರು ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ: 6 ದಿನಗಳಲ್ಲಿ 47 ಕೋಟಿಗೂ ಹೆಚ್ಚು ಮೌಲ್ಯದ ವಸ್ತು ಸೇರಿದಂತೆ 12 ಕೋಟಿಗೂ ಹೆಚ್ಚು ನಗದು ಜಪ್ತಿ

ರೌಡಿ ಶೀಟರ್​ಗಳಿಗೆ ಪೊಲೀಸರ ಖಡಕ್ ಎಚ್ಚರಿಕೆ

ಅದೇ ರೀತಿಯಾಗಿ ಬೀದರ್ ಪೊಲೀಸರು ನಗರದ ಓಲ್ಡ್ ಸಿಟಿ ಮಾಂಗರ್ ವಾಡಿ ಗಲ್ಲಿಯಲ್ಲಿ ವಾಸಿಸುವ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಿದ್ದರು. ಎಸ್ಪಿ ಚನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಡಿಎಸ್​​ಪಿ ಕೆ.ಎಂ ಸತೀಶ್ ತಂಡ ದಾಳಿ ಮಾಡಿದ್ದು, ದಾಳಿ ವೇಳೆ ಕೆಲವು ಮನೆಗಳಲ್ಲಿ ಎಂಬ ಹೆಸರಿನ ನಶೆ ಎರಿಸುವ ಮೇಡಿಸೀನ್​ಗಳು ಪತ್ತೆಯಾಗಿದ್ದವು. ಇಬ್ಬರನ್ನು ವಶಕ್ಕೆ ಕೂಡ ಪಡೆದುಕೊಂಡಿದ್ದರು. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಗಲಾಟೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿ ಶೀಟರ್​ಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:55 pm, Mon, 3 April 23

ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ