AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದುರಾಶ್ವತ್ಥ: ಅಜಾನ್ ಕೇಳಿ ಭಾಷಣ ಮೊಟಕುಗೊಳಿಸಿ, ಮೌನಕ್ಕೆ ಶರಣಾದ ಸಿದ್ದರಾಮಯ್ಯ!

ಅಜಾನ್ ಮುಗಿದ ಬಳಿಕ ಭಾಷಣ ಮುಂದುವರೆಸಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಆರ್.ಎಸ್. ಎಸ್ ನ ಯಾವುದೆ ನಾಯಕರು ಭಾಗವಹಿಸಲಿಲ್ಲ.

ವಿದುರಾಶ್ವತ್ಥ: ಅಜಾನ್ ಕೇಳಿ ಭಾಷಣ ಮೊಟಕುಗೊಳಿಸಿ, ಮೌನಕ್ಕೆ ಶರಣಾದ ಸಿದ್ದರಾಮಯ್ಯ!
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Aug 11, 2022 | 8:08 PM

Share

ಚಿಕ್ಕಬಳ್ಳಾಪುರ: ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ವಿದುರಾಶ್ವತ್ಥದ ಕಾಂಗ್ರೆಸ್ ವೇದಿಕೆಯಲ್ಲಿ ಭಾಷಣ ಮಾಡುವಾಗ ಅಜಾನ್ ಕೂಗಿದ ಹಿನ್ನಲೆ ಭಾಷಣ ಮೊಟಕುಗೊಳಿಸಿ ಮೌನಕ್ಕೆ ಶರಣಾದ ಘಟನೆ ನಡೆಯಿತು. ಅಜಾನ್ ಮುಗಿಯುವವರೆಗೂ ಸಿದ್ದರಾಮಯ್ಯ ಭಾಷಣ ಆರಂಭಿಸಲಿಲ್ಲ.

ಅಜಾನ್ ಮುಗಿದ ಬಳಿಕ ಭಾಷಣ ಮುಂದುವರೆಸಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಆರ್​ಎಸ್​ಎಸ್ ನ ಯಾವುದೆ ನಾಯಕರು ಭಾಗವಹಿಸಲಿಲ್ಲ. ವಿಶ್ವ ಹಿಂದೂ ಪರಿಷತ್ ನವರು ಹೋರಾಟ ಮಾಡಲಿಲ್ಲ. ಆರ್​ಎಸ್​ಎಸ್ ನವರು ಬ್ರಿಟಿಷರ ಜೊತೆ ಶಾಮೀಲು ಆಗಿದ್ರು. ಆದ್ರೆ ಈಗ ಬಿಜೆಪಿ, ಆರ್​ಎಸ್​ಎಸ್ ಈಗ ದೇಶ ಭಕ್ತಿ ಬಗ್ಗೆ ಪಾಠ ಹೇಳ್ತಿದ್ದಾರೆ. ಬಿಜೆಪಿ ಆರ್​ಎಸ್​ಎಸ್ ನವರು ಡೋಂಗಿಗಳು, ಇವರಿಗೆ ನಾಚಿಕೆ ಆಗಲ್ವಾ ಎಂದು ವಾಗ್ದಾಳಿ ನಡೆಸಿದ್ದಾರೆ.

ತ್ರಿವರ್ಣ ಧ್ವಜ ಈ ದೇಶದ ಹೆಮ್ಮೆ. ಆದ್ರೆ ಧ್ವಜವನ್ನೆ ವಿರೋಧಿಸಿದ್ದ ಬಿಜೆಪಿ ಈಗ ಹರ್ ಘರ್ ತಿರಂಗಾ ಎನ್ನುತ್ತಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದಿಯಾ? ಬರಿ ನಾಟಕವಾಡ್ತೀರಲ್ಲ ನಿಮಗೆ ನಾಚಿಕೆ ಆಗಲ್ವಾ? ದೇಶವನ್ನು ಆಳಲು ಬಿಜೆಪಿ ನಾಲಾಯಕ್ ಎಂದು ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ವಿತರಣೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸಬ್ ಕಾ ನಾಶ ಆಗಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ವಿತರಣೆ ಮಾಡ್ತೇವೆ. ಬಹುಮತ ಇದೆ ಅನ್ನೊ ಕಾರಣಕ್ಕೆ ಜನ ವಿರೋಧಿ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ. ಇದು 40ಪರ್ಸೆಂಟ್ ಕಮಿಷನ್ ಸರ್ಕಾರ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಮೋದಿ ದ್ವಿಮುಖ ನೀತಿ ಹೊಂದಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನೂ ದೇಶದಲ್ಲಿ ಅಸಮಾನತೆ ಹೋಗಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಸಮಾನತೆ ಹೋಗಲಾಡಿಸಲು ಸಾಧ್ಯ. ಬಿಜೆಪಿ, ಜೆಡಿಎಸ್ ನವರು ರಾಜ್ಯದಲ್ಲಿ ಒಂದೆ ಒಂದು ಆಣೆಕಟ್ಟು ಕಟ್ಟಿಲ್ಲ. ಬಹುತೇಕ ಅಣೆಕಟ್ಟುಗಳನ್ನು ಕಾಂಗ್ರೆಸ್ಸಿಗರು ಕಟ್ಟಿದ್ದಾರೆ. ಬಿಜೆಪಿಯವರು ದೇಶವನ್ನು ಹಾಳು ಮಾಡ್ತಿದ್ದಾರೆ. ಬಿಜೆಪಿ ಅಧಿಕಾರ ಕೊನೆಗಾನಿಸಬೇಕು. ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿ ಕಿತ್ತು ಹಾಕ್ತೇವೆ ಅಂತ ಶಪಥ ಮಾಡಬೇಕು ಎಂದರು.

Published On - 5:34 pm, Thu, 11 August 22

ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ