AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ -ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದ ಬೆಂಗಳೂರಿನ ಯುವತಿ ಸಾವು

Road Accident: ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದಾಗ ಚೈತ್ರಾ ಸಾವಿಗೀಡಾಗಿದ್ದಾರೆ.

Chikkaballapur: ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ -ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದ ಬೆಂಗಳೂರಿನ ಯುವತಿ ಸಾವು
ಟಿಪ್ಪರ್ ಡಿಕ್ಕಿ, ಸ್ನೇಹಿತನ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ಯುವತಿ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Sep 16, 2022 | 4:32 PM

Share

ಚಿಕ್ಕಬಳ್ಳಾಪುರ: ಟಿಪ್ಪರ್ ವಾಹನ ಡಿಕ್ಕಿಯಾಗಿ (Road Accident) ಸ್ನೇಹಿತನ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ (Chikkaballapur) ವಾಪಸಂದ್ರ ಬ್ರಿಡ್ಜ್​ ಬಳಿ ನಡೆದಿದೆ. ಚೈತ್ರಾ (19) ದುರ್ಮರಣಕ್ಕೀಡಾದ ವಿದ್ಯಾರ್ಥಿನಿ.

ಪಿಕನಿಕ್ ಬಂದು ಹೆದ್ದಾರಿಯಲ್ಲಿ ಹೆಣವಾದ ವಿದ್ಯಾರ್ಥಿನಿ

ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ (Bangalore girl) ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದಾಗ ಚೈತ್ರಾ ಸಾವಿಗೀಡಾಗಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಲ್ಲಿ ಸರಣಿ ಅಪಘಾತ, ಇಬ್ಬರು ದುರ್ಮರಣ

ದಾವಣಗೆರೆ: ದಾವಣಗೆರೆ ಹೊರವಲಯದ ಕಲ್ಪನಹಳ್ಳಿ ಬಳಿ ಟ್ರ್ಯಾಕ್ಟರ್​​ ಮತ್ತು ಬೈಕ್​ಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಶಿಕ್ಷಕಿ ಜ್ಯೋತಿ (43) ಮತ್ತು ಬೈಕ್​ ಸವಾರ ಮಂಜುನಾಥ್ ​(68) ಸಾವಿಗೀಡಾಗಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಮೊಹಮ್ಮದ್ ಮೀರನ್​ಗೆ ತೀವ್ರ ಗಾಯಗಳಾಗಿವೆ.

ಶಿಕ್ಷಕಿ ಜ್ಯೋತಿ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಲ್ಲಿ ಇರುವಾಗಲೇ ಜ್ಯೋತಿ ಪತಿಗೆ ಹೃದಯಾಘಾತವಾಗಿದೆ. ದಾವಣಗೆರೆ ಆಸ್ಪತ್ರೆಗೆ ಆ್ಯಂಬುಲೆನ್ಸ್​ನಲ್ಲಿ ಕರೆತರುವಾಗ ಈ ಅವಘಡ ನಡೆದಿದೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:07 pm, Fri, 16 September 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ