AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಪ್ರದೀಪ್‌ ಈಶ್ವರ್‌ಗೆ ಟಾಲಿವುಡ್‌ನಲ್ಲಿ ಬೇಡಿಕೆ, ಚಿರಂಜೀವಿ ಜೊತೆ ನಟಿಸಲು ಆಫರ್

ಮೋಟಿವೇಷನಲ್ ಸ್ಪೀಕರ್, ಶಾಸಕರು, ರಾಜ್ಯದ ಯುವಕರಣ್ಮಣಿ, ನೀಟ್ ಕೋಚಿಂಗ್ ಕ್ರಾಂತಿಯ ಮೂಲಕ ತಮ್ಮದೇ ಛಾಪು ಮೂಡಿಸಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್‌ಈಶ್ವರ್, ಬಿಗ್‌ಬಾಸ್‌ನಲ್ಲಿ ಅತಿಥಿಯಾಗಿ ಕಾಣಿಸಿಕೊಳ್ಳುವುದರ ಮೂಲಕ ಖ್ಯಾತಿಗಳಿಸಿದ್ದರು. ಇದರಿಂದ ಶಾಸಕ ಪ್ರದೀಪ್‌ಈಶ್ವರ್‌ರವರ ಪ್ರತಿಭೆಯನ್ನು ಗುರುತಿಸಿ ಟಾಲಿವುಡ್ ತೆಲುಗು ಚಲನಚಿತ್ರ ರಂಗದಲ್ಲಿ ನಟಿಸಲು ಬೇಡಿಕೆ ಬಂದಿದೆ.

ಶಾಸಕ ಪ್ರದೀಪ್‌ ಈಶ್ವರ್‌ಗೆ ಟಾಲಿವುಡ್‌ನಲ್ಲಿ ಬೇಡಿಕೆ, ಚಿರಂಜೀವಿ ಜೊತೆ ನಟಿಸಲು ಆಫರ್
ಚಿರಂಜೀವಿ, ಪ್ರದೀಪ್‌ ಈಶ್ವರ್‌
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 29, 2024 | 6:38 PM

Share

ಚಿಕ್ಕಬಳ್ಳಾಪುರ, (ಆಗಸ್ಟ್ 29) : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿದ್ದರು. ಇವರ ಜತೆ ಇವರ ಮಾತುಗಳು ಸಹ ಮಾತುಗಳು ಗೆದ್ದಿದ್ದವು. ಹೌದು..ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರ ಮಾತು, ಡೈಲಾಗ್​ಗಳೊಂದಿಗೆ  ಗಮನ ಸೆಳೆದಿದ್ದರು. ಯಾವ ಸಿನಿಮಾ ಸ್ಟಾರ್​ಗೆ ಕಮ್ಮಿ ಇಲ್ಲವಂತೆ ಡೈಲಾಗ್​ ಹೊಡೆಯುವುದರಲ್ಲಿ ಫೇಮಸ್ ಆಗಿದ್ದಾರೆ. ಇದೀಗ ಇವರಿಗೆ ಟಾಲಿವುಡ್‌ನಲ್ಲಿ ಭಾರೀ ಬೇಡಿಕೆ ಬಂದಿದೆ. ಹೌದು…ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಪ್ರದೀಪ್​ ಈಶ್ವರ್​ಗೆ ಆಫರ್​ ಬಂದಿದೆ.

ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಆಫರ್

ಟಾಲಿವುಡ್ ಚಿತ್ರರಂಗದ ದಿಗ್ಗಜ ಮೆಗಾಸ್ಟಾರ್ ಚಿರಂಜೀವಿಯವರು ಸಾಮಾಜಿಕ ಕ್ರಾಂತಿಯ ಚಲನಚಿತ್ರವೊಂದರಲ್ಲಿ ನಟಿಸಲು ಸನ್ನದರಾಗುತ್ತಿದ್ದಾರಂತೆ. ಇದರಿಂದ ಚಿರಂಜೀವಿ ಜೊತೆ ಬಣ್ಣ ಹಚ್ಚಿ ನಟಿಸಲು ಶಾಸಕ ಪ್ರದೀಪ್‌ಈಶ್ವರ್‌ಗೆ ಕರೆ ಬಂದಿದೆಯಂತೆ. ಸ್ವತಃ ಮೆಗಸ್ಟಾರ್ ಚಿರಂಜೀವಿಯವರ ಚಲನಚಿತ್ರವನ್ನು ನಿರ್ದೇಶಿಸುತ್ತಿರುವ ಖ್ಯಾತ ನಿರ್ದೇಶಕರೊಬ್ಬರು ಮೊನ್ನೆ ಶಾಸಕ ಪ್ರದೀಪ್‌ಈಶ್ವರ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆಂದು ಶಾಸಕ ಪ್ರದೀಪ್‌ಈಶ್ವರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಮಾತ್ರವಲ್ಲ ತೆಲಂಗಾಣದಲ್ಲೂ ಪ್ರದೀಪ್‌ ಈಶ್ವರ್ ಜನಪ್ರಿಯ

ಕರ್ನಾಟಕದಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಅಂದಿನ ಪ್ರಭಾವಿ ಮಂತ್ರಿ, ಭಾವಿ ಮುಖ್ಯಮಂತ್ರಿಯೆಂದೇ ಬಿಂಬಿತಗೊಂಡಿದ್ದ ಡಾ|| ಕೆ.ಸುಧಾಕರ್‌ರವರನ್ನು ಸೋಲಿಸಿ, ಪ್ರದೀಪ್‌ಈಶ್ವರ್ ಜಯಭೇರಿ ಭಾರಿಸಿದ್ದರು. ಇದರಿಂದ ರಾಜ್ಯದಲ್ಲಿ ಪ್ರದೀಪ್‌ಈಶ್ವರ್ ರಾತ್ರೋರಾತ್ರಿ ರೆಬಲ್‌ಸ್ಟಾರ್ ಆಗಿ ಜನಮನ್ನಣೆ ಪಡೆದಿದ್ದರು.

ತೆಲಂಗಾಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಪ್ರದೀಪ್‌ ಈಶ್ವರ್

ತೆಲಂಗಾಣದಲ್ಲಿ ನಡೆದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳನ್ನು ಶಾಸಕ ಪ್ರದೀಪ್‌ಈಶ್ವರ್ ಉಸ್ತುವಾರಿ ವಹಿಸಿದ್ದರು. ತಮ್ಮದೇ ಆದ ಡೈಲಾಗ್ ಜೊತೆಗೆ ಪವನ್‌ಕಲ್ಯಾಣ್, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಇನ್ನಿತರರ ಡೈಲಾಗ್‌ಗಳನ್ನು ಹೇಳುವುದರ ಮೂಲಕ ತೆಲಂಗಾಣದ ಜನರಲ್ಲಿ ತಮ್ಮ ಪರ ಬಿರುಗಾಳಿ ಎಬ್ಬಿಸಿದ್ದರು. ಇದರಿಂದ ಶಾಸಕ ಪ್ರದೀಪ್‌ಈಶ್ವರ್‌ರವರ ಜನಪ್ರಿಯತೆಯನ್ನು ಗಮನಿಸಿ ಈಗ ತೆಲುಗು ಸಿನಿರಂಗ ಕೈಬೀಸಿ ಕರೆಯುತ್ತಿದೆ.

ಆದರೆ, ಪ್ರದೀಪ್ ಈಶ್ವರ್ ಈಗ ತಾನೇ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಇದರ ಮಧ್ಯ ಟಾಲಿವುಡ್​ನ ಈ ಆಫರ್​ಅನ್ನು ಅವರು ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ