AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ಬೂತ್​ಗೆ ಕನ್ನ; ಈ ಎರಡು ವಸ್ತುಗಳನ್ನು ಬಿಟ್ಟು ಇನ್ನೇನನ್ನೂ ಮುಟ್ಟದ ಕಳ್ಳರು !

ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್​ ಕಾಲೇಜಿನ ಬಳಿ ಈ ಹಾಲಿನ ಬೂತ್​ ಇದೆ. ನಿನ್ನೆ ರಾತ್ರಿ ಕಳ್ಳರು ಬೂತ್​ನ ಛಾವಣಿಗೆ ಹಾಕಲಾಗಿದ್ದ ತಗಡಿನ ಶೀಟ್​​ನ್ನು ಕೊರೆದು ಒಳಹೊಕ್ಕಿದ್ದಾರೆ.

ನಂದಿನಿ ಹಾಲಿನ ಬೂತ್​ಗೆ ಕನ್ನ; ಈ ಎರಡು ವಸ್ತುಗಳನ್ನು ಬಿಟ್ಟು ಇನ್ನೇನನ್ನೂ ಮುಟ್ಟದ ಕಳ್ಳರು !
ನಂದಿನಿ ಹಾಲಿನ ಬೂತ್​ಗೆ ಕನ್ನ
TV9 Web
| Edited By: |

Updated on:Sep 09, 2021 | 1:51 PM

Share

ಚಿಕ್ಕಬಳ್ಳಾಪುರ: ಗೌರಿ-ಗಣೇಶನ ಹಬ್ಬಕ್ಕೆ ರಾಜ್ಯದೆಲ್ಲೆಡೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನರೆಲ್ಲ ಹೂವು-ಹಣ್ಣು, ಹಾಲು ಸೇರಿ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ಈ ಸಮಯದಲ್ಲೂ ಕಳ್ಳರು ತಮ್ಮ ಕೈಚಳಕ ತೋರಿದ್ದು, ಚಿಕ್ಕಬಳ್ಳಾಪುರದ ನಗರದಲ್ಲಿರುವ ಒಂದು ನಂದಿನಿ ಹಾಲಿನ ಬೂತ್​ಗೆ ಕನ್ನ ಹಾಕಿದ್ದಾರೆ. ಆದೆ ಈ ಕಳ್ಳರು ವಿಚಿತ್ರವಾಗಿದ್ದು, ನಂದಿನಿ ಬೂತ್​ನಲ್ಲಿದ್ದ ಜಾಮೂನು ಮತ್ತು ಬಾದಾಮಿ ಪೌಡರ್​ ಮಾತ್ರ ಕಳವು ಮಾಡಿದ್ದಾರೆ. 

ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್​ ಕಾಲೇಜಿನ ಬಳಿ ಈ ಹಾಲಿನ ಬೂತ್​ ಇದೆ. ನಿನ್ನೆ ರಾತ್ರಿ ಕಳ್ಳರು ಬೂತ್​ನ ಛಾವಣಿಗೆ ಹಾಕಲಾಗಿದ್ದ ತಗಡಿನ ಶೀಟ್​​ನ್ನು ಕೊರೆದು ಒಳಹೊಕ್ಕಿದ್ದಾರೆ. ಅದೂ ಕೂಡ ಒಂದು ಚೌಕದಷ್ಟು ಭಾಗ ಕತ್ತರಿಸಿದ್ದಾರೆ. ಆಗಲೇ ಹೇಳಿದಂತೆ ಕಳ್ಳರು ಹಾಲು, ಹಾಲಿನ ಉತ್ಪನ್ನಗಳನ್ನು ಮುಟ್ಟಲಿಲ್ಲ. ಅದೆಲ್ಲವೂ ಇದ್ದಂತೆ ಹಾಗೇ ಇದೆ. ಆದರೆ ಜಾಮೂನು ಮತ್ತು ಬಾದಾಮಿ ಪೌಡರ್​ ಪ್ಯಾಕೆಟ್​ಗಳು ಒಂದೂ ಕಾಣುತ್ತಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೂತ್​ ಮುಂದೆ ಬ್ಯಾರಿಕೇಡ್​ಗಳನ್ನು ಹಾಕಿದ್ದು, ಅಲ್ಲೀಗ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಇನ್ನು ಸುತ್ತಲಿನ ಜನರೂ ಕೂಡ ಅಂಗಡಿಯ ಬಳಿ ನೆರೆದಿದ್ದಾರೆ.

Nandini Booth

ನಂದಿನಿ ಹಾಲಿನ ಬೂತ್​

Published On - 1:50 pm, Thu, 9 September 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು