ಶಾಸಕ ಪ್ರದೀಪ್‌ ಈಶ್ವರ್‌ಗೆ ಟಾಲಿವುಡ್‌ನಲ್ಲಿ ಬೇಡಿಕೆ, ಚಿರಂಜೀವಿ ಜೊತೆ ನಟಿಸಲು ಆಫರ್

ಮೋಟಿವೇಷನಲ್ ಸ್ಪೀಕರ್, ಶಾಸಕರು, ರಾಜ್ಯದ ಯುವಕರಣ್ಮಣಿ, ನೀಟ್ ಕೋಚಿಂಗ್ ಕ್ರಾಂತಿಯ ಮೂಲಕ ತಮ್ಮದೇ ಛಾಪು ಮೂಡಿಸಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್‌ಈಶ್ವರ್, ಬಿಗ್‌ಬಾಸ್‌ನಲ್ಲಿ ಅತಿಥಿಯಾಗಿ ಕಾಣಿಸಿಕೊಳ್ಳುವುದರ ಮೂಲಕ ಖ್ಯಾತಿಗಳಿಸಿದ್ದರು. ಇದರಿಂದ ಶಾಸಕ ಪ್ರದೀಪ್‌ಈಶ್ವರ್‌ರವರ ಪ್ರತಿಭೆಯನ್ನು ಗುರುತಿಸಿ ಟಾಲಿವುಡ್ ತೆಲುಗು ಚಲನಚಿತ್ರ ರಂಗದಲ್ಲಿ ನಟಿಸಲು ಬೇಡಿಕೆ ಬಂದಿದೆ.

ಶಾಸಕ ಪ್ರದೀಪ್‌ ಈಶ್ವರ್‌ಗೆ ಟಾಲಿವುಡ್‌ನಲ್ಲಿ ಬೇಡಿಕೆ, ಚಿರಂಜೀವಿ ಜೊತೆ ನಟಿಸಲು ಆಫರ್
ಚಿರಂಜೀವಿ, ಪ್ರದೀಪ್‌ ಈಶ್ವರ್‌
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 29, 2024 | 6:38 PM

ಚಿಕ್ಕಬಳ್ಳಾಪುರ, (ಆಗಸ್ಟ್ 29) : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿದ್ದರು. ಇವರ ಜತೆ ಇವರ ಮಾತುಗಳು ಸಹ ಮಾತುಗಳು ಗೆದ್ದಿದ್ದವು. ಹೌದು..ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರ ಮಾತು, ಡೈಲಾಗ್​ಗಳೊಂದಿಗೆ  ಗಮನ ಸೆಳೆದಿದ್ದರು. ಯಾವ ಸಿನಿಮಾ ಸ್ಟಾರ್​ಗೆ ಕಮ್ಮಿ ಇಲ್ಲವಂತೆ ಡೈಲಾಗ್​ ಹೊಡೆಯುವುದರಲ್ಲಿ ಫೇಮಸ್ ಆಗಿದ್ದಾರೆ. ಇದೀಗ ಇವರಿಗೆ ಟಾಲಿವುಡ್‌ನಲ್ಲಿ ಭಾರೀ ಬೇಡಿಕೆ ಬಂದಿದೆ. ಹೌದು…ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಪ್ರದೀಪ್​ ಈಶ್ವರ್​ಗೆ ಆಫರ್​ ಬಂದಿದೆ.

ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಆಫರ್

ಟಾಲಿವುಡ್ ಚಿತ್ರರಂಗದ ದಿಗ್ಗಜ ಮೆಗಾಸ್ಟಾರ್ ಚಿರಂಜೀವಿಯವರು ಸಾಮಾಜಿಕ ಕ್ರಾಂತಿಯ ಚಲನಚಿತ್ರವೊಂದರಲ್ಲಿ ನಟಿಸಲು ಸನ್ನದರಾಗುತ್ತಿದ್ದಾರಂತೆ. ಇದರಿಂದ ಚಿರಂಜೀವಿ ಜೊತೆ ಬಣ್ಣ ಹಚ್ಚಿ ನಟಿಸಲು ಶಾಸಕ ಪ್ರದೀಪ್‌ಈಶ್ವರ್‌ಗೆ ಕರೆ ಬಂದಿದೆಯಂತೆ. ಸ್ವತಃ ಮೆಗಸ್ಟಾರ್ ಚಿರಂಜೀವಿಯವರ ಚಲನಚಿತ್ರವನ್ನು ನಿರ್ದೇಶಿಸುತ್ತಿರುವ ಖ್ಯಾತ ನಿರ್ದೇಶಕರೊಬ್ಬರು ಮೊನ್ನೆ ಶಾಸಕ ಪ್ರದೀಪ್‌ಈಶ್ವರ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆಂದು ಶಾಸಕ ಪ್ರದೀಪ್‌ಈಶ್ವರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಮಾತ್ರವಲ್ಲ ತೆಲಂಗಾಣದಲ್ಲೂ ಪ್ರದೀಪ್‌ ಈಶ್ವರ್ ಜನಪ್ರಿಯ

ಕರ್ನಾಟಕದಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಅಂದಿನ ಪ್ರಭಾವಿ ಮಂತ್ರಿ, ಭಾವಿ ಮುಖ್ಯಮಂತ್ರಿಯೆಂದೇ ಬಿಂಬಿತಗೊಂಡಿದ್ದ ಡಾ|| ಕೆ.ಸುಧಾಕರ್‌ರವರನ್ನು ಸೋಲಿಸಿ, ಪ್ರದೀಪ್‌ಈಶ್ವರ್ ಜಯಭೇರಿ ಭಾರಿಸಿದ್ದರು. ಇದರಿಂದ ರಾಜ್ಯದಲ್ಲಿ ಪ್ರದೀಪ್‌ಈಶ್ವರ್ ರಾತ್ರೋರಾತ್ರಿ ರೆಬಲ್‌ಸ್ಟಾರ್ ಆಗಿ ಜನಮನ್ನಣೆ ಪಡೆದಿದ್ದರು.

ತೆಲಂಗಾಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಪ್ರದೀಪ್‌ ಈಶ್ವರ್

ತೆಲಂಗಾಣದಲ್ಲಿ ನಡೆದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳನ್ನು ಶಾಸಕ ಪ್ರದೀಪ್‌ಈಶ್ವರ್ ಉಸ್ತುವಾರಿ ವಹಿಸಿದ್ದರು. ತಮ್ಮದೇ ಆದ ಡೈಲಾಗ್ ಜೊತೆಗೆ ಪವನ್‌ಕಲ್ಯಾಣ್, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಇನ್ನಿತರರ ಡೈಲಾಗ್‌ಗಳನ್ನು ಹೇಳುವುದರ ಮೂಲಕ ತೆಲಂಗಾಣದ ಜನರಲ್ಲಿ ತಮ್ಮ ಪರ ಬಿರುಗಾಳಿ ಎಬ್ಬಿಸಿದ್ದರು. ಇದರಿಂದ ಶಾಸಕ ಪ್ರದೀಪ್‌ಈಶ್ವರ್‌ರವರ ಜನಪ್ರಿಯತೆಯನ್ನು ಗಮನಿಸಿ ಈಗ ತೆಲುಗು ಸಿನಿರಂಗ ಕೈಬೀಸಿ ಕರೆಯುತ್ತಿದೆ.

ಆದರೆ, ಪ್ರದೀಪ್ ಈಶ್ವರ್ ಈಗ ತಾನೇ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಇದರ ಮಧ್ಯ ಟಾಲಿವುಡ್​ನ ಈ ಆಫರ್​ಅನ್ನು ಅವರು ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ