AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆಡೆ ಅಬ್ಬರದ ಮಳೆ; ಚಿಕ್ಕಬಳ್ಳಾಪುರದಲ್ಲಿ ಮಾತ್ರ ವರುಣನಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇಡ ಎಂದರೂ ಮಳೆರಾಯ ತನ್ನ ಕೋಪ-ತಾಪ ತೋರಿಸಿ, ನೆರೆ ಹಾವಳಿ ಸೃಷ್ಠಿಸಿ ರೈತರ ಜಮೀನುಗಳು, ಮನೆಗಳು ಜಾಲಾವೃತವಾಗುವಂತೆ ಮಾಡಿದ್ದಾನೆ. ಆದ್ರೆ, ಇತ್ತ ಬಯಲು ಸೀಮೆಯ ಅದೊಂದು ಜಿಲ್ಲೆಗಳಲ್ಲಿ ಹುಯ್ಯೊ ಮಳೆರಾಯ ಅಂದ್ರು, ವರುಣ ಮಾತ್ರ ಕರುಣೆ ತೋರ್ತಿಲ್ಲ. ಇದರಿಂದ ಶಕ್ತಿ ದೇವತೆಯ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ಮಾಡಿದ್ದಾರೆ. ಅಷ್ಟಕ್ಕೂ ಎಲ್ಲಿ ಅಂತೀರಾ? ಈ ಸ್ಟೋರಿ ಓದಿ.

ಎಲ್ಲೆಡೆ ಅಬ್ಬರದ ಮಳೆ; ಚಿಕ್ಕಬಳ್ಳಾಪುರದಲ್ಲಿ ಮಾತ್ರ ವರುಣನಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ!
ಚಿಕ್ಕಬಳ್ಳಾಪುರದಲ್ಲಿ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 18, 2024 | 7:18 PM

Share

ಚಿಕ್ಕಬಳ್ಳಾಪುರ, ಜು.18: ಬಯಲು ಸೀಮೆ ಜಿಲ್ಲೆಗಳಲ್ಲಿ ಒಂದಾಗಿರುವ ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯಲ್ಲಿ ಈ ಬಾರಿಯೂ ನಿರೀಕ್ಷೆಯಂತೆ ಮಳೆರಾಯ ಕರುಣೆ ತೋರುತ್ತಿಲ್ಲ. ಇದರಿಂದ ಜಿಲ್ಲೆಯಾದ್ಯಂತ ನಿರೀಕ್ಷೆ ಹಾಗೂ ವಾಡಿಕೆ ಮಳೆಯೂ ಬರುತ್ತಿಲ್ಲ,  ರೈತರು ಹುಯ್ಯೊ ಮಳೆರಾಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಆದ್ರೆ, ಮಳೆರಾಯ ಚಿಕ್ಕಬಳ್ಳಾಪುರದ ಬದಲು ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನೆರೆ ಸೃಷ್ಟಿಸಿದ್ದಾನೆ. ಇದ್ರಿಂದ ಮಳೆರಾಯ ಚಿಕ್ಕಬಳ್ಳಾಪುರದತ್ತ ಕರುಣೆ ತೊರಲಿ ಎಂದು ಚಿಕ್ಕಬಳ್ಳಾಪುರ ನಗರದ ಶ್ರೀ ಮಹಾಕಾಳಿ ದೇವಸ್ಥಾನಲ್ಲಿ ಮಳೆಗಾಗಿ ಪ್ರಾರ್ಥಿಸಿ, ವಿವಿಧ ದೇವರುಗಳ ಕಲ್ಯಾಣೋತ್ಸವ ನಡೆಸಲಾಯಿತು.

ಇನ್ನು ದೇವಸ್ಥಾನದಲ್ಲಿ ನಡೆಯುವ ಪೂಜೆ ನೋಡಲು ಸಾವಿರಾರು ಜನ ಮಹಿಳೆಯರು, ಭಕ್ತರು ಆಗಮಿಸಿದ್ದರು. ಕಲ್ಯಾಣೋತ್ಸವ ಪ್ರಯುಕ್ತ ಮಹಾಕಾಳಿ ದೇವಸ್ಥಾನವನ್ನು ವಿವಿಧ ತಳಿರು ತೊರಣ, ಎಳನೀರು, ತೆಂಗಿನಕಾಯಿ, ಜೋಳದ ತೆನೆ, ವಿವಿಧ ಹೂ ಗಳಿಂದ ಅದ್ದೂರಿಯಾಗಿ ಅಲಂಕರಿಸಲಾಗಿತ್ತು. ಒಂದೆ ಜಾಗದಲ್ಲಿ ಗಿರಿಜಾ ಕಲ್ಯಾಣೋತ್ಸವ, ಸುಬ್ರಮಣ್ಯೇಶ್ವರ ಸ್ವಾಮಿ ಕಲ್ಯಾಣೋತ್ಸವ, ಸೀತಾರಾಮ ಕಲ್ಯಾಣೋತ್ಸವ, ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವ, ಲಕ್ಷ್ಮಿ ನರಸಿಂಹಸ್ವಾಮಿ ಕಲ್ಯಾಣೋತ್ಸವ ನೋಡು ಭಾಗ್ಯ ಭಕ್ತಾಧಿಗಳಿಗೆ ದೊರೆಯಿತು.

ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ: ಮಾಗುಂಡಿ ಸೇತುವೆ ಮುಳುಗಡೆ, 15ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ

ಒಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಬೇಡ ಎಂದರೂ ಮಳೆಯ ಅಬ್ಬರ ಜೋರಾಗಿದೆ. ಆದ್ರೆ, ಇತ್ತ ಬಯಲು ಸೀಮೆಯ ಚಿಕ್ಕಬಳ್ಳಾಪುರದಲ್ಲಿ ಪ್ರಾರ್ಥಿಸಿದರೂ ಮಳೆ ಬರುತ್ತಿಲ್ಲ. ಹುಯ್ಯೊ ಮಳೆರಾಯ ಎಂದು ಬೇಡಿಕೊಂಡರೂ ನಿರೀಕ್ಷೆಯಂತೆ ಮಳೆ ಬರುತ್ತಿಲ್ಲ. ಇದ್ರಿಂದ ಜನ ದೇವರ ಮೊರೆ ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ