AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಬಂಧದ ನಡುವೆಯೋ ನಂದಿಬೆಟ್ಟ, ಸ್ಕಂದಗಿರಿಗೆ ಹರಿದು ಬಂದ ಜನ ಸಾಗರ; ಪ್ರವಾಸಿಗರನ್ನು ವಾಪಾಸ್ ಕಳಿಸುತ್ತಿರುವ ಪೊಲೀಸರು

ಡಿಸಿ ಆದೇಶ ಉಲ್ಲಂಘನೆಯಾಗಿದ್ದು ಪ್ರವೇಶ ನಿರ್ಬಂಧದ ಮಧ್ಯೆಯೂ ನೂರಾರು ಜನ ಪ್ರವಾಸಿಗರು ನಂದಿಬೆಟ್ಟ, ಸ್ಕಂದಗಿರಿಗೆ ಆಗಮಿಸಿದ್ದಾರೆ. ಸದ್ಯ ಈಗ ಪೊಲೀಸರು ಹರಸಾಹಸ ಪಟ್ಟು ಪ್ರವಾಸಿಗರನ್ನು ವಾಪಸ್ ಕಳುಹಿಸುತ್ತಿದ್ದಾರೆ.

ನಿರ್ಬಂಧದ ನಡುವೆಯೋ ನಂದಿಬೆಟ್ಟ, ಸ್ಕಂದಗಿರಿಗೆ ಹರಿದು ಬಂದ ಜನ ಸಾಗರ; ಪ್ರವಾಸಿಗರನ್ನು ವಾಪಾಸ್ ಕಳಿಸುತ್ತಿರುವ ಪೊಲೀಸರು
ನಂದಿಬೆಟ್ಟ ಬಳಿ ಕಂಡುಬಂದ ದೃಶ್ಯ
TV9 Web
| Edited By: ಆಯೇಷಾ ಬಾನು|

Updated on: Jul 02, 2023 | 10:26 AM

Share

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಆಗಮನ ಹಿನ್ನೆಲೆ ಇಂದಿನಿಂದ 2 ದಿನ ನಂದಿಬೆಟ್ಟ(Nandi Hills), ಸ್ಕಂದಗಿರಿ ಬೆಟ್ಟಕ್ಕೆ(Skandagiri) ಪ್ರವೇಶ ನಿರ್ಬಂಧ ಹೇರಲಾಗಿದೆ. ಆದ್ರೆ ಡಿಸಿ ಆದೇಶ ಉಲ್ಲಂಘನೆಯಾಗಿದ್ದು ಪ್ರವೇಶ ನಿರ್ಬಂಧದ ಮಧ್ಯೆಯೂ ನೂರಾರು ಜನ ಪ್ರವಾಸಿಗರು ನಂದಿಬೆಟ್ಟ, ಸ್ಕಂದಗಿರಿಗೆ ಆಗಮಿಸಿದ್ದಾರೆ. ಸದ್ಯ ಈಗ ಪೊಲೀಸರು ಹರಸಾಹಸ ಪಟ್ಟು ಪ್ರವಾಸಿಗರನ್ನು ವಾಪಸ್ ಕಳುಹಿಸುತ್ತಿದ್ದಾರೆ. ರಸ್ತೆ ಮಧ್ಯೆ ಬ್ಯಾರಿಕೇಡ್ ಹಾಕಲಾಗಿದೆ.

ಜುಲೈ 3ರಂದು ಮುದ್ದೇನಹಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದಾರೆ. ಚಿಕ್ಕಬಳ್ಳಾಫುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಶ್ರೀ ಸತ್ಯಸಾಯಿ ಲೋಕಸೇವಾ ಆಶ್ರಮಕ್ಕೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಭದ್ರತೆ ದೃಷ್ಟಿಯಿಂದ ಇಂದಿನಿಂದ 2 ದಿನ ನಂದಿಬೆಟ್ಟ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರವೀಂದ್ರ ಆದೇಶ ಹೊರಡಿಸಿದ್ದರು. ಆದ್ರೆ ಪ್ರವೇಶ ನಿರ್ಬಂಧದ ಬಗ್ಗೆ ಮಾಹಿತಿ ಇಲ್ಲದೇ ಪ್ರವಾಸಿಗರು ಆಗಮಿಸಿದ್ದಾರೆ. ಹೀಗಾಗಿ ಗಿರಿಧಾಮಕ್ಕೆ ಬಂದವರನ್ನು ಪೊಲೀಸರು ವಾಪಾಸ್ ಕಳಿಸುತ್ತಿದ್ದಾರೆ. ರಸ್ತೆ ಮಧ್ಯೆ ಬ್ಯಾರಿಕೇಡ್​ಗಳನ್ನು ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಗಿರಿಧಾಮಗಳಿಗೆ ಬೀಗ ಹಾಕಲಾಗಿದೆ. ಮುದ್ದೇನಹಳ್ಳಿಗೆ ಗಿರಿಧಾಮಗಳು ಹೊಂದಿಕೊಂಡಿರುವ ಕಾರಣ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಇದನ್ನೂ ಓದಿ: ನಂದಿಗಿರಿಧಾಮದಲ್ಲಿ ಪ್ರಪಾತಕ್ಕೆ ಬಿದ್ದು 112ಗೆ ಕರೆ ಮಾಡಿ ರಕ್ಷಣೆ ಮಾಡುವಂತೆ ಗೋಗರೆದ ಯುವಕರು

ಇಂದು ಬೆಳಗ್ಗೆ 6ರಿಂದ ಜು.3ರ ಸಂಜೆ 6ರವರೆಗೆ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ಇರಲಿದೆ. ಸದ್ಯ ಗಿರಿಧಾಮಗಳಿಗೆ ಬರದಂತೆ ಪ್ರವಾಸಿಗರಿಗೆ ಡಿಸಿ ರವೀಂದ್ರ ಮನವಿ ಮಾಡಿದ್ದಾರೆ. ರಾಜಧಾನಿ ಬೆಂಗಳೂರು ಜನರ ಫೇವರೇಟ್ ಹಾಟ್ ಸ್ಪಾಟ್ ಆಗಿರುವ ನಂದಿಹಿಲ್ಸ್ ಬಂದ್ ಆಗಿರುವ ವಿಚಾರ ತಿಳಿಯದೆ ವೀಕೆಂಡ್ ಎಂಜಾಯ್ ಮಾಡಲು ನೂರಾರು ಮಂದಿ ಆಗಮಿಸಿದ್ದು ಪೊಲೀಸರಿಗೆ ತಲೆ ನೋವಾಗಿತ್ತು.

ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!