AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ಬೂತ್​ಗೆ ಕನ್ನ; ಈ ಎರಡು ವಸ್ತುಗಳನ್ನು ಬಿಟ್ಟು ಇನ್ನೇನನ್ನೂ ಮುಟ್ಟದ ಕಳ್ಳರು !

ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್​ ಕಾಲೇಜಿನ ಬಳಿ ಈ ಹಾಲಿನ ಬೂತ್​ ಇದೆ. ನಿನ್ನೆ ರಾತ್ರಿ ಕಳ್ಳರು ಬೂತ್​ನ ಛಾವಣಿಗೆ ಹಾಕಲಾಗಿದ್ದ ತಗಡಿನ ಶೀಟ್​​ನ್ನು ಕೊರೆದು ಒಳಹೊಕ್ಕಿದ್ದಾರೆ.

ನಂದಿನಿ ಹಾಲಿನ ಬೂತ್​ಗೆ ಕನ್ನ; ಈ ಎರಡು ವಸ್ತುಗಳನ್ನು ಬಿಟ್ಟು ಇನ್ನೇನನ್ನೂ ಮುಟ್ಟದ ಕಳ್ಳರು !
ನಂದಿನಿ ಹಾಲಿನ ಬೂತ್​ಗೆ ಕನ್ನ
TV9 Web
| Edited By: |

Updated on:Sep 09, 2021 | 1:51 PM

Share

ಚಿಕ್ಕಬಳ್ಳಾಪುರ: ಗೌರಿ-ಗಣೇಶನ ಹಬ್ಬಕ್ಕೆ ರಾಜ್ಯದೆಲ್ಲೆಡೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನರೆಲ್ಲ ಹೂವು-ಹಣ್ಣು, ಹಾಲು ಸೇರಿ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ಈ ಸಮಯದಲ್ಲೂ ಕಳ್ಳರು ತಮ್ಮ ಕೈಚಳಕ ತೋರಿದ್ದು, ಚಿಕ್ಕಬಳ್ಳಾಪುರದ ನಗರದಲ್ಲಿರುವ ಒಂದು ನಂದಿನಿ ಹಾಲಿನ ಬೂತ್​ಗೆ ಕನ್ನ ಹಾಕಿದ್ದಾರೆ. ಆದೆ ಈ ಕಳ್ಳರು ವಿಚಿತ್ರವಾಗಿದ್ದು, ನಂದಿನಿ ಬೂತ್​ನಲ್ಲಿದ್ದ ಜಾಮೂನು ಮತ್ತು ಬಾದಾಮಿ ಪೌಡರ್​ ಮಾತ್ರ ಕಳವು ಮಾಡಿದ್ದಾರೆ. 

ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್​ ಕಾಲೇಜಿನ ಬಳಿ ಈ ಹಾಲಿನ ಬೂತ್​ ಇದೆ. ನಿನ್ನೆ ರಾತ್ರಿ ಕಳ್ಳರು ಬೂತ್​ನ ಛಾವಣಿಗೆ ಹಾಕಲಾಗಿದ್ದ ತಗಡಿನ ಶೀಟ್​​ನ್ನು ಕೊರೆದು ಒಳಹೊಕ್ಕಿದ್ದಾರೆ. ಅದೂ ಕೂಡ ಒಂದು ಚೌಕದಷ್ಟು ಭಾಗ ಕತ್ತರಿಸಿದ್ದಾರೆ. ಆಗಲೇ ಹೇಳಿದಂತೆ ಕಳ್ಳರು ಹಾಲು, ಹಾಲಿನ ಉತ್ಪನ್ನಗಳನ್ನು ಮುಟ್ಟಲಿಲ್ಲ. ಅದೆಲ್ಲವೂ ಇದ್ದಂತೆ ಹಾಗೇ ಇದೆ. ಆದರೆ ಜಾಮೂನು ಮತ್ತು ಬಾದಾಮಿ ಪೌಡರ್​ ಪ್ಯಾಕೆಟ್​ಗಳು ಒಂದೂ ಕಾಣುತ್ತಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೂತ್​ ಮುಂದೆ ಬ್ಯಾರಿಕೇಡ್​ಗಳನ್ನು ಹಾಕಿದ್ದು, ಅಲ್ಲೀಗ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಇನ್ನು ಸುತ್ತಲಿನ ಜನರೂ ಕೂಡ ಅಂಗಡಿಯ ಬಳಿ ನೆರೆದಿದ್ದಾರೆ.

Nandini Booth

ನಂದಿನಿ ಹಾಲಿನ ಬೂತ್​

Published On - 1:50 pm, Thu, 9 September 21

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು