AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

chikkaballapur rain: ಹುಯ್ಯೋ ಹುಯ್ಯೋ ಮಳೆರಾಯ ಎನ್ನುತ್ತಾ ತಂಬಿಟ್ಟು ದೀಪ ಹೊತ್ತು ಹೆಜ್ಜೆ ಹಾಕಿದ ಸಾವಿರಾರು ಮಹಿಳೆಯರು

Special puja for rain god: ಮಳೆಗಾಗಿ ಗ್ರಾಮ ದೇವತೆಗಳಿಗೆ ಕುರಿ ಕೋಳಿ ಬಲಿ ನೀಡಿ ಪ್ರಾರ್ಥನೆ, ಕರಾವಳಿ ಜಿಲ್ಲೆಗಳಲ್ಲಿ ನಿಲ್ಲೋ ನಿಲ್ಲೋ ಮಳೆರಾಯ! ಬಯಲು ಸೀಮೆ ಜಿಲ್ಲೆಗಳಲ್ಲಿ ಉಯ್ಯೋ ಉಯ್ಯೋ ಮಳೆರಾಯ. ಒಟ್ಟಿನಲ್ಲಿ ಕಾಳು ಇದ್ದವರಿಗೆ ಹಲ್ಲಿಲ್ಲ - ಹಲ್ಲಿದ್ದವರಿಗೆ ಕಾಳು ಇಲ್ಲ ಎಂಬ ಹಾಗೆ ದೇಶ ರಾಜ್ಯ ಸೇರಿದಂತೆ ಹಲವೆಡೆ ಮಳೆಯಿಂದ ನೆರೆ ಉಂಟಾಗಿ ಜನರ ಬದುಕು ಬರ್ಬಾದ್ ಆಗಿದ್ರೆ ಇತ್ತ ಬಯಲು ಸೀಮೆ ಜಿಲ್ಲೆಗಳಲ್ಲಿ ಮಳೆ ಬೆಳೆಗಾಗಿ ಕುರಿ ಕೋಳಿ ಬಲಿ ಕೊಡುವ ಮೂಲಕ ಮಳೆಗಾಗಿ ಪೂಜೆಗಳು ನಡೆದಿವೆ.

chikkaballapur rain: ಹುಯ್ಯೋ ಹುಯ್ಯೋ ಮಳೆರಾಯ ಎನ್ನುತ್ತಾ ತಂಬಿಟ್ಟು ದೀಪ ಹೊತ್ತು ಹೆಜ್ಜೆ ಹಾಕಿದ ಸಾವಿರಾರು ಮಹಿಳೆಯರು
ಬಯಲುಸೀಮೆಯಲ್ಲಿ ಹುಯ್ಯೊಹುಯ್ಯೋ ಮಳೆರಾಯ ಜನಪದ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸಾಧು ಶ್ರೀನಾಥ್​

Updated on:Jul 31, 2024 | 6:18 PM

ಚಿಕ್ಕಬಳ್ಳಾಪುರ: ಕೇರಳದ ವಯನಾಡು, ಮಹಾರಾಷ್ಟ್ರ, ಹಿಮಾಚಲ ಪ್ರದೇಶ ಸೇರಿದಂತೆ ನಮ್ಮದೇ ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನೆರೆ ಬಂದು ಊರುಗಳಿಗೆ ಊರೇ ಕೊಚ್ಚಿ ಹೋಗಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತ ಬಯಲು ಸೀಮೆ ಜಿಲ್ಲೆಗಳಲ್ಲಿ ಮಳೆ ಬೆಳೆ ಇಲ್ಲದೆ ಬರದ ಛಾಯೆ ಆವರಿಸಿದೆ. ಇಂತಹ ದುಃಸ್ಥಿತಿಯಲ್ಲಿ ಅತ್ತ ಕರಾವಳಿ ಜಿಲ್ಲೆಗಳಲ್ಲಿ ನಿಲ್ಲೋ ನಿಲ್ಲೋ ಮಳೆರಾಯ ಎನ್ನುತ್ತಿದ್ದರೆ ಇತ್ತ ಬಯಲು ಸೀಮೆ ಜಿಲ್ಲೆಗಳಲ್ಲಿ ಮಳೆಗಾಗಿ ಕೋಳಿ ಕುರಿ ಬಲಿ ನೀಡಿ ಹುಯ್ಯೋ ಹುಯ್ಯೋ ಮಳೆರಾಯ ಅಂತಾ ಪ್ರಾರ್ಥನೆ ಮಾಡಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ.

ರಾಜ್ಯದ ಕರಾವಳಿ, ಉತ್ತರ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯ ಅಬ್ಬರ ಜೋರಾಗಿ ಬೆಟ್ಟ ಗುಡ್ಡಗಳೇ ಕುಸಿದು ಸಾವು ನೋವು ಸಂಭವಿಸಿ ಜನ ನರಕ ಅನುಭವಿಸುತಿದ್ರೆ ಇತ್ತ ಮಳೆ ಬೆಳೆ ಇಲ್ಲದೆ ಬಯಲು ಸೀಮೆಯ ವಿಭಜಿತ ನೆರೆಯ ಜಿಲ್ಲೆಗಳಾದ ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸಮರ್ಪಕವಾಗಿ ಮಳೆಯೇ ಆಗ್ತಿಲ್ಲ. ಇದ್ರಿಂದ ಹುಯ್ಯೋ ಹುಯ್ಯೋ ಮಳೆರಾಯ ಅಂತ ಜಾನಪದ ಶೈಲಿಯಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಅಜ್ಜವಾರ ಗ್ರಾಮದಲ್ಲಿ ಗ್ರಾಮಸ್ಥರು ಗ್ರಾಮ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ಜಾತ್ರೆ ಮಾಡಿದ್ದಾರೆ. ದೇವರಿಗೆ ಕುರಿ ಕೋಳಿ ಬಲಿ ನೀಡಿ ಮಳೆಗಾಗಿ ಪ್ರಾರ್ಥನೆ ಮಾಡಿದ್ರು. 19 ವರ್ಷಗಳ ನಂತರ ಗ್ರಾಮದಲ್ಲಿ ಅನಂತ ಪದ್ಮಸ್ವಾಮಿ, ಮುದಗಾನ ಕುಂಟೆ ಗಂಗಮ್ಮ, ಮುನೇಶ್ವರಸ್ವಾಮಿ, ಸಪ್ಪಲಮ್ಮ, ದುರ್ಗಾದೇವಿ ಮಹೇಶ್ವರಿ ಸೇರಿದಂತೆ ಒಂಬತ್ತು ಗ್ರಾಮ ದೇವತೆಗಳಿಗೆ ತಂಬಿಟ್ಟು ದೀಪ ಬೆಳಗಿದರು. ಗ್ರಾಮಸ್ಥರು ತಮ್ಮ ಬಂಧು ಬಳಗ ಸೇರಿ ಸಂಭ್ರಮದಿಂದ ದೀಪೋತ್ಸವ ಆಚರಣೆ ಮಾಡಿದ್ರು.  ಸಾವಿರಾರು ಮಹಿಳೆಯರು ಸಿಂಗಾರಗೊಂಡು ತಲೆ ಮೇಲೆ ತಂಬಿಟ್ಟು ದೀಪ ಹೊತ್ತು ಹೆಜ್ಜೆ ಹಾಕಿದ್ರು, ದೀಪ ಹೊತ್ತ ಮಹಿಳೆಯರ ಮುಂದೆ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಿ ಮಳೆ ಬೆಳೆ ಆಗಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಕಾಳು ಇದ್ದವರಿಗೆ ಹಲ್ಲಿಲ್ಲ – ಹಲ್ಲಿದ್ದವರಿಗೆ ಕಾಳು ಇಲ್ಲ ಎಂಬ ಹಾಗೆ ದೇಶ ರಾಜ್ಯ ಸೇರಿದಂತೆ ಹಲವೆಡೆ ಮಳೆಯಿಂದ ನೆರೆ ಉಂಟಾಗಿ ಜನರ ಬದುಕು ಬರ್ಬಾದ್ ಆಗಿದ್ರೆ ಇತ್ತ ಬಯಲು ಸೀಮೆ ಜಿಲ್ಲೆಗಳಲ್ಲಿ ಮಳೆ ಬೆಳೆಗಾಗಿ ಕುರಿ ಕೋಳಿ ಬಲಿ ಕೊಡುವ ಮೂಲಕ ಮಳೆಗಾಗಿ ಪೂಜೆಗಳು ನಡೆದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:07 pm, Wed, 31 July 24

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ