AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ; ಕೆಲ ಹೊತ್ತಲ್ಲೇ ವರುಣನ ಆಗಮನ

ಚಿಂತಾಮಣಿ ತಾಲ್ಲೂಕಿನ ಹಿರೇಕಟ್ಟಿಗೇನಹಳ್ಳಿ ಗ್ರಾಮದಲ್ಲಿ ಇಬ್ಬರು ಅಪ್ರಪಾಪ್ತ ಬಾಲಕರಿಗೆ ವಧು-ವರರ ವೇಷ ತೊಡಿಸಿ ಅದ್ಧೂರಿ ಮದುವೆ ಮಾಡುವುದರ ಮೂಲಕ ಮಳೆರಾಯನಿಗೆ ಪ್ರಾರ್ಥನೆ ಮಾಡಿದ ಘಟನೆ ನಡೆದಿದೆ. ಕಾಕತಾಳಿಯ ಎಂಬಂತೆ ಗ್ರಾಮಸ್ಥರು ಮದುವೆ ಮಾಡಿದ ಕೆಲ ಹೊತ್ತಿನಲ್ಲೇ ಮಳೆರಾಯ ಆಗಮಿಸಿ ಮದುವೆಗೆ ಆಶೀರ್ವಾದ ಮಾಡಿದಂತಿತ್ತು.

ಚಿಕ್ಕಬಳ್ಳಾಪುರ: ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ; ಕೆಲ ಹೊತ್ತಲ್ಲೇ ವರುಣನ ಆಗಮನ
ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 02, 2023 | 3:57 PM

Share

ಚಿಕ್ಕಬಳ್ಳಾಪುರ, ಸೆ.2: ಮಳೆಗಾಗಿ ರೈತರು ಮಾಡದ ಪ್ರಾರ್ಥನೆ ಇಲ್ಲ, ಬೇಡದ ದೇವರಿಲ್ಲ. ಅದರಂತೆ ಇದೀಗ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಾದ್ಯಂತ ಈ ಬಾರಿ ಮುಂಗಾರು ಮಳೆ(Rain) ಕೈಕೊಟ್ಟ ಕಾರಣ, ಭಿತ್ತನೆ ಮಾಡಿದ್ದ ರಾಗಿ, ಜೋಳ, ತೊಗರಿ, ನೆಲಗಡಲೆ ಸೇರಿದಂತೆ ಮಳೆಯಾಧಾರಿತ ಬೆಳೆಗಳು ಭೂಮಿಯಲ್ಲೇ ಕಮರಿ ಹೋಗಿವೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಜಿಲ್ಲೆಯ ವಿವಿಧಡೆ ಪೂಜೆ, ಪುನಸ್ಕಾರ, ಪ್ರಾರ್ಥನೆ ಮಾಡುವುದರ ಮೂಲಕ ಹಳೇ ಕಾಲದ ಸಂಪ್ರದಾಯ ಹಾಗೂ ನಂಬಿಕೆಗೆ ಜೋತು ಬಿದ್ದಿದ್ದು, ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ ಮಾಡಿದ್ದಾರೆ.

ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ

ಹೌದು, ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಕಟ್ಟಿಗೇನಹಳ್ಳಿ ಗ್ರಾಮದಲ್ಲಿ ಇಬ್ಬರು ಅಪ್ರಪಾಪ್ತ ಬಾಲಕರಿಗೆ ವಧು-ವರರ ವೇಷ ತೊಡಿಸಿ ಅದ್ಧೂರಿ ಮದುವೆ ಮಾಡುವುದರ ಮೂಲಕ ಮಳೆರಾಯನಿಗೆ ಪ್ರಾರ್ಥನೆ ಮಾಡಿದರು. ಗ್ರಾಮದ ಶಿವಾನಂದ ಎಂಬ ಬಾಲಕನಿಗೆ ಪಂಚೆ, ಶರ್ಟ್, ಪೇಟ ತೊಡಸಿ ವರನನ್ನಾಗಿ ಮಾಡಿದರೆ, ಮತ್ತೋರ್ವ ಬಾಲಕನಿಗೆ ಕುಪ್ಪಸ, ಸೀರೆ, ಜಡೆ ಧರಿಸಿ ಹೂ ಮುಡಿಸಿ ಮಂಗಳವಾಧ್ಯಗಳೊಂದಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿದರು.

ಇದನ್ನೂ ಓದಿ:ಬೆಂಗಳೂರು ಜನತೆಗೆ ಕೂಲ್ ಕೂಲ್ ನ್ಯೂಸ್​: ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ -ಈ ವಿಡಿಯೋ ವರದಿ ನೋಡಿ

ಇನ್ನು ಹೀಗೆ ಮಾಡುವುದರಿಂದ ಮಳೆ ಬರುತ್ತದೆನ್ನುವುದು ಗ್ರಾಮಸ್ಥರ ನಂಬಿಕೆಯಾಗಿದೆ. ಆದರೆ, ಕಾಕತಾಳಿಯ ಎಂಬಂತೆ ಗ್ರಾಮಸ್ಥರು ಮದುವೆ ಮಾಡಿದ ಕೆಲ ಹೊತ್ತಿನಲ್ಲೇ ಮಳೆರಾಯ ಆಗಮಿಸಿ ಮದುವೆಗೆ ಆಶೀರ್ವಾದ ಮಾಡಿದಂತಿತ್ತು. ಹೌದು, ಈ ಮೂಲಕ ದೇವರು ರೈತರ ಭೇಡಿಕೆಯನ್ನು ಈಡೇರಿಸಿದಂತಿದ್ದು. ಇನ್ನು ಅಷ್ಟೇ ಅಲ್ಲದೇ ಆಗಸ್ಟ್​ 31 ರಂದು ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಹುಡುಗನಿಗೆ ಹುಡುಗಿ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ. ಹೀಗಾಗಿ ಗ್ರಾಮಸ್ಥರೆಲ್ಲಾ ಸೇರಿ ಮದುವೆ ಮಾಡಿಸಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Sat, 2 September 23

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ