AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20ಕ್ಕೂ ಹೆಚ್ಚು ಕುಖ್ಯಾತ ರೌಡಿಶೀಟರ್‌ ಮನೆ ಮೇಲೆ ಪೊಲೀಸರ ದಾಳಿ: ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿ ಆಗದಂತೆ ಎಚ್ಚರಿಕೆ

20ಕ್ಕೂ ಹೆಚ್ಚು ಕುಖ್ಯಾತ ರೌಡಿಶೀಟರ್​ ಮನೆಗಳ ಮೇಲೆ ಜಿಲ್ಲೆಯ ಗೌರಿಬಿದನೂರು ಠಾಣೆ ಪೊಲೀಸರಿಂದ ದಾಳಿ ಮಾಡಿದ್ದು, ಮಾರಕಾಸ್ತ್ರಗಳು, ಗನ್‌ಗಳಿಗಾಗಿ ಶೋಧ ಮಾಡಲಾಗಿದೆ.

20ಕ್ಕೂ ಹೆಚ್ಚು ಕುಖ್ಯಾತ ರೌಡಿಶೀಟರ್‌ ಮನೆ ಮೇಲೆ ಪೊಲೀಸರ ದಾಳಿ: ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿ ಆಗದಂತೆ ಎಚ್ಚರಿಕೆ
ಕುಖ್ಯಾತ ರೌಡಿಶೀಟರ್‌ ಮನೆ ಮೇಲೆ ಪೊಲೀಸರ ದಾಳಿ
ಗಂಗಾಧರ​ ಬ. ಸಾಬೋಜಿ
|

Updated on:Apr 03, 2023 | 10:56 PM

Share

ಚಿಕ್ಕಬಳ್ಳಾಪುರ: 20ಕ್ಕೂ ಹೆಚ್ಚು ಕುಖ್ಯಾತ ರೌಡಿಶೀಟರ್‌ (Rowdy Sheetrs) ಮನೆಗಳ ಮೇಲೆ ಜಿಲ್ಲೆಯ ಗೌರಿಬಿದನೂರು ಠಾಣೆ ಪೊಲೀಸರಿಂದ ದಾಳಿ ಮಾಡಲಾಗಿದೆ. ಮೊಹಮ್ಮದ್ ಜಕ್ರಿಯಾ, ಲಂಕೇಶ್‌, ವಿನಯಕುಮಾರ್‌, ರಾಮಿರೆಡ್ಡಿ ಅರ್ಜುನ್ ಗೌಡ ಹಾಗೂ ಚಿಗಟಗೆರೆ ಪ್ರವೀಣ್‌ ಸೇರಿದಂತೆ ಕುಖ್ಯಾತ ರೌಡಿಶೀಟರ್‌ ಮನೆಗಳಲ್ಲಿ ಮಾರಕಾಸ್ತ್ರಗಳು, ಗನ್‌ಗಳಿಗಾಗಿ ಶೋಧ ಮಾಡಲಾಗಿದೆ. ಬಳಿಕ ರೌಡಿಶೀಟರ್‌ಗಳನ್ನು ಠಾಣೆಗೆ ಕರೆತಂದು ಚುನಾವಣಾ ಅಕ್ರಮ, ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿ ಆಗದಂತೆ ಇನ್ಸ್‌ಪೆಕ್ಟರ್ ಕೆ.ಪಿ.ಸತ್ಯನಾರಾಯಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಐವರು ರೌಡಿಶೀಟರ್​ಗಳು ಗಡಿಪಾರು ಮಾಡಲು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಸೂಚನೆ ನೀಡಿದ್ದರು. ಅದರಂತೆ ಡಿಸಿಪಿ ಮುತ್ತುರಾಜ್ ಐವರನ್ನ ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿತ್ತು. ಸಮಾಜದ ಸ್ವಾಸ್ಥ್ಯ ಕದಡಿ ಅಶಾಂತಿ ಮೂಡಿಸುವ ಸಂಭಾವ್ಯವಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕಾನೂನು ಬಾಹಿರ ಚಟುವಟಿಕೆ, ಹಿಂಸೆ, ಬೆದರಿಕೆ, ಅಪರಾಧ ಚಟುವಟಿಕೆ ನಡೆಸದಂತೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಎಚ್ಚರಿಕೆ ನೀಡಿ ರೌಡಿ ಶೀಟರ್‌ಗಳನ್ನ ಗಡಿಪಾರಿಗೆ ಸೂಚನೆ ನೀಡಿದ್ದರು.

ಗಡಿಪಾರು ಮಾಡಲಾದ ರೌಡಿ ಶೀಟರ್‌ಗಳು

ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ರೌಡಿ ಶೀಟರ್ ಯಶವಂತ್ ಅಲಿಯಾಸ್ ಯಶು ಅಲಿಯಾಸ್ ಮಿಕ್ಕಿಯನ್ನ 4 ತಿಂಗಳು ಶಿವಮೊಗ್ಗ ಜಿಲ್ಲೆಗೆ ಗಡಿಪಾರು, ಸುಬಾನ್ ಅಲಿಯಾಸ್ ಕೊಯ್ತಾಬಾಬುನನ್ನ 4 ತಿಂಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಗೆ ಗಡಿಪಾರು, ಎನ್.ಆರ್.ಹಾಗೂ ಮಂಡಿ ಪೊಲೀಸ್ ಠಾಣಾ ರೌಡಿಶೀಟರ್ ಕೃಷ್ಣ ಅಲಿಯಾಸ್ ಕಿಟ್ಟಿಯನ್ನ 5 ತಿಂಗಳ ಕಾಲ ದಾವಣಗೆರೆ ಜಿಲ್ಲೆಗೆ ಗಡಿಪಾರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಐವರು ರೌಡಿಶೀಟರ್ ಮೈಸೂರು ಜಿಲ್ಲೆಯಿಂದ ಗಡಿಪಾರು

ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸೈಯದ್ ಅಯೂಬ್ ಅಲಿಯಾಸ್ ಬಿಡ್ಡನನ್ನ 5 ತಿಂಗಳು ಚಿಕ್ಕಮಂಗಳೂರು ಜಿಲ್ಲೆಗೆ ಗಡಿಪಾರು ಮತ್ತು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ತೌಸೀಫ್ ಖಾನ್ ಅಲಿಯಾಸ್ ಡಾನ್​ನನ್ನ 5 ತಿಂಗಳು ಚಿಕ್ಕಬಳ್ಳಾಪುರ ಜಿಲ್ಲೆಗೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆ ಈ ಐವರನ್ನ ಗಡಿಪಾರು ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ: 6 ದಿನಗಳಲ್ಲಿ 47 ಕೋಟಿಗೂ ಹೆಚ್ಚು ಮೌಲ್ಯದ ವಸ್ತು ಸೇರಿದಂತೆ 12 ಕೋಟಿಗೂ ಹೆಚ್ಚು ನಗದು ಜಪ್ತಿ

ರೌಡಿ ಶೀಟರ್​ಗಳಿಗೆ ಪೊಲೀಸರ ಖಡಕ್ ಎಚ್ಚರಿಕೆ

ಅದೇ ರೀತಿಯಾಗಿ ಬೀದರ್ ಪೊಲೀಸರು ನಗರದ ಓಲ್ಡ್ ಸಿಟಿ ಮಾಂಗರ್ ವಾಡಿ ಗಲ್ಲಿಯಲ್ಲಿ ವಾಸಿಸುವ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಿದ್ದರು. ಎಸ್ಪಿ ಚನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಡಿಎಸ್​​ಪಿ ಕೆ.ಎಂ ಸತೀಶ್ ತಂಡ ದಾಳಿ ಮಾಡಿದ್ದು, ದಾಳಿ ವೇಳೆ ಕೆಲವು ಮನೆಗಳಲ್ಲಿ ಎಂಬ ಹೆಸರಿನ ನಶೆ ಎರಿಸುವ ಮೇಡಿಸೀನ್​ಗಳು ಪತ್ತೆಯಾಗಿದ್ದವು. ಇಬ್ಬರನ್ನು ವಶಕ್ಕೆ ಕೂಡ ಪಡೆದುಕೊಂಡಿದ್ದರು. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಗಲಾಟೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿ ಶೀಟರ್​ಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:55 pm, Mon, 3 April 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ