AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನಾಗಿ ಓದುವಂತೆ ಹೆತ್ತಮ್ಮ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಬಾಲಕಿ ಉತ್ತರ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ

ಸರಿಯಾಗಿ ಓದದೆ, ಮೊಬೈಲ್ ಆಟವಾಡಿಕೊಂಡಿರುತ್ತಿದ್ದ ಮಗಳಿಗೆ ಆಕೆಯ ತಾಯಿ ಗುರುವಾರ ರಾತ್ರಿ ಬುದ್ದಿವಾದ ಹೇಳಿದ್ದಾರೆ. ಅದನ್ನೇ ಮನಸ್ಸಿಗೆ ಹಚ್ಚಿಕೊಂಡ ವಿದ್ಯಾಶ್ರೀ ಗೌರಿಬಿದನೂರು ಸಮೀಪದ ಉತ್ತರ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚೆನ್ನಾಗಿ ಓದುವಂತೆ ಹೆತ್ತಮ್ಮ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಬಾಲಕಿ ಉತ್ತರ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ
ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕಿ!
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸಾಧು ಶ್ರೀನಾಥ್​|

Updated on:Jul 28, 2023 | 5:54 PM

Share

ಚಿಕ್ಕಬಳ್ಳಾಪುರ, ಜುಲೈ 28: ಚೆನ್ನಾಗಿ ಓದುವಂತೆ ಪೋಷಕರು (Parents) ಮಗಳಿಗೆ (Daughter) ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಬಾಲಕಿಯೋರ್ವಳು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗೌರಿಬಿದನೂರು (Gauribidanur) ನಗರ ಹೊರವಲಯದ ಉತ್ತರ ಪಿನಾಕಿನಿ ನದಿಯಲ್ಲಿ (Uttara Pinakini river) ಘಟನೆ ನಡೆದಿದೆ.

ಗೌರಿಬಿದನೂರು ನಗರದ ಸುಮಂಗಲಿ ಬಡಾವಣೆಯ ವಿಜಯ್ ಕುಮಾರ್ ಹಾಗೂ ಭವ್ಯ ದಂಪತಿಯ ಪುತ್ರಿ 15 ವರ್ಷದ ಬಾಲಕಿ ವಿದ್ಯಾಶ್ರೀ ಮೃತ ದುರ್ದೈವಿಯಾಗಿದ್ದಾಳೆ. ನಗರದ ಖಾಸಗಿ ಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ ಬಾಲಕಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಆದ್ರೆ ವಿದ್ಯಾಶ್ರೀ ಸರಿಯಾಗಿ ಓದದೆ, ಮೊಬೈಲ್ ಆಟವಾಡಿಕೊಂಡಿರುತ್ತಿದ್ದಳಂತೆ. ಇದರಿಂದ ಆಕೆಯ ತಾಯಿ ಮಗಳಿಗೆ ನಿನ್ನೆ ಗುರುವಾರ ರಾತ್ರಿ ಬುದ್ದಿವಾದ ಹೇಳಿದ್ದಾರೆ. ಇದನ್ನ ಮನಸ್ಸಿಗೆ ಹಚ್ಚಿಕೊಂಡಿದ್ದ ವಿದ್ಯಾಶ್ರೀ ಮನನೊಂದು ಸಮೀಪದ ಉತ್ತರ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಸ್ಥಳಕ್ಕೆ ಗೌರಿಬಿದನೂರು ಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ಷಾಕ್! ಚೀಟಿ ಹೆಸರಿನಲ್ಲಿ 3 ಕೋಟಿ ಪಂಗನಾಮ, ಹಣ ಕಳೆದುಕೊಂಡು ಚಿಂತಾಮಣಿ ಪೊಲೀಸರ ಮೊರೆ ಹೋದ 40 ಮಹಿಳೆಯರು

ಚಿಂತಾಮಣಿ: ಜಖಂಗೊಂಡಿದ್ದ ತಮಿಳುನಾಡು ಕಾರಿನಲ್ಲಿ, ದಾಖಲೆಗಳಿಲ್ಲದೆ ಸಾಗಿಸ್ತಿದ್ದ 5 ಕೋಟಿ ರೂ ಬೆಲೆಯ 10 ಕೆಜಿ ಚಿನ್ನಾಭರಣ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ದಾಖಲೆಗಳಿಲ್ಲದೆ, ಅನುಮಾನಸ್ಫದವಾಗಿ ಸಾಗಿಸುತ್ತಿದ್ದ 5 ಕೋಟಿ ರೂಪಾಯಿ ಬೆಲೆಬಾಳುವ 10 ಕೆಜಿ 30 ಗ್ರಾಂ ತೂಕದ ಚಿನ್ನಾಭರಣಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರ ಠಾಣಾ ಪಿಎಸ್‍ಐ ನಾಗೇಂದ್ರಪ್ರಸಾದ್ ಎಂಬುವವರು ಗಸ್ತಿನಲ್ಲಿದ್ದಾಗ ಎನ್ ಆರ್ ಬಡವಾಣೆಯಲ್ಲಿ ಮುಂಭಾಗ ಜಖಂಗೊಂಡಿದ್ದ ಕಾರೊಂದು ಬಂದಿದ್ದು ಅನುಮಾನಗೊಂಡ ಪಿಎಸ್‍ಐ ಕಾರನ್ನ ತಡೆದು ಕಾರಿನಲ್ಲಿದ್ದವರ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಕಾರಿನಲ್ಲಿ ತಮಿಳುನಾಡು ಮೂಲದ ಸಂಕರೇಶ್ವರ, ಅರುಣ್, ವಿಕ್ರಮ್, ಗೋಪಾಲ್ ದಾಸ್ ಎಂಬುವವರಿದ್ದು, ಕಾರಿನಲ್ಲಿದ್ದ ಎರಡು ಬ್ಯಾಗ್ ಗಳಲ್ಲಿ 10 ಪ್ಲಾಸ್ಟಿಕ್ ಡಬ್ಬಿಗಳಿದ್ದು ಅವುಗಳಲ್ಲಿ 10 ಕೆಜಿ 30 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಹೀಗಾಗಿ ಸೂಕ್ತ ದಾಖಲೆಗಳನ್ನ ಕೇಳಿದಾಗ ದಾಖಲೆಗಳನ್ನ ನೀಡದೆ ಅಸಮರ್ಪಕ ಉತ್ತರ ನೀಡಿದ್ದು ಅನುಮಾನಗೊಂಡ ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:50 pm, Fri, 28 July 23

ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?