AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಕಿಡ್ನಾಪ್ ಮಾಡಿ ಹಲ್ಲೆ; ಪ್ರೇಯಸಿ ಸೇರಿ 6 ಜನರ ವಿರುದ್ಧ ದೂರು ದಾಖಲು

ಪ್ರಿಯತಮೆಯೇ ತನ್ನ ಪ್ರೇಮಿಯನ್ನು ಕಿಡ್ನಾಪ್ ಮಾಡಿಸಿ ಹಲ್ಲೆ ನಡೆಸಿ ಅವನ ಬಳಿ ಇದ್ದ ಹಣವನ್ನೆಲ್ಲ ದೋಚಿಸಿದ್ದಾಳೆ. ಸದ್ಯ ಪ್ರಿಯತಮೆ ಸೇರಿ 6 ಜನರ ವಿರುದ್ಧ ದೂರು ದಾಖಲಾಗಿದೆ.

ಸಿನಿಮೀಯ ರೀತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಕಿಡ್ನಾಪ್ ಮಾಡಿ ಹಲ್ಲೆ; ಪ್ರೇಯಸಿ ಸೇರಿ 6 ಜನರ ವಿರುದ್ಧ ದೂರು ದಾಖಲು
ನಂದಿಗಿರಿಧಾಮ ಪೊಲೀಸ್ ಠಾಣೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 24, 2023 | 3:24 PM

Share

ಚಿಕ್ಕಬಳ್ಳಾಪುರ: ಸಾಫ್ಟ್ ವೇರ್ ಇಂಜಿನಿಯರ್​ನನ್ನು(Software Engineer) ಸಿನಿಮೀಯ ರೀತಿಯಲ್ಲಿ ಕಿಡ್ನಾಪ್(Kidnap) ಮಾಡಿ ದರೋಡೆ ಮಾಡಿ ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪ್ರೀತಿಸಿದ ಯುವತಿಯಿಂದಲೇ ಕಿಡ್ನಾಪ್​ಗೆ ಸುಪಾರಿ ನೀಡಲಾಗಿದ್ದು ಯುವತಿ ಸೇರಿ 6 ಜನರ ವಿರುದ್ಧ ನಂದಿಗಿರಿಧಾಮ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಜಯಸಿಂಗ್ (32) ಹಲ್ಲೆಗೆ ಒಳಗಾದವರು.

ಮೂಲತಃ ಆಂಧ್ರದ ಅನಂತಪುರ ನಿವಾಸಿಯಾಗಿರುವ ವಿಜಯಸಿಂಗ್, ಬೆಂಗಳೂರಿನ ಖಾಸಗಿ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಜಯ ಸಿಂಗ್ ಪ್ರಿಯತಮೆ ಭಾವನಾ ರೆಡ್ಡಿ, ಕೆಲ ದುಷ್ಕರ್ಮಿಗಳಿಗೆ ಕಿಡ್ನಾಪ್​ ಮಾಡಲು ಸುಪಾರಿ ನೀಡಿದ್ದಳು. ಅದರಂತೆ ಕಿಡಿಗೇಡಿಗಳು ಮೊದಲು ಜೂನ್ 16ರಂದು ಪ್ರಿಯತಮೆ ಮೂಲಕ ದೇವಹಳ್ಳಿಗೆ ಕರೆಸಿ ಕಿಡ್ನಾಪ್ ಮಾಡಿ ನಂದಿಗಿರಿಧಾಮದ ಬಳಿ ಇರುವ ಕ್ಯೂ.ವಿ.ಸಿ ವಿಲ್ಲಾ ರೇಸಾರ್ಟ್​ಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಜೂನ್ 18ರ ವರೆಗೂ ಮೂರು ದಿನಗಳ ಕಾಲ ಚಿತ್ರ ಹಿಂಸೆ ನೀಡಿದ್ದಾರೆ. ಜೊತೆಗೆ ವಿಜಯಸಿಂಗ್ ಬಳಿ ಇದ್ದ ಎರಡು ಲ್ಯಾಪ್ ಟಾಪ್, ಮೂರು ಮೊಬೈಲ್, 12 ಗ್ರಾಂ ಬಂಗಾರದ ಚೈನ್ ಸೇರಿದಂತೆ 21 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡಿದ್ದಾರೆ. ಸದ್ಯ ಈ ಸಂಬಂಧ ವಿಜಯಸಿಂಗ್ ಪ್ರಿಯತಮೆ ಸೇರಿ 6 ಜನರ ವಿರುದ್ದ ದೂರು ದಾಖಲಾಗಿದೆ. ಭಾವನಾ ರೆಡ್ಡಿ, ಪುಲ್ಲಾರೆಡ್ಡಿ, ಸುಬ್ರಮಣಿ, ನಾಗೇಶ ರೆಡ್ಡಿ, ಸಿದ್ದೇಶ, ಸುದೀರ್ ವಿರುದ್ದ ಐ.ಪಿ.ಸಿ ಸೆಕ್ಷನ್ -506,341,504,143,149,384,323,324ರ ಅಡಿ ದೂರು ದಾಖಲಾಗಿದೆ.

ಇದನ್ನೂ ಓದಿ: Uttara Kannada: ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ; ಆರೋಪಿ ಬಂಧನ

ತಂಗಿಗೆ ಮೆಸೇಜ್ ಮಾಡಬೇಡ ಎಂದ ಅಣ್ಣನಿಗೆ ಚಾಕು ಇರಿತ

ತನ್ನ ತಂಗಿಗೆ ಮೆಸೇಜ್ ಮಾಡ ಬೇಡ ಎಂದು ಬುದ್ಧಿವಾದ ಹೇಳಲು ಹೋಗಿದ್ದ ಅಣ್ಣನನ್ನೇ ತಂಗಿಯನ್ನು ಪ್ರೀತಿಸುತ್ತಿದ್ದ ಯುವಕ ಹತ್ಯೆ ಮಾಡಿರುವ ಭೀಕರ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ದೇವರಾಜ್(23) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಆರೋಪಿಗಳಾದ ಬಸವರಾಜ್ ಹಾಗೂ ಹನುಮಂತ ಎಂಬುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ