AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ವನವಾಸದ ಸಮಯದಲ್ಲಿ ಬಿಟ್ಟಿದ್ದ ಬಾಣದ ತುಂಡು ಇಲ್ಲೇ ಇದೆ!

Shri Rama Arrowhead: ಶ್ರೀರಾಮ ವನವಾಸದ ಸಮಯದಲ್ಲಿ ಬಿಟ್ಟಿದ್ದ ಬಾಣದ ತುಂಡು ಇಲ್ಲೇ ಚಿಕ್ಕಬಳ್ಳಾಪುರ ತಾಲ್ಲೂಕು ಮಂಡಿಕಲ್ಲು ಗ್ರಾಮದ ಬಳಿ ಇರುವ ಶ್ರೀರಾಮದೇವರ ಬೆಟ್ಟದಲ್ಲಿದೆ!

ಶ್ರೀರಾಮ ವನವಾಸದ ಸಮಯದಲ್ಲಿ ಬಿಟ್ಟಿದ್ದ ಬಾಣದ ತುಂಡು ಇಲ್ಲೇ ಇದೆ!
ರಾಮ ವನವಾಸದ ಸಮಯದಲ್ಲಿ ಬಿಟ್ಟಿದ್ದ ಬಾಣದ ತುಂಡು ಇಲ್ಲೇ ಇದೆ!
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 06, 2024 | 5:09 PM

Share

ಅಯೋಧ್ಯೆಯ ಶ್ರೀರಾಮ ತನ್ನ ವನವಾಸದ ಸಮಯದಲ್ಲಿ ಲಕ್ಷ್ಮಣ, ಸೀತೆಯ ಜೊತೆ ಅದೊಂದು ದಂಡಕಾರಣ್ಯಕ್ಕೆ ಭೇಟಿ ನೀಡಿ ಪತ್ನಿಯ ತೊಡೆಯ ಮೇಲೆ ಮಲಗಿ ವಿಶ್ರಾಂತಿ ಪಡೆದಿದ್ದನಂತೆ. ಆಗ ಕಾಕಾಸುರ ಎಂಬ ಅಸುರ ಸೀತೆಯ ತೊಡೆ ಕುಕ್ಕಿದ ಕಾರಣ ರಕ್ತ ಸುರಿದು ಶ್ರೀರಾಮನಿಗೆ ತಗುಲಿತ್ತು. ಆಗ ಎಚ್ಚರಗೊಂಡ ಶ್ರೀರಾಮ ಕಾಕಸುರನಿಗೆ ಬಾಣ ಬಿಟ್ಟಿದ್ದ. ಕೊನೆಗೆ ಕಾಕಸುರ ಶ್ರೀರಾಮನಿಗೆ ಶರಣಾದ ಕಾರಣ ರಾಮ ಬಿಟ್ಟ ಬಾಣವನ್ನು ಹಿಡಿದು ಎರಡು ತುಂಡು ಮಾಡಿದ್ದನಂತೆ. ಅದರಲ್ಲಿ ಒಂದು ತುಂಡು ನಮ್ಮದೆ ರಾಜ್ಯದ ಅದೊಂದು ಸ್ಥಳದಲ್ಲಿ ಭದ್ರವಾಗಿದೆ.

ಚಿಕ್ಕಬಳ್ಳಾಪುರ ತಾಲ್ಲೂಕು ಮಂಡಿಕಲ್ಲು ಗ್ರಾಮದ ಬಳಿ ಇರುವ ಶ್ರೀರಾಮದೇವರ ಬೆಟ್ಟ ಇದೆ. ಹೆಸರೇ ಹೇಳುವ ಹಾಗೆ ತ್ರೇತಾಯುಗದಲ್ಲಿ ಶ್ರೀರಾಮ ಆತನ ಪತ್ನಿ ಸೀತೆ ಸೇರಿದಂತೆ ಲಕ್ಷ್ಮಣ ವನವಾಸ ಹೊರಟಾಗ ಚಿಕ್ಕಬಳ್ಳಾಪುರ ತಾಲ್ಲೂಕು ಮಂಡಿಕಲ್ಲು ಬಳಿಯ ದಟ್ಟಕಾರಣ್ಯ ಹಾಗೂ ಬೆಟ್ಟಕ್ಕೆ ಆಗಮಿಸಿದ್ದರಂತೆ. ಆಗ ಪತ್ನಿ ಸೀತೆಯ ತೊಡೆಯ ಮೇಲೆ ಶ್ರೀರಾಮ ತಲೆಯನ್ನಿಟ್ಟು ವಿಶ್ರಾಂತಿ ಮಾಡುತ್ತಿದ್ದಾಗ ಕಾಕಸುರನೆಂಬ ರಾಕ್ಷಸ ಸೀತೆಯ ತೊಡೆಗೆ ಕುಕ್ಕಿದ್ದನಂತೆ.

ಆಗ ರಕ್ತ ಸುರಿದು ರಾಮ ಎಚ್ಚರಗೊಂಡಾಗ ಕಾಕಸುರನ ಮೇಲೆ ಬಾಣ ಪ್ರಯೋಗ ಮಾಡಿದ್ದ. ಕೊನೆಗೆ ಕಾಕಸುರ ರಾಮನಿಗೆ ಶರಣಾದ ಕಾರಣ ಬಿಟ್ಟಿದ್ದ ಬಾಣವನ್ನು ಹಿಡಿದ ರಾಮ ಎರಡು ತುಂಡು ಮಾಡಿದ್ದನಂತೆ. ಅದರಲ್ಲಿ ಒಂದು ತುಂಡು ಮಂಡಿಕಲ್ಲು ರಾಮದೇವರ ಬೆಟ್ಟದ ಮೇಲಿದ್ದು, ಇನ್ನೊಂದು ಮಹಾರಾಷ್ಟ್ರದಲ್ಲಿದೆಯಂತೆ. ಅದಕ್ಕೆ ಗ್ರಾಮಸ್ಥರು ಬೆಟ್ಟದಲ್ಲಿ ದೇವಸ್ಥಾನ ಕಟ್ಟಿಸಿ ಬಾಣವನ್ನು ಗುಹೆಯಲ್ಲಿಟ್ಟಿದ್ದರು. ಇತ್ತಿಚಿಗೆ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಮಾಡುತ್ತಿರುವ ಕಾರಣ ಬಾಣದ ತುಂಡನ್ನು ಬೇರೆ ದೇವಸ್ಥಾನವೊಂದರಲ್ಲಿ ಸಂರಕ್ಷಿಸಿದ್ದಾರೆ.

Also Read: ಅಯೋಧ್ಯೆ ರಾಮ ಮಂದಿರಕ್ಕೆ ಬೆಂಗಳೂರು ಕೈಗಾರಿಕೋದ್ಯಮಿಯಿಂದ ಬೃಹದಾಕಾರದ ‘ಅಳಿಲು’ ಸೇವೆ!

ಮತ್ತೊಂದೆಡೆ ಶ್ರೀರಾಮ ಹಾಗೂ ತಂಡ ಮಂಡಿಕಲ್ಲು ದಟ್ಟಕಾರಣ್ಯದ ಬೆಟ್ಟದಲ್ಲಿದ್ದ ಋಷಿಮುನಿಗಳ ಆಶ್ರಮದಲ್ಲಿ ತಂಗಿದ್ದನಂತೆ. ಅದರ ಕುರುಹುಗಾಗಿ ಬೆಟ್ಟದಲ್ಲಿ ಎರಡು ಗುಹೆಗಳಿದ್ದು, ನೂರಾರು ವರ್ಷಗಳ ಹಿಂದೆ ನಿರ್ಮಾಣ ಮಾಡಿದ ರೀತಿಯಲ್ಲಿ ಮಣ್ಣಿನ ಆಸನ ವ್ಯವಸ್ಥೆಗಳಿವೆ. ಬಂಡೆಯ ಗುಹೆಯೊಳಗೆ ಮನುಷ್ಯರು ಇದ್ದರು ಎನ್ನುವುದನ್ನು ಸಾರಿ ಸಾರಿ ಹೇಳುತ್ತಿವೆ. ಇದ್ರಿಂದ ಅಯೋಧ್ಯೆಯ ಶ್ರೀರಾಮನ ಸವಿನೆನಪಿಗಾಗಿ ಬೆಟ್ಟದಲ್ಲಿ ಲಕ್ಷ್ಮಣ, ಸೀತೆ, ಆಂಜನೇಯ ಸಮೇತ ಶ್ರೀರಾಮರ ವಿಗ್ರಹಗಳನ್ನು ನೂರಾರು ವರ್ಷಗಳ ಹಿಂದೆಯೆ ಪ್ರತಿಷ್ಠಾಪಿಸಿ ನೂರಾರು ವರ್ಷಗಳಿಂದ ಪೂಜೆ, ಪುನಸ್ಕಾರಗಳನ್ನು ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?