AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ; ಕೆಲ ಹೊತ್ತಲ್ಲೇ ವರುಣನ ಆಗಮನ

ಚಿಂತಾಮಣಿ ತಾಲ್ಲೂಕಿನ ಹಿರೇಕಟ್ಟಿಗೇನಹಳ್ಳಿ ಗ್ರಾಮದಲ್ಲಿ ಇಬ್ಬರು ಅಪ್ರಪಾಪ್ತ ಬಾಲಕರಿಗೆ ವಧು-ವರರ ವೇಷ ತೊಡಿಸಿ ಅದ್ಧೂರಿ ಮದುವೆ ಮಾಡುವುದರ ಮೂಲಕ ಮಳೆರಾಯನಿಗೆ ಪ್ರಾರ್ಥನೆ ಮಾಡಿದ ಘಟನೆ ನಡೆದಿದೆ. ಕಾಕತಾಳಿಯ ಎಂಬಂತೆ ಗ್ರಾಮಸ್ಥರು ಮದುವೆ ಮಾಡಿದ ಕೆಲ ಹೊತ್ತಿನಲ್ಲೇ ಮಳೆರಾಯ ಆಗಮಿಸಿ ಮದುವೆಗೆ ಆಶೀರ್ವಾದ ಮಾಡಿದಂತಿತ್ತು.

ಚಿಕ್ಕಬಳ್ಳಾಪುರ: ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ; ಕೆಲ ಹೊತ್ತಲ್ಲೇ ವರುಣನ ಆಗಮನ
ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Sep 02, 2023 | 3:57 PM

Share

ಚಿಕ್ಕಬಳ್ಳಾಪುರ, ಸೆ.2: ಮಳೆಗಾಗಿ ರೈತರು ಮಾಡದ ಪ್ರಾರ್ಥನೆ ಇಲ್ಲ, ಬೇಡದ ದೇವರಿಲ್ಲ. ಅದರಂತೆ ಇದೀಗ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಾದ್ಯಂತ ಈ ಬಾರಿ ಮುಂಗಾರು ಮಳೆ(Rain) ಕೈಕೊಟ್ಟ ಕಾರಣ, ಭಿತ್ತನೆ ಮಾಡಿದ್ದ ರಾಗಿ, ಜೋಳ, ತೊಗರಿ, ನೆಲಗಡಲೆ ಸೇರಿದಂತೆ ಮಳೆಯಾಧಾರಿತ ಬೆಳೆಗಳು ಭೂಮಿಯಲ್ಲೇ ಕಮರಿ ಹೋಗಿವೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಜಿಲ್ಲೆಯ ವಿವಿಧಡೆ ಪೂಜೆ, ಪುನಸ್ಕಾರ, ಪ್ರಾರ್ಥನೆ ಮಾಡುವುದರ ಮೂಲಕ ಹಳೇ ಕಾಲದ ಸಂಪ್ರದಾಯ ಹಾಗೂ ನಂಬಿಕೆಗೆ ಜೋತು ಬಿದ್ದಿದ್ದು, ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ ಮಾಡಿದ್ದಾರೆ.

ಮಳೆಗಾಗಿ ಪ್ರಾರ್ಥಿಸಿ ಗಂಡು ಮಕ್ಕಳಿಗೆ ಮದುವೆ

ಹೌದು, ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಕಟ್ಟಿಗೇನಹಳ್ಳಿ ಗ್ರಾಮದಲ್ಲಿ ಇಬ್ಬರು ಅಪ್ರಪಾಪ್ತ ಬಾಲಕರಿಗೆ ವಧು-ವರರ ವೇಷ ತೊಡಿಸಿ ಅದ್ಧೂರಿ ಮದುವೆ ಮಾಡುವುದರ ಮೂಲಕ ಮಳೆರಾಯನಿಗೆ ಪ್ರಾರ್ಥನೆ ಮಾಡಿದರು. ಗ್ರಾಮದ ಶಿವಾನಂದ ಎಂಬ ಬಾಲಕನಿಗೆ ಪಂಚೆ, ಶರ್ಟ್, ಪೇಟ ತೊಡಸಿ ವರನನ್ನಾಗಿ ಮಾಡಿದರೆ, ಮತ್ತೋರ್ವ ಬಾಲಕನಿಗೆ ಕುಪ್ಪಸ, ಸೀರೆ, ಜಡೆ ಧರಿಸಿ ಹೂ ಮುಡಿಸಿ ಮಂಗಳವಾಧ್ಯಗಳೊಂದಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿದರು.

ಇದನ್ನೂ ಓದಿ:ಬೆಂಗಳೂರು ಜನತೆಗೆ ಕೂಲ್ ಕೂಲ್ ನ್ಯೂಸ್​: ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ -ಈ ವಿಡಿಯೋ ವರದಿ ನೋಡಿ

ಇನ್ನು ಹೀಗೆ ಮಾಡುವುದರಿಂದ ಮಳೆ ಬರುತ್ತದೆನ್ನುವುದು ಗ್ರಾಮಸ್ಥರ ನಂಬಿಕೆಯಾಗಿದೆ. ಆದರೆ, ಕಾಕತಾಳಿಯ ಎಂಬಂತೆ ಗ್ರಾಮಸ್ಥರು ಮದುವೆ ಮಾಡಿದ ಕೆಲ ಹೊತ್ತಿನಲ್ಲೇ ಮಳೆರಾಯ ಆಗಮಿಸಿ ಮದುವೆಗೆ ಆಶೀರ್ವಾದ ಮಾಡಿದಂತಿತ್ತು. ಹೌದು, ಈ ಮೂಲಕ ದೇವರು ರೈತರ ಭೇಡಿಕೆಯನ್ನು ಈಡೇರಿಸಿದಂತಿದ್ದು. ಇನ್ನು ಅಷ್ಟೇ ಅಲ್ಲದೇ ಆಗಸ್ಟ್​ 31 ರಂದು ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಹುಡುಗನಿಗೆ ಹುಡುಗಿ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ. ಹೀಗಾಗಿ ಗ್ರಾಮಸ್ಥರೆಲ್ಲಾ ಸೇರಿ ಮದುವೆ ಮಾಡಿಸಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Sat, 2 September 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್