AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಮಣಿ: ಶಂಕಿತ ಹುಲಿ ಉಗುರು ಪತ್ತೆ; ಯುವಕ ಪರಾರಿ

ಗಾಂಜಾ ಸಂಗ್ರಹಿಸಿದ ಮಾಹಿತಿ ಪಡೆದು ನವೀನ್ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯ ಮೇಲಿನ ಕೊಠಡಿಯಲ್ಲಿ ಹುಲಿ ಉಗುರು ಮಾದರಿಯ ವಸ್ತು ಪತ್ತೆಯಾಗಿದೆ. ಅದನ್ನು ಪೊಲೀಸರು ಚಿಂತಾಮಣಿ ತಾಲ್ಲೂಕು ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದು, ಚಿಂತಾಮಣಿ ವಲಯ ಅರಣ್ಯಾಧಿಕಾರಿ ಚಂದನ್​ರವರು ಈಗ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಚಿಂತಾಮಣಿ: ಶಂಕಿತ ಹುಲಿ ಉಗುರು ಪತ್ತೆ; ಯುವಕ ಪರಾರಿ
ಚಿಂತಾಮಣಿಯಲ್ಲಿ ಹುಲಿ ಉಗುರು ಪತ್ತೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 08, 2023 | 5:12 PM

Share

ಚಿಕ್ಕಬಳ್ಳಾಪುರ, ನ.08: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಹುಲಿ ಉಗುರು(Tiger Claw) ಪ್ರಕರಣ ಸಧ್ಯಕ್ಕೆ ಮುಗಿಯುವ ತರ ಕಾಣುತ್ತಿಲ್ಲ. ಹೌದು, ಬಿಗ್​ ಬಾಸ್​ ಮನೆಯಿಂದ ಶುರುವಾಗಿ, ರಾಜಕಾರಣಿಗಳವರೆಗೂ ಬಂದಿತ್ತು. ಇದೀಗ ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ ತಾಲೂಕಿನ ಸೂಲದೇನಹಳ್ಳಿ ಗ್ರಾಮದ ಮನೆಯೊಂದರ ಮೇಲೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ಮಾಡಿದಾಗ ಶಂಕಿತ ಹುಲಿ ಉಗುರು ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಂಡಿದ್ದಾರೆ.

ಗಾಂಜಾ ಸಂಗ್ರಹಿಸಿದ ಆರೋಪ ಮೇರೆಗೆ ದಾಳಿ

ಗಾಂಜಾ ಸಂಗ್ರಹಿಸಿದ ಮಾಹಿತಿ ಪಡೆದು ನವೀನ್ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯ ಮೇಲಿನ ಕೊಠಡಿಯಲ್ಲಿ ಹುಲಿ ಉಗುರು ಮಾದರಿಯ ವಸ್ತು ಪತ್ತೆಯಾಗಿದೆ. ಆ ವಸ್ತುವನ್ನು ಪೊಲೀಸರು ಚಿಂತಾಮಣಿ ತಾಲ್ಲೂಕು ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದಾರೆ.‌ ಚಿಂತಾಮಣಿ ವಲಯ ಅರಣ್ಯಾಧಿಕಾರಿ ಚಂದನ್​ರವರು ಈಗ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಇನ್ನು ವಿಷಯ ತಿಳಿದು ನವೀನ್‌ ಪರಾರಿಯಾಗಿದ್ದು, ಆತನಿಗಾಗಿ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದರ ಜೊತೆಗೆ ಪತ್ತೆಯಾಗಿರುವ ಉಗರುನ್ನು ಎಫ್​ಎಸ್​ಎಲ್​ಗೆ ಕಳುಹಿಸಿಕೊಡಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಹುಲಿ ಉಗುರು ವಿವಾದ: ಹುಲಿಯುಗುರು ಡಾಲರ್ ಧರಿಸಿದ್ದ ಚಿಕ್ಕಮಗಳೂರಿನ ಇಬ್ಬರು ಅರ್ಚಕರಿಗೆ 14-ದಿನ ನ್ಯಾಯಾಂಗ ಕಸ್ಟಡಿ!

ಹುಲಿ ಉಗುರಿನ ಪೆಂಡೆಂಟ್​ ಧರಿಸಿ ಅಮಾನತಾಗಿದ್ದ ಡಿಆರ್​ಎಫ್​ಒ

ಚಿಕ್ಕಮಗಳೂರು ಅಕ್ಟೋಬರ್​ 27 ರಂದು ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ದರ್ಶನ್ ಅವರನ್ನು ಅಮಾನತುಗೊಳಿಸಲಾಗಿತ್ತು. ಹೌದು, ಹುಲಿ ಉಗುರು ಧರಿಸಿದ ಆರೋಪದ ಮೇಲೆ ಅವರ ವಿರುದ್ಧ ದೂರು ದಾಖಲಾಗಿತ್ತು. ಬಳಿಕ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಕೊಪ್ಪ ಡಿಎಫ್​ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಇವರು ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಇನ್ನು ಈ ಕುರಿತು ಅರೆನೂರು ಗ್ರಾಮದ ಸುಪ್ರೀತ್ ಮತ್ತು ಅಬ್ದುಲ್ ಅವರು ಚಿಕ್ಕಮಗಳೂರು ಜಿಲ್ಲೆ ಆಲ್ದೂರು ವಲಯ ಅರಣ್ಯಾಧಿಕಾರಿಗೆ ಲಿಖಿತ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Wed, 8 November 23

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?