AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದುರಾಶ್ವತ್ಥ: ಅಜಾನ್ ಕೇಳಿ ಭಾಷಣ ಮೊಟಕುಗೊಳಿಸಿ, ಮೌನಕ್ಕೆ ಶರಣಾದ ಸಿದ್ದರಾಮಯ್ಯ!

ಅಜಾನ್ ಮುಗಿದ ಬಳಿಕ ಭಾಷಣ ಮುಂದುವರೆಸಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಆರ್.ಎಸ್. ಎಸ್ ನ ಯಾವುದೆ ನಾಯಕರು ಭಾಗವಹಿಸಲಿಲ್ಲ.

ವಿದುರಾಶ್ವತ್ಥ: ಅಜಾನ್ ಕೇಳಿ ಭಾಷಣ ಮೊಟಕುಗೊಳಿಸಿ, ಮೌನಕ್ಕೆ ಶರಣಾದ ಸಿದ್ದರಾಮಯ್ಯ!
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 11, 2022 | 8:08 PM

Share

ಚಿಕ್ಕಬಳ್ಳಾಪುರ: ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ವಿದುರಾಶ್ವತ್ಥದ ಕಾಂಗ್ರೆಸ್ ವೇದಿಕೆಯಲ್ಲಿ ಭಾಷಣ ಮಾಡುವಾಗ ಅಜಾನ್ ಕೂಗಿದ ಹಿನ್ನಲೆ ಭಾಷಣ ಮೊಟಕುಗೊಳಿಸಿ ಮೌನಕ್ಕೆ ಶರಣಾದ ಘಟನೆ ನಡೆಯಿತು. ಅಜಾನ್ ಮುಗಿಯುವವರೆಗೂ ಸಿದ್ದರಾಮಯ್ಯ ಭಾಷಣ ಆರಂಭಿಸಲಿಲ್ಲ.

ಅಜಾನ್ ಮುಗಿದ ಬಳಿಕ ಭಾಷಣ ಮುಂದುವರೆಸಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಆರ್​ಎಸ್​ಎಸ್ ನ ಯಾವುದೆ ನಾಯಕರು ಭಾಗವಹಿಸಲಿಲ್ಲ. ವಿಶ್ವ ಹಿಂದೂ ಪರಿಷತ್ ನವರು ಹೋರಾಟ ಮಾಡಲಿಲ್ಲ. ಆರ್​ಎಸ್​ಎಸ್ ನವರು ಬ್ರಿಟಿಷರ ಜೊತೆ ಶಾಮೀಲು ಆಗಿದ್ರು. ಆದ್ರೆ ಈಗ ಬಿಜೆಪಿ, ಆರ್​ಎಸ್​ಎಸ್ ಈಗ ದೇಶ ಭಕ್ತಿ ಬಗ್ಗೆ ಪಾಠ ಹೇಳ್ತಿದ್ದಾರೆ. ಬಿಜೆಪಿ ಆರ್​ಎಸ್​ಎಸ್ ನವರು ಡೋಂಗಿಗಳು, ಇವರಿಗೆ ನಾಚಿಕೆ ಆಗಲ್ವಾ ಎಂದು ವಾಗ್ದಾಳಿ ನಡೆಸಿದ್ದಾರೆ.

ತ್ರಿವರ್ಣ ಧ್ವಜ ಈ ದೇಶದ ಹೆಮ್ಮೆ. ಆದ್ರೆ ಧ್ವಜವನ್ನೆ ವಿರೋಧಿಸಿದ್ದ ಬಿಜೆಪಿ ಈಗ ಹರ್ ಘರ್ ತಿರಂಗಾ ಎನ್ನುತ್ತಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದಿಯಾ? ಬರಿ ನಾಟಕವಾಡ್ತೀರಲ್ಲ ನಿಮಗೆ ನಾಚಿಕೆ ಆಗಲ್ವಾ? ದೇಶವನ್ನು ಆಳಲು ಬಿಜೆಪಿ ನಾಲಾಯಕ್ ಎಂದು ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ವಿತರಣೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸಬ್ ಕಾ ನಾಶ ಆಗಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ವಿತರಣೆ ಮಾಡ್ತೇವೆ. ಬಹುಮತ ಇದೆ ಅನ್ನೊ ಕಾರಣಕ್ಕೆ ಜನ ವಿರೋಧಿ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ. ಇದು 40ಪರ್ಸೆಂಟ್ ಕಮಿಷನ್ ಸರ್ಕಾರ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಮೋದಿ ದ್ವಿಮುಖ ನೀತಿ ಹೊಂದಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನೂ ದೇಶದಲ್ಲಿ ಅಸಮಾನತೆ ಹೋಗಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಸಮಾನತೆ ಹೋಗಲಾಡಿಸಲು ಸಾಧ್ಯ. ಬಿಜೆಪಿ, ಜೆಡಿಎಸ್ ನವರು ರಾಜ್ಯದಲ್ಲಿ ಒಂದೆ ಒಂದು ಆಣೆಕಟ್ಟು ಕಟ್ಟಿಲ್ಲ. ಬಹುತೇಕ ಅಣೆಕಟ್ಟುಗಳನ್ನು ಕಾಂಗ್ರೆಸ್ಸಿಗರು ಕಟ್ಟಿದ್ದಾರೆ. ಬಿಜೆಪಿಯವರು ದೇಶವನ್ನು ಹಾಳು ಮಾಡ್ತಿದ್ದಾರೆ. ಬಿಜೆಪಿ ಅಧಿಕಾರ ಕೊನೆಗಾನಿಸಬೇಕು. ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿ ಕಿತ್ತು ಹಾಕ್ತೇವೆ ಅಂತ ಶಪಥ ಮಾಡಬೇಕು ಎಂದರು.

Published On - 5:34 pm, Thu, 11 August 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!