AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಬಂಧದ ನಡುವೆಯೋ ನಂದಿಬೆಟ್ಟ, ಸ್ಕಂದಗಿರಿಗೆ ಹರಿದು ಬಂದ ಜನ ಸಾಗರ; ಪ್ರವಾಸಿಗರನ್ನು ವಾಪಾಸ್ ಕಳಿಸುತ್ತಿರುವ ಪೊಲೀಸರು

ಡಿಸಿ ಆದೇಶ ಉಲ್ಲಂಘನೆಯಾಗಿದ್ದು ಪ್ರವೇಶ ನಿರ್ಬಂಧದ ಮಧ್ಯೆಯೂ ನೂರಾರು ಜನ ಪ್ರವಾಸಿಗರು ನಂದಿಬೆಟ್ಟ, ಸ್ಕಂದಗಿರಿಗೆ ಆಗಮಿಸಿದ್ದಾರೆ. ಸದ್ಯ ಈಗ ಪೊಲೀಸರು ಹರಸಾಹಸ ಪಟ್ಟು ಪ್ರವಾಸಿಗರನ್ನು ವಾಪಸ್ ಕಳುಹಿಸುತ್ತಿದ್ದಾರೆ.

ನಿರ್ಬಂಧದ ನಡುವೆಯೋ ನಂದಿಬೆಟ್ಟ, ಸ್ಕಂದಗಿರಿಗೆ ಹರಿದು ಬಂದ ಜನ ಸಾಗರ; ಪ್ರವಾಸಿಗರನ್ನು ವಾಪಾಸ್ ಕಳಿಸುತ್ತಿರುವ ಪೊಲೀಸರು
ನಂದಿಬೆಟ್ಟ ಬಳಿ ಕಂಡುಬಂದ ದೃಶ್ಯ
TV9 Web
| Edited By: ಆಯೇಷಾ ಬಾನು|

Updated on: Jul 02, 2023 | 10:26 AM

Share

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಆಗಮನ ಹಿನ್ನೆಲೆ ಇಂದಿನಿಂದ 2 ದಿನ ನಂದಿಬೆಟ್ಟ(Nandi Hills), ಸ್ಕಂದಗಿರಿ ಬೆಟ್ಟಕ್ಕೆ(Skandagiri) ಪ್ರವೇಶ ನಿರ್ಬಂಧ ಹೇರಲಾಗಿದೆ. ಆದ್ರೆ ಡಿಸಿ ಆದೇಶ ಉಲ್ಲಂಘನೆಯಾಗಿದ್ದು ಪ್ರವೇಶ ನಿರ್ಬಂಧದ ಮಧ್ಯೆಯೂ ನೂರಾರು ಜನ ಪ್ರವಾಸಿಗರು ನಂದಿಬೆಟ್ಟ, ಸ್ಕಂದಗಿರಿಗೆ ಆಗಮಿಸಿದ್ದಾರೆ. ಸದ್ಯ ಈಗ ಪೊಲೀಸರು ಹರಸಾಹಸ ಪಟ್ಟು ಪ್ರವಾಸಿಗರನ್ನು ವಾಪಸ್ ಕಳುಹಿಸುತ್ತಿದ್ದಾರೆ. ರಸ್ತೆ ಮಧ್ಯೆ ಬ್ಯಾರಿಕೇಡ್ ಹಾಕಲಾಗಿದೆ.

ಜುಲೈ 3ರಂದು ಮುದ್ದೇನಹಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದಾರೆ. ಚಿಕ್ಕಬಳ್ಳಾಫುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಶ್ರೀ ಸತ್ಯಸಾಯಿ ಲೋಕಸೇವಾ ಆಶ್ರಮಕ್ಕೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಭದ್ರತೆ ದೃಷ್ಟಿಯಿಂದ ಇಂದಿನಿಂದ 2 ದಿನ ನಂದಿಬೆಟ್ಟ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರವೀಂದ್ರ ಆದೇಶ ಹೊರಡಿಸಿದ್ದರು. ಆದ್ರೆ ಪ್ರವೇಶ ನಿರ್ಬಂಧದ ಬಗ್ಗೆ ಮಾಹಿತಿ ಇಲ್ಲದೇ ಪ್ರವಾಸಿಗರು ಆಗಮಿಸಿದ್ದಾರೆ. ಹೀಗಾಗಿ ಗಿರಿಧಾಮಕ್ಕೆ ಬಂದವರನ್ನು ಪೊಲೀಸರು ವಾಪಾಸ್ ಕಳಿಸುತ್ತಿದ್ದಾರೆ. ರಸ್ತೆ ಮಧ್ಯೆ ಬ್ಯಾರಿಕೇಡ್​ಗಳನ್ನು ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಗಿರಿಧಾಮಗಳಿಗೆ ಬೀಗ ಹಾಕಲಾಗಿದೆ. ಮುದ್ದೇನಹಳ್ಳಿಗೆ ಗಿರಿಧಾಮಗಳು ಹೊಂದಿಕೊಂಡಿರುವ ಕಾರಣ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಇದನ್ನೂ ಓದಿ: ನಂದಿಗಿರಿಧಾಮದಲ್ಲಿ ಪ್ರಪಾತಕ್ಕೆ ಬಿದ್ದು 112ಗೆ ಕರೆ ಮಾಡಿ ರಕ್ಷಣೆ ಮಾಡುವಂತೆ ಗೋಗರೆದ ಯುವಕರು

ಇಂದು ಬೆಳಗ್ಗೆ 6ರಿಂದ ಜು.3ರ ಸಂಜೆ 6ರವರೆಗೆ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ಇರಲಿದೆ. ಸದ್ಯ ಗಿರಿಧಾಮಗಳಿಗೆ ಬರದಂತೆ ಪ್ರವಾಸಿಗರಿಗೆ ಡಿಸಿ ರವೀಂದ್ರ ಮನವಿ ಮಾಡಿದ್ದಾರೆ. ರಾಜಧಾನಿ ಬೆಂಗಳೂರು ಜನರ ಫೇವರೇಟ್ ಹಾಟ್ ಸ್ಪಾಟ್ ಆಗಿರುವ ನಂದಿಹಿಲ್ಸ್ ಬಂದ್ ಆಗಿರುವ ವಿಚಾರ ತಿಳಿಯದೆ ವೀಕೆಂಡ್ ಎಂಜಾಯ್ ಮಾಡಲು ನೂರಾರು ಮಂದಿ ಆಗಮಿಸಿದ್ದು ಪೊಲೀಸರಿಗೆ ತಲೆ ನೋವಾಗಿತ್ತು.

ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು