AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ಬೂತ್​ಗೆ ಕನ್ನ; ಈ ಎರಡು ವಸ್ತುಗಳನ್ನು ಬಿಟ್ಟು ಇನ್ನೇನನ್ನೂ ಮುಟ್ಟದ ಕಳ್ಳರು !

ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್​ ಕಾಲೇಜಿನ ಬಳಿ ಈ ಹಾಲಿನ ಬೂತ್​ ಇದೆ. ನಿನ್ನೆ ರಾತ್ರಿ ಕಳ್ಳರು ಬೂತ್​ನ ಛಾವಣಿಗೆ ಹಾಕಲಾಗಿದ್ದ ತಗಡಿನ ಶೀಟ್​​ನ್ನು ಕೊರೆದು ಒಳಹೊಕ್ಕಿದ್ದಾರೆ.

ನಂದಿನಿ ಹಾಲಿನ ಬೂತ್​ಗೆ ಕನ್ನ; ಈ ಎರಡು ವಸ್ತುಗಳನ್ನು ಬಿಟ್ಟು ಇನ್ನೇನನ್ನೂ ಮುಟ್ಟದ ಕಳ್ಳರು !
ನಂದಿನಿ ಹಾಲಿನ ಬೂತ್​ಗೆ ಕನ್ನ
TV9 Web
| Updated By: Lakshmi Hegde|

Updated on:Sep 09, 2021 | 1:51 PM

Share

ಚಿಕ್ಕಬಳ್ಳಾಪುರ: ಗೌರಿ-ಗಣೇಶನ ಹಬ್ಬಕ್ಕೆ ರಾಜ್ಯದೆಲ್ಲೆಡೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನರೆಲ್ಲ ಹೂವು-ಹಣ್ಣು, ಹಾಲು ಸೇರಿ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ಈ ಸಮಯದಲ್ಲೂ ಕಳ್ಳರು ತಮ್ಮ ಕೈಚಳಕ ತೋರಿದ್ದು, ಚಿಕ್ಕಬಳ್ಳಾಪುರದ ನಗರದಲ್ಲಿರುವ ಒಂದು ನಂದಿನಿ ಹಾಲಿನ ಬೂತ್​ಗೆ ಕನ್ನ ಹಾಕಿದ್ದಾರೆ. ಆದೆ ಈ ಕಳ್ಳರು ವಿಚಿತ್ರವಾಗಿದ್ದು, ನಂದಿನಿ ಬೂತ್​ನಲ್ಲಿದ್ದ ಜಾಮೂನು ಮತ್ತು ಬಾದಾಮಿ ಪೌಡರ್​ ಮಾತ್ರ ಕಳವು ಮಾಡಿದ್ದಾರೆ. 

ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್​ ಕಾಲೇಜಿನ ಬಳಿ ಈ ಹಾಲಿನ ಬೂತ್​ ಇದೆ. ನಿನ್ನೆ ರಾತ್ರಿ ಕಳ್ಳರು ಬೂತ್​ನ ಛಾವಣಿಗೆ ಹಾಕಲಾಗಿದ್ದ ತಗಡಿನ ಶೀಟ್​​ನ್ನು ಕೊರೆದು ಒಳಹೊಕ್ಕಿದ್ದಾರೆ. ಅದೂ ಕೂಡ ಒಂದು ಚೌಕದಷ್ಟು ಭಾಗ ಕತ್ತರಿಸಿದ್ದಾರೆ. ಆಗಲೇ ಹೇಳಿದಂತೆ ಕಳ್ಳರು ಹಾಲು, ಹಾಲಿನ ಉತ್ಪನ್ನಗಳನ್ನು ಮುಟ್ಟಲಿಲ್ಲ. ಅದೆಲ್ಲವೂ ಇದ್ದಂತೆ ಹಾಗೇ ಇದೆ. ಆದರೆ ಜಾಮೂನು ಮತ್ತು ಬಾದಾಮಿ ಪೌಡರ್​ ಪ್ಯಾಕೆಟ್​ಗಳು ಒಂದೂ ಕಾಣುತ್ತಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೂತ್​ ಮುಂದೆ ಬ್ಯಾರಿಕೇಡ್​ಗಳನ್ನು ಹಾಕಿದ್ದು, ಅಲ್ಲೀಗ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಇನ್ನು ಸುತ್ತಲಿನ ಜನರೂ ಕೂಡ ಅಂಗಡಿಯ ಬಳಿ ನೆರೆದಿದ್ದಾರೆ.

Nandini Booth

ನಂದಿನಿ ಹಾಲಿನ ಬೂತ್​

Published On - 1:50 pm, Thu, 9 September 21

ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ