AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು; ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ

ಜನಪ್ರಿಯ ಪ್ರವಾಸಿ ಸ್ಥಳಗಳಾದ ನಂದಿಗಿರಿಧಾಮ ಮತ್ತು ಸ್ಕಂದಗಿರಿ ಬೆಟ್ಟಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಜುಲೈ 2 ರಂದು ಬೆಳಿಗ್ಗೆ 6 ರಿಂದ ಜುಲೈ 3 ರ ಸಂಜೆ 6 ರವರೆಗೆ ನಿರ್ಬಂಧವು ಜಾರಿಯಲ್ಲಿರುತ್ತದೆ.

ಚಿಕ್ಕಬಳ್ಳಾಪುರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು; ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ
ರಾಷ್ಟ್ರಪತಿ ದ್ರೌಪದಿ ಮುರ್ಮು
ಗಣಪತಿ ಶರ್ಮಾ
|

Updated on:Jul 01, 2023 | 5:56 PM

Share

ಚಿಕ್ಕಬಳ್ಳಾಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕರ್ನಾಟಕದ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರಿಯ ಪ್ರವಾಸಿ ಸ್ಥಳಗಳಾದ ನಂದಿಗಿರಿಧಾಮ (Nandigiridhama) ಮತ್ತು ಸ್ಕಂದಗಿರಿ ಬೆಟ್ಟಗಳಲ್ಲಿ (Skandagiri Hills) ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಜುಲೈ 2 ರಂದು ಬೆಳಿಗ್ಗೆ 6 ರಿಂದ ಜುಲೈ 3 ರ ಸಂಜೆ 6 ರವರೆಗೆ ನಿರ್ಬಂಧವು ಜಾರಿಯಲ್ಲಿರುತ್ತದೆ. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿಎನ್‌ ಆದೇಶ ಹೊರಡಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರಾಷ್ಟ್ರಪತಿಗಳು ಮುದ್ದೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯ ಕಾರಣಕ್ಕೆ ನಂದಿಗಿರಿಧಾಮ ಮತ್ತು ಸ್ಕಂದಗಿರಿ ಬೆಟ್ಟಗಳಿಗೆ ಸಾರ್ವಜನಿಕರ ಪ್ರವೇಶವನ್ನು ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಕಲಂ 144(3)ರ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರಪತಿಗಳು ಜುಲೈ 3 ರಂದು ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ ‘ಸತ್ಯಸಾಯಿ ಯೂನಿವರ್ಸಿಟಿ ಫಾರ್ ಹ್ಯೂಮನ್ ಎಕ್ಸಲೆನ್ಸ್’​​​ನ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: Chikkaballapur: ಮೋಜು ಮಸ್ತಿಗೆ ಸಿಕ್ಕ ಸಿಕ್ಕ ಬೈಕ್​ಗಳನ್ನು ಕದ್ದು ಮಾರಾಟ! ಇಬ್ಬರು ಆರೋಪಿಗಳು ಅರೆಸ್ಟ್​

ಪ್ರಧಾನಿ ನರೇಂದ್ರ ಮೋದಿ ಕೂಡ ಕಳೆದ ಮಾರ್ಚ್​ 25ರಂದು ಮುದ್ದೇನಹಳ್ಳಿಗೆ ಭೇಟಿ ನೀಡಿದ್ದರು. ಸತ್ಯಸಾಯಿ ಸಾಯಿ ಲೋಕಸೇವಾ ಗ್ರಾಮಕ್ಕೆ ತೆರಳಿ ಖಾಸಗಿ ವೈದ್ಯಕೀಯ ಕಾಲೇಜು ಉದ್ಘಾಟನೆ ಮಾಡಿದ್ದರು. ಆ ಸಂದರ್ಭದಲ್ಲಿಯೂ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:55 pm, Sat, 1 July 23

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ