AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ವನವಾಸದ ಸಮಯದಲ್ಲಿ ಬಿಟ್ಟಿದ್ದ ಬಾಣದ ತುಂಡು ಇಲ್ಲೇ ಇದೆ!

Shri Rama Arrowhead: ಶ್ರೀರಾಮ ವನವಾಸದ ಸಮಯದಲ್ಲಿ ಬಿಟ್ಟಿದ್ದ ಬಾಣದ ತುಂಡು ಇಲ್ಲೇ ಚಿಕ್ಕಬಳ್ಳಾಪುರ ತಾಲ್ಲೂಕು ಮಂಡಿಕಲ್ಲು ಗ್ರಾಮದ ಬಳಿ ಇರುವ ಶ್ರೀರಾಮದೇವರ ಬೆಟ್ಟದಲ್ಲಿದೆ!

ಶ್ರೀರಾಮ ವನವಾಸದ ಸಮಯದಲ್ಲಿ ಬಿಟ್ಟಿದ್ದ ಬಾಣದ ತುಂಡು ಇಲ್ಲೇ ಇದೆ!
ರಾಮ ವನವಾಸದ ಸಮಯದಲ್ಲಿ ಬಿಟ್ಟಿದ್ದ ಬಾಣದ ತುಂಡು ಇಲ್ಲೇ ಇದೆ!
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 06, 2024 | 5:09 PM

Share

ಅಯೋಧ್ಯೆಯ ಶ್ರೀರಾಮ ತನ್ನ ವನವಾಸದ ಸಮಯದಲ್ಲಿ ಲಕ್ಷ್ಮಣ, ಸೀತೆಯ ಜೊತೆ ಅದೊಂದು ದಂಡಕಾರಣ್ಯಕ್ಕೆ ಭೇಟಿ ನೀಡಿ ಪತ್ನಿಯ ತೊಡೆಯ ಮೇಲೆ ಮಲಗಿ ವಿಶ್ರಾಂತಿ ಪಡೆದಿದ್ದನಂತೆ. ಆಗ ಕಾಕಾಸುರ ಎಂಬ ಅಸುರ ಸೀತೆಯ ತೊಡೆ ಕುಕ್ಕಿದ ಕಾರಣ ರಕ್ತ ಸುರಿದು ಶ್ರೀರಾಮನಿಗೆ ತಗುಲಿತ್ತು. ಆಗ ಎಚ್ಚರಗೊಂಡ ಶ್ರೀರಾಮ ಕಾಕಸುರನಿಗೆ ಬಾಣ ಬಿಟ್ಟಿದ್ದ. ಕೊನೆಗೆ ಕಾಕಸುರ ಶ್ರೀರಾಮನಿಗೆ ಶರಣಾದ ಕಾರಣ ರಾಮ ಬಿಟ್ಟ ಬಾಣವನ್ನು ಹಿಡಿದು ಎರಡು ತುಂಡು ಮಾಡಿದ್ದನಂತೆ. ಅದರಲ್ಲಿ ಒಂದು ತುಂಡು ನಮ್ಮದೆ ರಾಜ್ಯದ ಅದೊಂದು ಸ್ಥಳದಲ್ಲಿ ಭದ್ರವಾಗಿದೆ.

ಚಿಕ್ಕಬಳ್ಳಾಪುರ ತಾಲ್ಲೂಕು ಮಂಡಿಕಲ್ಲು ಗ್ರಾಮದ ಬಳಿ ಇರುವ ಶ್ರೀರಾಮದೇವರ ಬೆಟ್ಟ ಇದೆ. ಹೆಸರೇ ಹೇಳುವ ಹಾಗೆ ತ್ರೇತಾಯುಗದಲ್ಲಿ ಶ್ರೀರಾಮ ಆತನ ಪತ್ನಿ ಸೀತೆ ಸೇರಿದಂತೆ ಲಕ್ಷ್ಮಣ ವನವಾಸ ಹೊರಟಾಗ ಚಿಕ್ಕಬಳ್ಳಾಪುರ ತಾಲ್ಲೂಕು ಮಂಡಿಕಲ್ಲು ಬಳಿಯ ದಟ್ಟಕಾರಣ್ಯ ಹಾಗೂ ಬೆಟ್ಟಕ್ಕೆ ಆಗಮಿಸಿದ್ದರಂತೆ. ಆಗ ಪತ್ನಿ ಸೀತೆಯ ತೊಡೆಯ ಮೇಲೆ ಶ್ರೀರಾಮ ತಲೆಯನ್ನಿಟ್ಟು ವಿಶ್ರಾಂತಿ ಮಾಡುತ್ತಿದ್ದಾಗ ಕಾಕಸುರನೆಂಬ ರಾಕ್ಷಸ ಸೀತೆಯ ತೊಡೆಗೆ ಕುಕ್ಕಿದ್ದನಂತೆ.

ಆಗ ರಕ್ತ ಸುರಿದು ರಾಮ ಎಚ್ಚರಗೊಂಡಾಗ ಕಾಕಸುರನ ಮೇಲೆ ಬಾಣ ಪ್ರಯೋಗ ಮಾಡಿದ್ದ. ಕೊನೆಗೆ ಕಾಕಸುರ ರಾಮನಿಗೆ ಶರಣಾದ ಕಾರಣ ಬಿಟ್ಟಿದ್ದ ಬಾಣವನ್ನು ಹಿಡಿದ ರಾಮ ಎರಡು ತುಂಡು ಮಾಡಿದ್ದನಂತೆ. ಅದರಲ್ಲಿ ಒಂದು ತುಂಡು ಮಂಡಿಕಲ್ಲು ರಾಮದೇವರ ಬೆಟ್ಟದ ಮೇಲಿದ್ದು, ಇನ್ನೊಂದು ಮಹಾರಾಷ್ಟ್ರದಲ್ಲಿದೆಯಂತೆ. ಅದಕ್ಕೆ ಗ್ರಾಮಸ್ಥರು ಬೆಟ್ಟದಲ್ಲಿ ದೇವಸ್ಥಾನ ಕಟ್ಟಿಸಿ ಬಾಣವನ್ನು ಗುಹೆಯಲ್ಲಿಟ್ಟಿದ್ದರು. ಇತ್ತಿಚಿಗೆ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಮಾಡುತ್ತಿರುವ ಕಾರಣ ಬಾಣದ ತುಂಡನ್ನು ಬೇರೆ ದೇವಸ್ಥಾನವೊಂದರಲ್ಲಿ ಸಂರಕ್ಷಿಸಿದ್ದಾರೆ.

Also Read: ಅಯೋಧ್ಯೆ ರಾಮ ಮಂದಿರಕ್ಕೆ ಬೆಂಗಳೂರು ಕೈಗಾರಿಕೋದ್ಯಮಿಯಿಂದ ಬೃಹದಾಕಾರದ ‘ಅಳಿಲು’ ಸೇವೆ!

ಮತ್ತೊಂದೆಡೆ ಶ್ರೀರಾಮ ಹಾಗೂ ತಂಡ ಮಂಡಿಕಲ್ಲು ದಟ್ಟಕಾರಣ್ಯದ ಬೆಟ್ಟದಲ್ಲಿದ್ದ ಋಷಿಮುನಿಗಳ ಆಶ್ರಮದಲ್ಲಿ ತಂಗಿದ್ದನಂತೆ. ಅದರ ಕುರುಹುಗಾಗಿ ಬೆಟ್ಟದಲ್ಲಿ ಎರಡು ಗುಹೆಗಳಿದ್ದು, ನೂರಾರು ವರ್ಷಗಳ ಹಿಂದೆ ನಿರ್ಮಾಣ ಮಾಡಿದ ರೀತಿಯಲ್ಲಿ ಮಣ್ಣಿನ ಆಸನ ವ್ಯವಸ್ಥೆಗಳಿವೆ. ಬಂಡೆಯ ಗುಹೆಯೊಳಗೆ ಮನುಷ್ಯರು ಇದ್ದರು ಎನ್ನುವುದನ್ನು ಸಾರಿ ಸಾರಿ ಹೇಳುತ್ತಿವೆ. ಇದ್ರಿಂದ ಅಯೋಧ್ಯೆಯ ಶ್ರೀರಾಮನ ಸವಿನೆನಪಿಗಾಗಿ ಬೆಟ್ಟದಲ್ಲಿ ಲಕ್ಷ್ಮಣ, ಸೀತೆ, ಆಂಜನೇಯ ಸಮೇತ ಶ್ರೀರಾಮರ ವಿಗ್ರಹಗಳನ್ನು ನೂರಾರು ವರ್ಷಗಳ ಹಿಂದೆಯೆ ಪ್ರತಿಷ್ಠಾಪಿಸಿ ನೂರಾರು ವರ್ಷಗಳಿಂದ ಪೂಜೆ, ಪುನಸ್ಕಾರಗಳನ್ನು ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?