AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ: ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು

ಟಿವಿ9 ಕನ್ನಡದಲ್ಲಿ ವರದಿ ಪ್ರಕಟವಾದ ನಂತರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಎನ್.ಲೋಕೇಶ್ ಮತ್ತು ಇತರ ಅಧಿಕಾರಿಗಳು ಬುಧವಾರ ಪರಿಶೀಲಿಸಿದರು

ನಂದಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ: ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು
ನಂದಿ ಗಿರಿಧಾಮದ ರಸ್ತೆ ಮೇಲೆ ಕುಸಿದಿರುವ ಮಣ್ಣು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 01, 2021 | 6:23 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ನಂದಿಗಿರಿಧಾಮ ಸೇರಿದಂತೆ ಪಂಚಗಿರಿಧಾಮಗಳ ಸಾಲಿನಲ್ಲಿ ನಡೆಯುತ್ತಿರುವ ಕಲ್ಲು ಕ್ವಾರಿಗಳಿಂದ ಪರಿಸರಕ್ಕೆ ಆಗಿರುವ ಹಾನಿಯ ಕುರಿತು ಟಿವಿ9 ಕನ್ನಡದಲ್ಲಿ ವರದಿ ಪ್ರಕಟವಾದ ನಂತರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಎನ್.ಲೋಕೇಶ್ ಮತ್ತು ಇತರ ಅಧಿಕಾರಿಗಳು ಬುಧವಾರ ಪರಿಶೀಲಿಸಿದರು. ಕಣಿವೆನಾರಾಯಣಪುರದ ಬಳಿ 17 ಕಲ್ಲು ಕ್ವಾರಿ ಹಾಗೂ 7 ಕ್ರಷರ್​ಗಳಿವೆ.

ಕಲ್ಲು ಗಣಿಗಾರಿಕೆಯಿಂದ ನಂದಿ ಬೆಟ್ಟಕ್ಕೆ ಹಾನಿಯಾಗುತ್ತಿರುವ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಗಣಿ ಖಾತೆ ಸಚಿವ ಹಾಲಪ್ಪ ಆಚಾರ್ ನಿಯಮಗಳನ್ನು ಯಾರೇ ಉಲ್ಲಂಘಿಸಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲಾವುದು ಎಂದರು. ನಂದಿಬೆಟ್ಟಕ್ಕೆ ಭಾನುವಾರ ನಾನೇ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.

ನಂದಿಬೆಟ್ಟಕ್ಕೆ 20 ದಿನ ಪ್ರವೇಶ ಬಂದ್ ನಂದಿ ಗಿರಿಧಾಮಲ್ಲಿ ಗುಡ್ಡ ಕುಸಿದು ರಸ್ತೆ ಕೊಚ್ಚಿ ಹೋದ ಹಿನ್ನಲೆಯಲ್ಲಿ ಪ್ರವಾಸಿಗರ ಹಿತದೃಷ್ಟಿಯಿಂದ 20 ದಿನಗಳ ಕಾಲ ನಂದಿ ಗಿರಿಧಾಮ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಟಿವಿ9 ಡಿಜಿಟಲ್​ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ.ಆರ್ ಹೇಳಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರಸ್ತೆ ಕೊಚ್ಚಿ ಹೋಗಿದ್ದು, ಶಾಶ್ವತ ಕಾಮಗಾರಿ ಮುಗಿಯತನಕ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಾಗಿ ಗಿರಿಧಾಮದ ಮೇಲೆರುವ ವಸತಿ ಗೃಹಗಳಿಗೆ ಅವಕಾಶ ಇಲ್ಲ. ನಿನ್ನೆ ರಾತ್ರಿ ತಂಗಿದ್ದವರನ್ನು ಪರ್ಯಾಯ ಮಾರ್ಗದ ಮೂಲಕ ಕೆಳಗಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

(Senior officials from Geological Department Visit Nandi Hills to inspect illegal quarries)

ಇದನ್ನೂ ಓದಿ: Nandi Hills: ನಂದಿಬೆಟ್ಟದ ವಾಹನ ನಿಲುಗಡೆ ಸ್ಥಳದಲ್ಲಿ ಕುಸಿತ; ಪ್ರಾಣಹಾನಿ ಸಂಭವಿಸಿಲ್ಲ

ಇದನ್ನೂ ಓದಿ: ಗುಡ್ಡ ಕುಸಿತ ಹಿನ್ನೆಲೆ ನಂದಿಬೆಟ್ಟಕ್ಕೆ 20 ದಿನ ಪ್ರವೇಶ ಬಂದ್: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​