AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರು: ಕೃಷಿ ಹೊಂಡದಲ್ಲಿ ಗಣೇಶ ವಿಸರ್ಜನೆಗೆ ನೀರು ನೋಡಲು ಹೋಗಿ ವಿದ್ಯಾರ್ಥಿಗಳಿಬ್ಬರು ಜಲ ಸಮಾಧಿ

ಹರಿ ಚರಣ್ ರೆಡ್ಡಿ(13) ಹಾಗೂ ಲಿಖಿತ್ (14) ಮೃತಪಟ್ಟ ದುರ್ದೈವಿಗಳು. ಕೃಷಿ ಹೊಂಡದಲ್ಲಿ ನೀರು ನೋಡಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.

ಗೌರಿಬಿದನೂರು: ಕೃಷಿ ಹೊಂಡದಲ್ಲಿ ಗಣೇಶ ವಿಸರ್ಜನೆಗೆ ನೀರು ನೋಡಲು ಹೋಗಿ ವಿದ್ಯಾರ್ಥಿಗಳಿಬ್ಬರು ಜಲ ಸಮಾಧಿ
ಕೃಷಿ ಹೊಂಡ
Follow us
preethi shettigar
|

Updated on:Sep 13, 2021 | 9:27 AM

ಚಿಕ್ಕಬಳ್ಳಾಫುರ: ಕೃಷಿ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಸಾವಿಗೀಡಾದ ಘಟನೆ ಚಿಕ್ಕಬಳ್ಳಾಫುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಳೆಊರು ಗ್ರಾಮದಲ್ಲಿ ನಡೆದಿದೆ. ಹರಿ ಚರಣ್ ರೆಡ್ಡಿ(13) ಹಾಗೂ ಲಿಖಿತ್ (14) ಮೃತಪಟ್ಟ ದುರ್ದೈವಿಗಳು. ಕೃಷಿ ಹೊಂಡದಲ್ಲಿ ನೀರು ನೋಡಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.

ಜಯಣ್ಣ ಎನ್ನುವವರಿಗೆ ಸೇರಿದ ಕೃಷಿ ಹೊಂಡದಲ್ಲಿ ಗಣೇಶ ವಿಸರ್ಜನೆಗೆ ನೀರು ನೋಡಲು ಬಾಲಕರು ಇಳಿದಿದ್ದು, ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಇಬ್ಬರು ಬಾಲಕರು 9ನೇ ತರಗತಿಯಲ್ಲಿ ಓದುತ್ತಿದ್ದರು. ಸದ್ಯ ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ದಂಪತಿ ಸಾವು; 1 ವರ್ಷದ ಹೆಣ್ಣು ಮಗು ಪಾರು ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮರಿನಾಯಕನಹಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ‌ದಂಪತಿ ಬಲಿ ಆಗಿದ್ದಾರೆ. ದಂಪತಿಯ 1 ವರ್ಷದ ಹೆಣ್ಣು ಮಗು ಅದೃಷ್ಟವಷಾತ್ ಪಾರಾಗಿದೆ. ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಸುರವನಹಳ್ಳಿ ನಿವಾಸಿ ದಂಪತಿ ಮೃತಪಟ್ಟಿದ್ದಾರೆ. 35 ವರ್ಷ ವಯಸ್ಸಿನ ರಾಜಪ್ಪ ಹಾಗೂ 28 ವರ್ಷ ವಯಸ್ಸಿನ ಮೌನಿಕಾ ಮೃತ ದುರ್ದೈವಿಗಳು. ಬೆಂಗಳೂರಿನಲ್ಲಿ ಜೆ.ಸಿ.ಬಿ ಆಪರೇಟರ್ ಆಗಿದ್ದ ರಾಜಪ್ಪ ದಂಪತಿಗಳು ಸಾವನ್ನಪ್ಪಿದ್ದಾರೆ. ಪುಟ್ಟ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಇಂದು ಸಂಜೆ ಜೀಪ್, ಕ್ಯಾಂಟರ್​ ನಡುವೆ ಡಿಕ್ಕಿ ಆಗಿ 8 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿತ್ತು. ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಸ್ಥಳದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯ ನಡೆಸಿದ್ದರು. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದರು. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್​ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದರು. ಅಪಘಾತ ಆದ ಜೀಪ್‌ನಲ್ಲಿ 14 ಪ್ರಯಾಣಿಕರು ಇದ್ದರು. ಜೀಪ್​ನಲ್ಲಿ ಇದ್ದ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್‌ನಲ್ಲಿ ಕೋಲಾರಕ್ಕೆ ರವಾನೆ ಮಾಡಲಾಗಿದೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪ್​ನಲ್ಲಿ ಇಬ್ಬರು ಮಕ್ಕಳು ಕೂಡ ಇದ್ದರು ಎಂದು ತಿಳಿಸಿದ್ದರು. ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಘಟನಾಸ್ಥಳಕ್ಕೆ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ:

ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಅಪಘಾತ: ದಂಪತಿ ಸಾವು; 1 ವರ್ಷದ ಹೆಣ್ಣು ಮಗು ಪಾರು

ಹರ್ಯಾಣದ ಗ್ರಾಮವೊಂದರಲ್ಲಿ ನಿಗೂಢ ಜ್ವರ; 8 ಮಕ್ಕಳು ಸಾವು, ಸ್ಥಳೀಯರ ಆಕ್ರೋಶ

Published On - 9:20 am, Mon, 13 September 21