AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಕ್ರಾಸ್ ಮಾಡುವಾಗ ಬೈಕ್ಗೆ ಬಸ್ ಡಿಕ್ಕಿ; ಚಿಕ್ಕಬಳ್ಳಾಪುರದ ಹೊನ್ನೇನಹಳ್ಳಿ ಗೇಟ್ ಬಳಿ ಬೆಂಗಳೂರು ಮೂಲದ ಮೂವರ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿ ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ರಸ್ತೆ ಕ್ರಾಸ್ ಮಾಡುವಾಗ ಬೈಕ್ಗೆ ಬಸ್ ಡಿಕ್ಕಿ; ಚಿಕ್ಕಬಳ್ಳಾಪುರದ ಹೊನ್ನೇನಹಳ್ಳಿ ಗೇಟ್ ಬಳಿ ಬೆಂಗಳೂರು ಮೂಲದ ಮೂವರ ಸಾವು
ರಸ್ತೆ ಕ್ರಾಸ್ ಮಾಡುವಾಗ ಬೈಕ್ಗೆ ಬಸ್ ಡಿಕ್ಕಿ; ಚಿಕ್ಕಬಳ್ಳಾಪುರದ ಹೊನ್ನೇನಹಳ್ಳಿ ಗೇಟ್ ಬಳಿ ಬೆಂಗಳೂರು ಮೂಲದ ಮೂವರ ಸಾವು
TV9 Web
| Updated By: ಆಯೇಷಾ ಬಾನು|

Updated on:Feb 28, 2022 | 9:52 AM

Share

ಚಿಕ್ಕಬಳ್ಳಾಪುರ: ರಸ್ತೆ ಕ್ರಾಸ್ ಮಾಡುವಾಗ ಬೈಕ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ನಾಯಿಮರಿಗೆ ಸ್ನಾನ ಮಾಡಿಸಲು ಹೋಗಿ ಸಂಪ್​ಗೆ ಬಿದ್ದು 7 ವರ್ಷದ ಬಾಲಕಿ ಕೊನೆಯುಸಿರು 7 ವರ್ಷ ವಯಸ್ಸಿನ ಪ್ರಾರ್ಥನಾ ನಾಯಿಮರಿಗೆ ಸ್ನಾನ ಮಾಡಿಸಲು ಹೋಗಿ ಸಂಪ್​ಗೆ ಬಿದ್ದು ಸಾವನ್ನಪ್ಪಿದ್ದಾಳೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಬಳಿಯ ಇಂದ್ರಾವತಿ ಕಾಫಿ ಎಸ್ಟೇಟ್​ನಲ್ಲಿ ಈಕೆ ಪೋಷಕರು ಕೆಲ್ಸ ಮಾಡ್ತಿದ್ರು. ಗೀತಾ ಹಾಗೂ ಶೇಷಪ್ಪ ದಂಪತಿ ತಮ್ಮ ಮಗಳಾದ ಪ್ರಾರ್ಥನಾಳನ್ನ ಮನೆ ಬಳಿ ಬಿಟ್ಟು ನಿನ್ನೆ ಕೆಲಸಕ್ಕೆ ತೆರಳಿದ್ರು. ಆಗ ಮನೆ ಪಕ್ಕದ ಮತ್ತೊಂದು ಮಗು ಆಟವಾಡಲು ಬಂದಿದೆ. ಇಬ್ಬರು ಸೇರಿ ಅಲ್ಲೇ ಇದ್ದ ನಾಯಿ ಮರಿಗೆ ಸ್ನಾನ ಮಾಡಿಸಲು ನೀರಿನ ಸಂಪ್​ಗೆ ತೆರಳಿದ್ದಾರೆ. ಈ ವೇಳೆ ಪ್ರಾರ್ಥನಾ ಕಾಲು ಜಾರಿ ಸಂಪ್​ಗೆ ಬಿದ್ದಿದ್ದಾಳೆ. ಅಷ್ಟ್ರಲ್ಲಿ ಮತ್ತೊಂದು ಮಗು ಓಡಿಬಂದು ಪೋಷಕರಿಗೆ ಹೇಳಿದೆ. ಕೂಡಲೇ ಪೋಷಕರು ಸಂಪ್ ಬಳಿ ಬಂದು ನೋಡುವಷ್ಟ್ರಲ್ಲಿ ಪ್ರಾರ್ಥನಾ ಸಾವನ್ನಪ್ಪಿದ್ದಾಳೆ.

2 ವಾರಗಳ ಹಿಂದಷ್ಟೇ ಅಜ್ಜಿ ಮನೆಯಿಂದ ಬಂದಿದ್ದಳು ಬಾಲಕಿ ಗೀತಾ ಹಾಗೂ ಶೇಷಪ್ಪ ದಂಪತಿಗೆ ಮೂವರು ಮಕ್ಕಳಿದ್ದು, ಇಬ್ಬರು ಗಂಡು ಮಕ್ಕಳು ಈಗಾಗ್ಲೇ ಕಾಲೇಜಿಗೆ ಹೋಗ್ತಿದ್ದಾರೆ. ಹೆಣ್ಣು ಮಗು ಬೇಕೆನ್ನೋ ಕಾರಣಕ್ಕೆ ಇಬ್ಬರು ಮಕ್ಕಳಾಗಿ 10 ವರ್ಷಗಳ ಬಳಿಕ ಪ್ರಾರ್ಥನಾ ಜನಿಸಿದ್ದಳು. ಆದ್ರೆ ದಂಪತಿ ಕೆಲ್ಸಕ್ಕೆ ಹೋಗ್ತಿದ್ರಿಂದ ಪ್ರಾರ್ಥನಾಳನ್ನ ಅಜ್ಜಿ ಮನೆಯಲ್ಲಿಯೇ ಬಿಟ್ಟಿದ್ರು. ಬಾಲಕಿ ಆರೋಗ್ಯದಲ್ಲಿ ಏರುಪೇರಾಗಿದೆ ಅಂತಾ 2 ವಾರಗಳ ಹಿಂದಷ್ಟೇ ಪೋಷಕರು ತಮ್ಮ ಮನೆಗೆ ಕರೆ ತಂದಿದ್ರು. ಆದ್ರೆ ಕ್ರೂರ ವಿಧಿ ಬಾಲಕಿ ಉಸಿರನ್ನೇ ನಿಲ್ಲಿಸಿದೆ. ಸದ್ಯ ಸಂಪ್ 15 ಅಡಿ ಆಳವಿದ್ರೂ ಮುಚ್ಚದೆ ನಿರ್ಲಕ್ಷ್ಯ ತೋರಿದ್ದೇ ಇದಕ್ಕೆಲ್ಲಾ ಕಾರಣ ಎನ್ನಲಾಗ್ತಿದೆ.

ಇದನ್ನೂ ಓದಿ: Russia-Ukraine War: ರಷ್ಯಾದ 3500ಕ್ಕೂ ಹೆಚ್ಚು ಸೈನಿಕರನ್ನು ಕೊಂದಿದ್ದಾಗಿ ಹೇಳಿದ ಉಕ್ರೇನ್​; ಇಲ್ಲಿದೆ ಪ್ರಮುಖ ಬೆಳವಣಿಗೆಗಳ ವಿವರ

Maha Shivaratri 2022: ಶಿವರಾತ್ರಿ ಉಪವಾಸಕ್ಕೆ ಕೊಪ್ಪಳದಲ್ಲಿ ಹಣ್ಣಿನ ಮೇಳ! ರೈತರಿಗೂ ಸಂಭ್ರಮ, ಶಿವ ಭಕ್ತರಿಗೂ ಆನಂದ!

Published On - 9:45 am, Mon, 28 February 22

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು