ಚಿಕ್ಕಬಳ್ಳಾಪುರದಲ್ಲಿ ಬಸ್​ಗಳ ಕೊರತೆ: ಶಕ್ತಿ ಯೋಜನೆ ಜಾರಿಯಾದ ಮೊದಲ ದಿನವೇ ಮಹಿಳೆಯರ ಪರದಾಟ

ಶಕ್ತಿ ಯೋಜನೆ ಜಾರಿಯಾದ ಮೊದಲ ದಿನವೇ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಮಪರ್ಕ ಬಸ್​ಗಳಿಲ್ಲದೆ ಮಕ್ಕಳು ಮರಿಗಳನ್ನು ಎತ್ತಿಕೊಂಡು ಮಹಿಳಾ ಪ್ರಯಾಣಿಕರ ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ನೂರಾರು ಮಹಿಳೆಯರು ಬಸ್ ನಿಲ್ದಾಣದಲ್ಲಿ ಬಿಡು ಬಿಟ್ಟಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಬಸ್​ಗಳ ಕೊರತೆ: ಶಕ್ತಿ ಯೋಜನೆ ಜಾರಿಯಾದ ಮೊದಲ ದಿನವೇ ಮಹಿಳೆಯರ ಪರದಾಟ
ಶಕ್ತಿ ಯೋಜನೆ ಜಾರಿಯಾದ ಮೊದಲ ದಿನವೇ ಚಿಕ್ಕಬಳ್ಳಾಪುರದಲ್ಲಿ ಬಸ್ ಇಲ್ಲದೆ ಮಹಿಳೆಯರ ಪರದಾಟ
Follow us
|

Updated on:Jun 11, 2023 | 10:39 PM

ಚಿಕ್ಕಬಳ್ಳಾಫುರ: ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಶಕ್ತಿ ಯೋಜನೆಗೆ (Shakti Scheme) ಇಂದು ಚಾಲನೆ ನೀಡಿದೆ. ಆದರೆ ಕೆಲವೊಂದು ಗ್ರಾಮಗಳಲ್ಲಿ ಸರ್ಕಾರಿ ಬಸ್​ಗಳ ಸಂಪರ್ಕವೇ ಇಲ್ಲ ಎಂಬ ಆರೋಪ ಒಂದೆಡೆಯಾದರೆ, ಇನ್ನೊಂದೆಡೆ ಹೆಚ್ಚುವರಿ ಬಸ್​ಗಳನ್ನು ಹಾಕದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಈ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರ (Chikkaballapur) ಕೆಎಸ್​ಆರ್​ಟಿಸಿ (KSRTC) ಬಸ್ ನಿಲ್ದಾಣದಲ್ಲಿ.

ಶಕ್ತಿ ಯೋಜನೆ ಜಾರಿಯಾದ ಮೊದಲ ದಿನವೇ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಮಪರ್ಕ ಬಸ್​ಗಳಿಲ್ಲದೆ ಮಕ್ಕಳು ಮರಿಗಳನ್ನು ಎತ್ತಿಕೊಂಡು ಮಹಿಳಾ ಪ್ರಯಾಣಿಕರ ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ನೂರಾರು ಮಹಿಳೆಯರು ಬಸ್ ನಿಲ್ದಾಣದಲ್ಲಿ ಬಿಡು ಬಿಟ್ಟಿದ್ದಾರೆ. ಕಳೆದ ಎರಡು ಮೂರು ಗಂಟೆಗಳಿಂದ ಜನಸಂಖ್ಯೆ ಹೆಚ್ಚಾಗುತ್ತಿದ್ದರೂ ಹೆಚ್ಚುವರಿ ಬಸ್​ಗಳನ್ನು ಹಾಕದೆ ಅಧಿಕಾರಿಗಳು ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.

ಇದನ್ನೂ ಓದಿ: Shakti Scheme: ಪತ್ನಿಗೆ ಫ್ರೀ ಟಿಕೆಟ್, ಒಂದು ಪ್ಲೇಟ್ ತಿಂಡಿಯ ಹಣ ಉಳಿಯಿತು ಎಂದ ಪತಿ

ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ಮಹಿಳೆಯರು

ಚಿಕ್ಕಬಳ್ಳಾಪುರದಲ್ಲಿ ಮಾತ್ರವಲ್ಲದೆ, ಮಂಡ್ಯದಲ್ಲೂ ಬಸ್​ಗಳ ಕೊರತೆ ಎದ್ದುಕಂಡಿದೆ. ಶಕ್ತಿ ಯೋಜನೆ ಜಾರಿಯಾದ ಮೊದಲ ದಿನವೇ ಸರ್ಕಾರದ ವಿರುದ್ದ ಮಂಡ್ಯದ ಮದ್ದೂರಿನ ಮಹಿಳೆಯರು ಆಕ್ರೋಶ ಹೊರಹಾಕಿದ್ದು, ಬಸ್ ಬರುತ್ತಿಲ್ಲ ಅಂದಮೇಲೆ ಶಕ್ತಿ ಯೋಜನೆ ಜಾರಿ ಮಾಡಿ ಪ್ರಯೋಜನವೇನು ಪ್ರಶ್ನಿಸಿದ್ದಾರೆ. ಬಸ್​ಗಳ ಕೊರತೆ ಹಿನ್ನೆಲೆ ಬೆಂಗಳೂರು, ತುಮಕೂರು ಕಡೆ ತೆರಳಲು ಸರಿಯಾದ ಬಸ್​ ಇಲ್ಲದೆ ಸುಮಾರು 40ಕ್ಕೂ ಹೆಚ್ಚು ಮಹಿಳಾ ಪ್ರಯಾಣಿಕರು ಬಸ್‌ಗಾಗಿ ಕಾದುಕುಳಿತ ಪ್ರಸಂಗ ನಡೆಯಿತು.

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಚಾಲನೆ ಸಿಕ್ಕಿದೆ. ಇದೇ ವೇಳೆ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಯ ಲೋಗೋ, ಸ್ಟಿಕರ್ ಹಾಗೂ ಸ್ಮಾರ್ಟ್​ ಕಾರ್ಡ್​ ಮಾದರಿಯನ್ನು ಬಿಡುಗಡೆಗೊಳಿಸಲಾಯಿತು. ಇನ್ನು ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್​ ನೀಡಲಾಗಿದೆ. ಇದರೊಂದಿಗೆ ಇಂದಿನಿಂದ ಸರ್ಕಾರಿ ಸಾರಿಗೆ ಹಾಗೂ ಬಿಎಂಟಿಸಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ರಾಜ್ಯದ ಮೂಲೆ-ಮೂಲೆಗಳಲ್ಲಿ ಪ್ರಯಾಣಿಸಬಹುದಾಗಿದೆ.

ಫ್ರೀ ಬಸ್ ಪಾಸ್​ಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು. ಇದಕ್ಕೆ ಮೂರು ತಿಂಗಳು ಸಮಯ ನೀಡಲಾಗಿದ್ದು, ಬಳಿಕ ಮಹಿಳೆಯರು ಸ್ಮಾರ್ಟ್ ಕಾರ್ಡ್ ತೋರಿಸಿ ಬಸ್​ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಇನ್ನು ಬಿಎಂಟಿಸಿ, KSRTC ಸೇರಿ 4 ಸಾರಿಗೆ ಸಂಸ್ಥೆಯಲ್ಲಿ ಫ್ರೀ ಪ್ರಯಾಣಕ್ಕೆ ಅವಕಾಶವಿದ್ದು, ಐಷಾರಾಮಿ ಬಸ್​ಗಳಾದ ರಾಜಹಂಸ, Non AC ಸ್ಲೀಪರ್, AC ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್​ನಲ್ಲಿ ಉಚಿತ ಬಸ್ ಪಯಾಣಕ್ಕೆ ಅವಕಾಶವಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Sun, 11 June 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ