AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಬಳಿ ಹೆದ್ದಾರಿಯಲ್ಲಿ ಹಾವು ಅಡ್ಡಬಂತು ಅಂತಾ ಲಾರಿ ಚಾಲಕ ಬ್ರೇಕ್ ಹಾಕಿದ! ಮುಂದೇನಾಯ್ತು ನೋಡಿ

ರಸ್ತೆಯಲ್ಲಿ ವಾಹನಗಳ ತಪಾಸಣೆಯಿಂದ ಅಪಘಾತವೆಂದು ಆಕ್ರೋಶಗೊಂಡಿದ್ದಾರೆ. ಲಾರಿಗೆ ಹಾವು ಅಡ್ಡ ಬಂದಿರುವುದನ್ನು ತೋರಿಸಿದ ಮೇಲೆ ಸ್ಥಳೀಯರು ಮೊದಲು ಬೆಚ್ಚಿಬಿದ್ದು, ಮೆತ್ತಗಾಗಿದ್ದಾರೆ.

ಚಿಕ್ಕಬಳ್ಳಾಪುರ ಬಳಿ ಹೆದ್ದಾರಿಯಲ್ಲಿ ಹಾವು ಅಡ್ಡಬಂತು ಅಂತಾ ಲಾರಿ ಚಾಲಕ ಬ್ರೇಕ್ ಹಾಕಿದ! ಮುಂದೇನಾಯ್ತು ನೋಡಿ
ಹೆದ್ದಾರಿಯಲ್ಲಿ ಹಾವು ಅಡ್ಡಬಂತು ಅಂತಾ ಲಾರಿ ಚಾಲಕ ಬ್ರೇಕ್ ಹಾಕಿದ! ಮುಂದೇನಾಯ್ತು
TV9 Web
| Edited By: |

Updated on:Dec 07, 2022 | 12:18 PM

Share

ಚಿಕ್ಕಬಳ್ಳಾಪುರ: ಹಾವಿನಂತಿರುವ ರಸ್ತೆಯ ಮೇಲೆ ಹಾವೇ ನಿಜರೂಪದಲ್ಲಿ ಬಂದುಬಿಟ್ಟರೆ ಶರವೇಗದಲ್ಲಿರುವ ವಾಹನ ಸವಾರರ ಗತಿಯೇಯೇನಾಗಬೇಡಾ!? ಆ ಒಂದು ಹಾವು ಹೆದ್ದಾರಿಯಲ್ಲಿ ಅಡ್ಡ ಬಂದಿದ್ದೇ ಚಿಕ್ಕಬಳ್ಳಾಪುರ (chikkaballapur) ಬಳಿ ಇಂದು ಬೆಳಗ್ಗೆ 6 ಗಂಟೆಯಲ್ಲಿ ಸರಣಿ ಅಪಘಾತಗಳು ಸಂಭವಿಸಿಬಿಟ್ಟಿವೆ. ಹೆದ್ದಾರಿಯಲ್ಲಿ ಹಾವು (lorry driver) ಅಡ್ಡ ಬಂತು ಅಂತಾ ಹಿಂದೆಮುಂದೆ ನೋಡದೇ ಕಂಟೇನರ್ ಲಾರಿ ಚಾಲಕ ಬ್ರೇಕ್ (lorry driver) ಹಾಕಿದ್ದಾನೆ, ಅಷ್ಟೇ! ಮುಂದೆ ಲಾರಿ ಚಾಲಕನ ಅವಾಂತರದಿಂದ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು (series of accidents) ಸಂಭವಿಸಿಬಿಟ್ಟಿವೆ.

ಜಸ್ಟ್​ ಎರಡು ಕಂಟೈನರ್ ಲಾರಿ, ಒಂದು ಟಾಟಾ ಏಸ್, ಒಂದು ಕಾರು, ಒಂದು ಟಿಪ್ಪರ್ ಮಧ್ಯೆ ಸರಣಿ ಅಪಘಾತಗಳು ತನ್ನಿಂತಾನೇ ಆಗಿವೆ. ಟಾಟಾ ಏಸ್ ಚಾಲಕನ ಸ್ಥಿತಿ ಗಂಭೀರಗೊಂಡಿದೆ. ಟಿಪ್ಪರ್ ಚಾಲಕ ವಾಹನದೊಳಗೆ ಸಿಲುಕಿ ರಕ್ಷಣೆಗೆ ಮೊರೆ ಇಟ್ಟಿದ್ದಾನೆ. ರಾಷ್ಟ್ರೀಯ ಹೆದ್ದಾರಿ 44ರ ಅಗಲಗುರ್ಕಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ವಾಹನಗಳ ತಪಾಸಣೆ ಮಾಡ್ತಿದ್ದ ಸಂಚಾರಿ ಠಾಣೆ ಪೊಲೀಸರು ಘಟನೆಯಿಂದ ಬೇಸ್ತುಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  1. ಸ್ಥಳಿಯರಿಂದ ಪೊಲೀಸರ ವಿರುದ್ದ ಆಕ್ರೋಶ! ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿ ಹೈದರಾಬಾದ್ ಕಡೆಯಿಂದ ಬೆಂಗಳೂರು ಕಡೆಗೆ ಕಂಟೈನರ್ ಲಾರಿಯೊಂದು ಬರ್ತಿತ್ತು, ಆದ್ರೆ ಅಗಲಗುರ್ಕಿ ಗ್ರಾಮದ ಬಳಿ ಹೆದ್ದಾರಿಯ ನಡುರಸ್ತೆಯಲ್ಲಿ ಹಾವೊಂದು ರಸ್ತೆ ದಾಟುತ್ತಿತ್ತು. ಇದನ್ನು ಗಮನಿಸಿದ ಲಾರಿ ಚಾಲಕ ಸಡನ್ ಆಗಿ ಲಾರಿ ಬ್ರೇಕ್ ಹಾಕಿದ್ದಾನೆ. ಇದ್ರಿಂದ ಹಿಂದೆ ಬರ್ತಿದ್ದ ಕಂಟೈನರ್ ಲಾರಿ. ಟಾಟಾ ಏಸ್, ಕಾರು, ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಸೇರಿದಂತೆ ಐದು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಇದ್ರಿಂದ ಟಾಟಾ ಏಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಮತ್ತೊಂದೆಡೆ ಕಲ್ಲು ಸಾಗಿಸ್ತಿದ್ದ ಟಿಪ್ಪರ್ ಮುಂದಿನ ಲಾರಿಗೆ ಡಿಕ್ಕಿ ಹೊಡೆದ ಕಾರಣ ಅದರಲ್ಲಿದ್ದ ಚಾಲಕನಿಗೆ ಸ್ಟೇರಿಂಗ್ ಹೊಟ್ಟೆಗೆ ತಗುಲಿ ರಕ್ಷಣೆಗೆ ಮೊರೆ ಇಟ್ಟಿದ್ದ. ಅಲ್ಲಿ ಪಕ್ಕದಲ್ಲಿ ವಾಹನಗಳ ತಪಾಸಣೆ ನಡೆಸ್ತಿದ್ದ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ರಕ್ಷಣೆಗೆ ಧಾವಿಸಿ, ಗ್ಯಾಸ್ ವೆಲ್ಡರ್ ನನ್ನು ಸ್ಥಳಕ್ಕೆ ಕರೆಸಿ ಟಿಪ್ಪರ್ ನ ಡೋರ್ ಹಾಗೂ ಮುಂಭಾಗವನ್ನು ಕತ್ತರಿಸಿ ಚಾಲಕನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮತ್ತೊಂದೆಡೆ ಪೊಲೀಸರು ಹೆದ್ದಾರಿಯಲ್ಲಿ ವಾಹನಗಳ ತಪಾಸಣೆ ಮಾಡ್ತಿರುವ ಕಾರಣ ಪದೆ ಪದೆ ಅಪಘಾತಗಳು ಆಗ್ತಿವೆ ಎಂದು ಪ್ರತ್ಯಕ್ಷದರ್ಶಿಗಳಾದ ಅರುಣ್, ಮುನಿರಾಜು, ಕಿರಣ್ ಮಾಹಿತಿ ನೀಡಿದ್ದಾರೆ.

Also Read: Hubli Land Mafia: ಹುಬ್ಬಳ್ಳಿಯ ಗುಳುಂ ಗ್ಯಾಂಗ್ ಪಾಲಿಕೆಯ ಭೂ ಆಸ್ತಿಯನ್ನೇ ಗುಳುಂ ಮಾಡಿಬಿಟ್ಟಿದೆ, ಸ್ಥಳೀಯರು ಹೇಳೋದೇನು?

Published On - 12:05 pm, Wed, 7 December 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ