AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದ ರೀತಿಯಲ್ಲಿ 7 ನವಿಲುಗಳು ಸಾವು; ತೋಟದ ಬೆಳೆ ತಿನ್ನಲು ಬಂದಾಗ ವಿಷ ಇಟ್ಟಿರುವ ಶಂಕೆ

ತೋಟದ ಬೆಳೆ ತಿನ್ನಲು ಬಂದಾಗ ವಿಷ ಇಟ್ಟು 7 ನವಿಲುಗಳನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಶಿಡ್ಲಘಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೇಸ್‌ ದಾಖಲಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ತನಿಖೆಗೆ ಮುಂದಾಗಿದ್ದಾರೆ.

ಅನುಮಾನಾಸ್ಪದ ರೀತಿಯಲ್ಲಿ 7 ನವಿಲುಗಳು ಸಾವು; ತೋಟದ ಬೆಳೆ ತಿನ್ನಲು ಬಂದಾಗ ವಿಷ ಇಟ್ಟಿರುವ ಶಂಕೆ
7 ನವಿಲುಗಳು ಸಾವು
TV9 Web
| Edited By: |

Updated on:Mar 11, 2022 | 4:31 PM

Share

ಚಿಕ್ಕಬಳ್ಳಾಪುರ: ಅನುಮಾನಾಸ್ಪದ ರೀತಿಯಲ್ಲಿ 7 ನವಿಲುಗಳು (peacock) ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿ ಬಳಿ ನಡೆದಿದೆ. ಗ್ರಾಮದ ಸರ್ವೆ ನಂಬರ್ ಜಮೀನಿನಲ್ಲಿ ನವಿಲುಗಳು ಮೃತಪಟ್ಟಿವೆ(Death). ತೋಟದ ಬೆಳೆ ತಿನ್ನಲು ಬಂದಾಗ ವಿಷ ಇಟ್ಟು 7 ನವಿಲುಗಳನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಶಿಡ್ಲಘಟ್ಟ ಅರಣ್ಯ ಇಲಾಖೆ ಅಧಿಕಾರಿಗಳು (Forest department) ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೇಸ್‌ ದಾಖಲಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ತನಿಖೆಗೆ ಮುಂದಾಗಿದ್ದಾರೆ.

ಅಪರಿಚಿತ ವಾಹನ ಹರಿದು ಎರಡು ವರ್ಷದ ಚಿರತೆ ದಾರುಣ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 44ರ ಬಳಿ ಚಿರತೆ ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಎರಡು ವರ್ಷದ ಹೆಣ್ಣು ಚಿರತೆ ಮೃತಪಟ್ಟಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಕಾಡಿನಲ್ಲಿ ಅನ್ನ, ಆಹಾರ ಇಲ್ಲದೆ ರಸ್ತೆಗೆ ಬಂದಿದ್ದ ಚಿರತೆ ಸಾವನ್ನಪ್ಪಿದೆ. ಚಿರತೆ ಮೃತಪಟ್ಟ ಜಾಗದಲ್ಲಿ ಹಲವಾರು ಕಾಡು ಪ್ರಾಣಿಗಳು ಸಾವನಪ್ಪಿವೆ. ಕಳೆದ ಎರಡು ವರ್ಷದಲ್ಲಿ 6 ಕಾಡು ಪ್ರಾಣಿಗಳು ಸಾವನ್ನಪ್ಪಿವೆ.

ಒಂದು ಕಡೆಯಿಂದ ಇನ್ನೊಂದು ಕಡೆ ಸಂಚರಿಸುವ ಕಾಡು ಪ್ರಾಣಿಗಳು ಸಾವನ್ನಪ್ಪುತ್ತವೆ. ಈಗಾಗಲೇ ಇದೇ ಜಾಗದಲ್ಲಿ ಜಿಂಕೆ, ಸಾರಂಗ, ಕರಡಿ ಹಾಗೂ ಚಿರತೆ ಮೃತಪಟ್ಟಿವೆ. ಹೀಗಾಗಿ ಅರಣ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ 44 ಹಾದು ಹೋಗಿದ್ದು, ಹೆದ್ದಾರಿಗೆ ಅಂಡರ್ ಪಾಸ್ ಮಾಡಿಕೊಡುವಂತೆ ಅರಸಲನ್ ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆದ್ದಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ:

Tractor accident: ಓವರ್ ಲೋಡ್ ಧಾವಂತದಿಂದ​ ಟ್ರ್ಯಾಕ್ಟರ್ ಪಲ್ಟಿ -ನಿಶ್ಚಿತಾರ್ಥಕ್ಕೆ ಹೊರಟಿದ್ದ 4 ಮಂದಿ ಸಾವು

viral video: ಜಿಂಕೆಯನ್ನು ಗಾಳಿಯಲ್ಲಿ ಹಾರಿ ಬೇಟೆಯಾಡಿದ ಚಿರತೆ; ಇಲ್ಲಿದೆ ಅಪರೂಪದ ದೃಶ್ಯ

Published On - 4:19 pm, Fri, 11 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?