AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಬಲವಾಯ್ತು ಅನುಮಾನ

ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ ಆರೋಪದಡಿ ಕಾಂಗ್ರೆಸ್ ನಾಯಕ ರಾಜೀವ್ ಗೌಡಗೆ ಕರ್ನಾಟಕ ಹೈಕೋರ್ಟ್ ತಪರಾಕಿ ಹಾಕಿದರೂ ಇನ್ನೂ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಪೊಲೀಸರು ಅಸಹಾಯಕರಾಗಿದ್ದಾರೆ ಎನ್ನಲಾಗಿದೆ. ರಾಜೀವ್ ಗೌಡರನ್ನು ಪಕ್ಷದಿಂದ ಅಮಾನತು ಮಾಡಿದ್ದರೂ ಬಂಧನವಾಗದಿರುವುದು ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಬಲವಾಯ್ತು ಅನುಮಾನ
ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ?
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 24, 2026 | 11:17 AM

Share

ಚಿಕ್ಕಬಳ್ಳಾಪುರ, ಜನವರಿ 24: ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡಗೆ (Rajeev Gowda) ಕರ್ನಾಟಕ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ. ಇದರಿಂದ, ಪರೋಕ್ಷವಾಗಿ ಸರ್ಕಾರಕ್ಕೂ ಮುಖಭಂಗವಾಗಿದೆ. ಇಷ್ಟೆಲ್ಲಾ ಆದರೂ ರಾಜೀವ್ ಗೌಡ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರೆಯೇ ಎಂಬ ಅನುಮಾನ ಇದೀಗ ಬಲವಾಗಿದೆ. ಹಿರಿಯ ಮಂತ್ರಿಯೊಬ್ಬರು ರಾಜೀವ್ ಗೌಡ ಪತ್ನಿ ಸಹನಾ ಜೊತೆ ದೂರವಾಣಿ ಸಂಪರ್ಕದಲ್ಲಿದ್ದಾರೆ. ಅವರೇ ಬಂಧನದಿಂದ ತಪ್ಪಿಸಿಕೊಳ್ಳಲು ಬೇಕಾದ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂಬ ವಿಚಾರ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಪ್ರಭಾವಿ ಸಚಿವರ ಕಾರಣ ಪೊಲೀಸರು ಅಸಹಾಯಕರಾಗಿದ್ದಾರೆ. ಇದರಿಂದಾಗಿ ರಾಜೀವ್ ಗೌಡ ಬಂಧನ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಪೊಲೀಸರು ಶೋಧ ನಡೆಸಿದ್ದರು ಇನ್ನೂ ರಾಜೀವ್ ಗೌಡ ಬಂಧನ ವಾಗದಿರುವುದು, ಪ್ರಭಾವಿ ಸಚಿವರ ಹಸ್ತಕ್ಷೇಪದ ಕುರಿತ ಅನುಮಾನಗಳಿಗೆ ಪುಷ್ಟಿ ನೀಡಿದೆ.

ಶಿಡ್ಲಘಟ್ಟ ಪೊಲೀಸರಿಂದ ನಾಲ್ಕು ನೋಟಿಸ್ ಜಾರಿ

ಪೌರಾಯುಕ್ತೆಗೆ ನಿಂದಿಸಿರುವ ಪ್ರಕರಣದಲ್ಲಿ ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಪೊಲೀಸರು ನಾಲ್ಕು ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ಮನೆಗಳಿಗೆ ಬೀಗ ಜಡಿದು ರಾಜೀವ್ ಗೌಡ ತಲೆಮೆರೆಸಿಕೊಂಡಿದ್ದಾರೆ. ಅವರ ಪತ್ನಿ ಸಹನಾ ಕೂಡ ಮನೆಯಲ್ಲಿ ಇಲ್ಲವೆಂಬ ಮಾಹಿತಿ ಲಭ್ಯವಾಗಿದೆ.

ಮತ್ತೊಂದೆಡೆ ರಾಜೀವ್ ಗೌಡ ವಿಚಾರ ಚಿಕ್ಕಬಳ್ಳಾಪುರ, ಕೋಲಾರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ನ ಎರಡು ಬಣಗಳ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಯಿತೇ ಎಂಬ ಪ್ರಶ್ನೆಯೂ ಮೂಡಿದೆ. ಒಬ್ಬರು ಪ್ರಭಾವಿ ಸಚಿವರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದರೆ, ಮತ್ತೊಬ್ಬರು ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ

ಸದ್ಯ ರಾಜೀವ್ ಗೌಡರನ್ನು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಶಿಫಾರಸಿನ ಮೇರೆಗೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿ ರಾಜೀವ್ ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಆದರೆ ಅದಕ್ಕೆ ಯಾವುದೇ ಉತ್ತರ, ಪ್ರತಿಕ್ರಿಯೆ ನೀಡಿರಲಿಲ್ಲ. ಇದರ ಬೆನ್ನಲ್ಲೇ ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷರಿಗೆ ಶಿಫಾರಸು ಮಾಡಿದ್ದರು. ಸದ್ಯ ಇಷ್ಟೆಲ್ಲ ಆಗಿಯೂ ರಾಜೀವ್ ಗೌಡ ಬಂಧ ಆಗದಿರುವುದು, ಪ್ರಭಾವಿ ಸಚಿವರೊಬ್ಬರು ಆತನ ರಕ್ಷಣೆ ನಿಂತಿದ್ದಾರೆ ಎಂಬ ಅನುಮಾನಗಳಿಗೆ ಪುಷ್ಟಿ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ