AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ; ಕೆಲ ಹೊತ್ತಲ್ಲೇ ವರುಣನ ಆಗಮನ

ಚಿಂತಾಮಣಿ ತಾಲ್ಲೂಕಿನ ಹಿರೇಕಟ್ಟಿಗೇನಹಳ್ಳಿ ಗ್ರಾಮದಲ್ಲಿ ಇಬ್ಬರು ಅಪ್ರಪಾಪ್ತ ಬಾಲಕರಿಗೆ ವಧು-ವರರ ವೇಷ ತೊಡಿಸಿ ಅದ್ಧೂರಿ ಮದುವೆ ಮಾಡುವುದರ ಮೂಲಕ ಮಳೆರಾಯನಿಗೆ ಪ್ರಾರ್ಥನೆ ಮಾಡಿದ ಘಟನೆ ನಡೆದಿದೆ. ಕಾಕತಾಳಿಯ ಎಂಬಂತೆ ಗ್ರಾಮಸ್ಥರು ಮದುವೆ ಮಾಡಿದ ಕೆಲ ಹೊತ್ತಿನಲ್ಲೇ ಮಳೆರಾಯ ಆಗಮಿಸಿ ಮದುವೆಗೆ ಆಶೀರ್ವಾದ ಮಾಡಿದಂತಿತ್ತು.

ಚಿಕ್ಕಬಳ್ಳಾಪುರ: ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ; ಕೆಲ ಹೊತ್ತಲ್ಲೇ ವರುಣನ ಆಗಮನ
ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Sep 02, 2023 | 3:57 PM

Share

ಚಿಕ್ಕಬಳ್ಳಾಪುರ, ಸೆ.2: ಮಳೆಗಾಗಿ ರೈತರು ಮಾಡದ ಪ್ರಾರ್ಥನೆ ಇಲ್ಲ, ಬೇಡದ ದೇವರಿಲ್ಲ. ಅದರಂತೆ ಇದೀಗ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಾದ್ಯಂತ ಈ ಬಾರಿ ಮುಂಗಾರು ಮಳೆ(Rain) ಕೈಕೊಟ್ಟ ಕಾರಣ, ಭಿತ್ತನೆ ಮಾಡಿದ್ದ ರಾಗಿ, ಜೋಳ, ತೊಗರಿ, ನೆಲಗಡಲೆ ಸೇರಿದಂತೆ ಮಳೆಯಾಧಾರಿತ ಬೆಳೆಗಳು ಭೂಮಿಯಲ್ಲೇ ಕಮರಿ ಹೋಗಿವೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಜಿಲ್ಲೆಯ ವಿವಿಧಡೆ ಪೂಜೆ, ಪುನಸ್ಕಾರ, ಪ್ರಾರ್ಥನೆ ಮಾಡುವುದರ ಮೂಲಕ ಹಳೇ ಕಾಲದ ಸಂಪ್ರದಾಯ ಹಾಗೂ ನಂಬಿಕೆಗೆ ಜೋತು ಬಿದ್ದಿದ್ದು, ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ ಮಾಡಿದ್ದಾರೆ.

ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ

ಹೌದು, ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಕಟ್ಟಿಗೇನಹಳ್ಳಿ ಗ್ರಾಮದಲ್ಲಿ ಇಬ್ಬರು ಅಪ್ರಪಾಪ್ತ ಬಾಲಕರಿಗೆ ವಧು-ವರರ ವೇಷ ತೊಡಿಸಿ ಅದ್ಧೂರಿ ಮದುವೆ ಮಾಡುವುದರ ಮೂಲಕ ಮಳೆರಾಯನಿಗೆ ಪ್ರಾರ್ಥನೆ ಮಾಡಿದರು. ಗ್ರಾಮದ ಶಿವಾನಂದ ಎಂಬ ಬಾಲಕನಿಗೆ ಪಂಚೆ, ಶರ್ಟ್, ಪೇಟ ತೊಡಸಿ ವರನನ್ನಾಗಿ ಮಾಡಿದರೆ, ಮತ್ತೋರ್ವ ಬಾಲಕನಿಗೆ ಕುಪ್ಪಸ, ಸೀರೆ, ಜಡೆ ಧರಿಸಿ ಹೂ ಮುಡಿಸಿ ಮಂಗಳವಾಧ್ಯಗಳೊಂದಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿದರು.

ಇದನ್ನೂ ಓದಿ:ಬೆಂಗಳೂರು ಜನತೆಗೆ ಕೂಲ್ ಕೂಲ್ ನ್ಯೂಸ್​: ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ -ಈ ವಿಡಿಯೋ ವರದಿ ನೋಡಿ

ಇನ್ನು ಹೀಗೆ ಮಾಡುವುದರಿಂದ ಮಳೆ ಬರುತ್ತದೆನ್ನುವುದು ಗ್ರಾಮಸ್ಥರ ನಂಬಿಕೆಯಾಗಿದೆ. ಆದರೆ, ಕಾಕತಾಳಿಯ ಎಂಬಂತೆ ಗ್ರಾಮಸ್ಥರು ಮದುವೆ ಮಾಡಿದ ಕೆಲ ಹೊತ್ತಿನಲ್ಲೇ ಮಳೆರಾಯ ಆಗಮಿಸಿ ಮದುವೆಗೆ ಆಶೀರ್ವಾದ ಮಾಡಿದಂತಿತ್ತು. ಹೌದು, ಈ ಮೂಲಕ ದೇವರು ರೈತರ ಭೇಡಿಕೆಯನ್ನು ಈಡೇರಿಸಿದಂತಿದ್ದು. ಇನ್ನು ಅಷ್ಟೇ ಅಲ್ಲದೇ ಆಗಸ್ಟ್​ 31 ರಂದು ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಹುಡುಗನಿಗೆ ಹುಡುಗಿ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ. ಹೀಗಾಗಿ ಗ್ರಾಮಸ್ಥರೆಲ್ಲಾ ಸೇರಿ ಮದುವೆ ಮಾಡಿಸಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Sat, 2 September 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ