AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಬಂದಾಗಿದ್ದ ಸ್ಟೋನ್ ಕ್ರಷರ್​ಗಳು, ಮತ್ತೆ ಶುರು; ಶಾಸಕರಿಗೂ ಡೋಂಟ್​ ಕೇರ್​ ರೋಧದ ನಡುವೆಯು ಓಪನ್​​

ಆ ಕ್ಷೇತ್ರವೊಂದರಲ್ಲಿ ಒಂದಲ್ಲ, ಎರಡೆಲ್ಲಾ ಬರೋಬ್ಬರಿ 70ಕ್ಕೂ ಹೆಚ್ಚು ಸ್ಟೋನ್ ಕ್ರಷರ್​ಗಳು ಹಾಗೂ ನೂರಕ್ಕೂ ಹೆಚ್ಚು ಕಲ್ಲುಕ್ವಾರಿಗಳಿವೆ. ಆದ್ರೆ, ಅಲ್ಲಿರುವ ಗಣಿ ಮಾಲೀಕರು ಸರ್ಕಾರದ ನೀತಿ ನಿಯಮಗಳನ್ನು ಉಲ್ಲಂಘಿಸಿ ಮನಸ್ಸೊ ಇಚ್ಚೆ ಸ್ಟೋನ್ ಕ್ರಷರ್​ಗಳ ಚಾಲನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಲ್ಲಿಯ ಶಾಸಕರ ಬೆಂಬಲಿಗರು ಧರಣಿ ಪ್ರತಿಭಟನೆ ನಡೆಸಿ ಕಲ್ಲು ಕ್ವಾರಿ ಕ್ರಷರ್​ಗಳಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಅಲ್ಲಿಯ ಕ್ರಷರ್​ಗಳನ್ನು ನಿಲ್ಲಿಸಿ ಬಿಸಿ ಮುಟ್ಟಿಸಲಾಗಿತ್ತು. ಆದರೆ, ಎಂದಿನಂತೆ ಮತ್ತೆ ಕಲ್ಲು ಕ್ವಾರಿ ಕ್ರಷರ್​ಗಳು ಆರಂಭವಾಗಿವೆ. 

ಚಿಕ್ಕಬಳ್ಳಾಪುರದಲ್ಲಿ ಬಂದಾಗಿದ್ದ ಸ್ಟೋನ್ ಕ್ರಷರ್​ಗಳು, ಮತ್ತೆ ಶುರು; ಶಾಸಕರಿಗೂ ಡೋಂಟ್​ ಕೇರ್​ ರೋಧದ ನಡುವೆಯು ಓಪನ್​​
ಚಿಕ್ಕಬಳ್ಳಾಪುರದಲ್ಲಿ ಮತ್ತೆ ಆರಂಭವಾದ ಸ್ಟೋನ್​ ಕ್ರಷರ್​
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 08, 2023 | 10:02 PM

Share

ಚಿಕ್ಕಬಳ್ಳಾಪುರ, ನ.08: ತಾಲ್ಲೂಕಿನ ಯಲಗಲಹಳ್ಳಿ ಕಲ್ಲುಪುಡಿ ಘಟಕಗಳ ಸೇಪರ್ ಜೋನ್‍ವೊಂದರಲ್ಲಿ ಒಂದಲ್ಲ, ಎರಡೆಲ್ಲಾ 42 ಸ್ಟೋನ್ ಕ್ರಷರ್​ಗಳಿವೆ. ಅವುಗಳಿಂದ ಉತ್ಪತ್ತಿಯಾಗುವ ಧೂಳು, ಶಬ್ದ, ಕೆಟ್ಟ ವಾಸನೆ, ಬ್ಲಾಸ್ಟಿಂಗ್ ಸೇರಿ ಪರಿಸರ ಮಾಲಿನ್ಯ ವಾಗುತ್ತಿದೆ. ಸ್ಟೋನ್ ಕ್ರಷರ್(Stone Crusher) ​ಗಳು ಸರ್ಕಾರಿ ನೀತಿ ನಿಯಮಗಳನ್ನು ಉಲ್ಲಂಘಿಸಿ ಗಣಿಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಹಾಗೂ ಸ್ಟೋನ್ ಕ್ರಷರ್​ಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರು ಪ್ರತಿಭಟನೆ ನಡೆಸಿ, ಕ್ರಷರ್​ಗಳಿಗೆ ನುಗ್ಗಿ ಟಿಪ್ಪರ್​ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಶಾಸಕರ ಬೆಂಬಲಿಗರ ಒತ್ತಡ, ಧರಣಿಗೆ ಮಣಿದಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೊಬಳಿಯಲ್ಲಿರುವ ಯಲಗಲಹಳ್ಳಿ ಕಲ್ಲುಪುಡಿ ಘಟಕಗಳ ಸೇಪರ್ ಜೋನ್​ನಲ್ಲಿನ ಕ್ರಷರ್​ಗಳನ್ನು ಕೆಲವು ದಿನಗಳ ಕಾಲ ಬಂದ್ ಮಾಡಿಸಿದ್ದರು. ಒಂದು ಟಿಪ್ಪರ್ ಸಹ ರಸ್ತೆಗೆ ಇಳಿಯದಂತೆ ಕ್ರಮ ಕೈಗೊಂಡಿದ್ದರು. ಆದ್ರೆ, ಇದೀಗ ಮತ್ತೆ ಕ್ರಷರ್​​ಗಳ ಕ್ವಾರಿಗಳು ಆರಂಭವಾಗಿವೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರದಲ್ಲಿ 42 ಸ್ಟೋನ್ ಕ್ರಷರ್​ಗಳು ಬಂದ್

ಈ ಕುರಿತು ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ‘ ಇಡೀ ಜಿಲ್ಲೆಯಲ್ಲಿ 170 ಕ್ಕೂ ಹೆಚ್ಚು ಕಲ್ಲು ಕ್ವಾರಿಗಳಿವೆ. ಅದರಲ್ಲಿ ಕಾನೂನು ಬಾಹಿರವಾಗಿ ನಡೆಸುತ್ತಿದ್ದ 42 ಕ್ವಾರಿಗಳನ್ನು ಮಾತ್ರ ಬಂದ್​ ಮಾಡಿಸಲಾಗಿತ್ತು. ಜೊತೆಗೆ ಉಳಿದ ಕಲ್ಲು ಕ್ವಾರಿಗಳ ಓನರ್​ಗಳಿಗೆ, ನಿಮ್ಮ ಯಾವುದೇ ವಾಹನಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ, ನೊಂದ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಅವರು ಹೊತ್ತಿಕೊಳ್ಳುವಂತೆ ಮಾಡಿದ್ದೇನೆ ಎಂದರು.

ಇನ್ನು ಚಿಕ್ಕಬಳ್ಳಾಪುರ ತಾಲೂಕಿನ ಆದೆನ್ನಗಾರಹಳ್ಳಿ, ಬುಶೆಟ್ಟಿಹಳ್ಳಿ, ಪೆರೇಸಂದ್ರ, ಹಳೇಪೆರೇಸಂದ್ರ, ಶೆಟ್ಟಿವಾರಹಳ್ಳಿ, ಹೂವಿನವಾರಹಳ್ಳಿ, ಮುತ್ತುಕದಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಗಣಿಗಾರಿಕೆಯಿಂದ ವಿವಿಧ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಆದ್ರೆ, ಈಗ ಕಾಯಿಲೆಗಳು ಮಾಯವಾದವಾ? ಇದ್ದಕ್ಕಿದ್ದಂತೆ ಕ್ರಷರ್ ಗಳನ್ನು ನಿಲ್ಲಿಸಿ ಇದ್ದಕ್ಕಿದ್ದಂತೆ ಆರಂಭ ಮಾಡಿರುವುದರಿಂದ ಸಾರ್ವಜನಿಕರಲ್ಲಿ ಗುಸು ಗುಸು ಪಿಸು ಪಿಸು ಆರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?