Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿವಾದ: ಮಕ್ಕಳಿಲ್ಲದ ಮೊದಲ ಪತ್ನಿಯನ್ನು ಸಾಯಿಸಿದ ಗಂಡ ಮತ್ತು 2ನೇ ಹೆಂಡತಿ ಮಗ

ಮೊದಲ ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿ ಕೊಂದ ಪತಿ ಮತ್ತು ಮಗ - ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ದೇಹವನ್ನು ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಕೊಲೆ ಮಾಡಿದ ಗಂಡ ಮುನಿರೆಡ್ಡಿ ಹಾಗೂ ಆತನ ಎರಡನೇ ಹೆಂಡತಿಯ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಆಸ್ತಿ ವಿವಾದ: ಮಕ್ಕಳಿಲ್ಲದ ಮೊದಲ ಪತ್ನಿಯನ್ನು ಸಾಯಿಸಿದ ಗಂಡ ಮತ್ತು 2ನೇ ಹೆಂಡತಿ ಮಗ
ಮಕ್ಕಳಿಲ್ಲದ ಮೊದಲ ಪತ್ನಿಯನ್ನು ಸಾಯಿಸಿದ ಗಂಡ ಮತ್ತು 2ನೇ ಹೆಂಡತಿ ಮಗ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 25, 2024 | 4:53 PM

ಆಸ್ತಿ ವಿವಾದದ ಹಿನ್ನೆಲೆಯಲ್ಲಿ (Property dispute) ಮೊದಲನೇ ಹೆಂಡತಿಯನ್ನು (Wife) ಗಂಡ (Husband) ಹಾಗೂ ಎರಡನೇ ಹೆಂಡತಿಯ ಮಗ ( Son) ಸೇರಿಕೊಂಡು ಮಚ್ಚಿನಿಂದ ಕೊಚ್ಚಿ ಕೊಲೆ (Murder) ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ (Sidlaghatta taluk in chikkaballapur) ಸೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಐವತ್ತು ವರ್ಷದ ಪದ್ಮಮ್ಮ ಕೊಲೆಯಾದ ಮಹಿಳೆ. ಇನ್ನು 60 ವರ್ಷದ ಮುನಿರೆಡ್ಡಿ ಹಾಗೂ ಈತನ ಎರಡನೇ ಪತ್ನಿಯ ಮಗ ಗಿರೀಶ್ ಕೊಲೆ ಮಾಡಿದ ಆರೋಪಿಗಳು. ಮೊದಲನೇ ಹೆಂಡತಿ ಪದ್ಮಮ್ಮಳಿಗೆ ಇಬ್ಬರು ಗಂಡು ಮಕ್ಕಳಿದ್ದು ದುರಾದೃಷ್ಟವಶಾತ್ ಇಬ್ಬರೂ ಗಂಡು ಮಕ್ಕಳು ಸಾವನ್ನಪ್ಪಿದ್ದಾರೆ. ಹಾಗಾಗಿ ಪದ್ಮಮ್ಮಳಿಗೆ ಕೊಟ್ಟಿದ್ದ ಆಸ್ತಿಯನ್ನು ಗಂಡ ವಾಪಸ್ ಕೊಡುವಂತೆ ಪಟ್ಟು ಹಿಡಿದಿದ್ದ.

ಮಕ್ಕಳಿಲ್ಲದ ನಿನಗೆ ಏಕೆ ಆಸ್ತಿ ಬೇಕು ನಾನು ನಿನಗೆ ಆಸ್ತಿ ಕೊಡುವುದಿಲ್ಲ ಎಂದು ಗಲಾಟೆ ಮಾಡಿದ್ದಾನೆ. ಇದೇ ವಿಚಾರ ನ್ಯಾಯಾಲಯದ ಮೆಟ್ಟಿಲು ಸಹ ಏರಿದೆ. ಆದರೆ ಇಂದು ಬೆಳಗ್ಗೆ ಗಂಡ ಮುನಿರೆಡ್ಡಿ ಮಚ್ಚಿನಿಂದ ಕೊಚ್ಚಿ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ದೇಹವನ್ನು ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಕೊಲೆ ಮಾಡಿದ ಗಂಡ ಮುನಿರೆಡ್ಡಿ ಹಾಗೂ ಆತನ ಎರಡನೇ ಹೆಂಡತಿಯ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

Also Read: ಅಜ್ಜವಾರ – ಹಾಲಿಗೆ ನೀರು ಸೇರಿಸಿ ಕೆಎಂಎಫ್​​ಗೆ ಭಾರೀ ವಂಚನೆ, ಹಾಲಿನ ಡೈರಿ ಗುಮಾಸ್ತ-ಕಾರ್ಯದರ್ಶಿ ಸಸ್ಪೆಂಡ್​

ಇನ್ನು ಮೃತ ಪದ್ಮಮ್ಮಳ ಇಬ್ಬರು ಗಂಡು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ, ಆದರೂ ಪದ್ಮಮ್ಮ ಕಷ್ಟಪಟ್ಟು ದುಡಿದು ಸ್ವಂತ ಮನೆ ನಿರ್ಮಾಣ ಮಾಡುತ್ತಿದ್ದಳು. ಇಂತಹದರಲ್ಲಿ ವಿಚ್ಚೇದಿತ ಗಂಡ ಕರುಣೆ ಇಲ್ಲದ ಕಟುಕನಂತೆ ಬರ್ಬರವಾಗಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಇನ್ನು ಕೊಲೆಗೆ ಸಾಥ್ ನೀಡಿದ ಮಗ ಗಿರೀಶ್‌ನನ್ನು ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪೊಲೀಸರು ಕೊಲೆ ಪ್ರಕರಣ ದಾಖಲು ಮಾಡಿಕೊಂಡು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:46 am, Tue, 25 June 24

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ