Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮದಲ್ಲಿ ಜೋಡಿ ಹಕ್ಕಿಗಳ ಕಲರವ: ಪೊಲೀಸರನ್ನ ಕಂಡು ಪೊದೆಯಿಂದ ಬಂದ ಪ್ರೇಮಿಗಳು

ಪ್ರೇಮಿಗಳು ವ್ಯಾಲೆಂಟೈನ್ಸ್ ಡೇ ಆಚರಿಸಲು ಚಿಕ್ಕಬಳ್ಳಾಪುರದ ನಂದಿಗಿರಿಧಾಮಕ್ಕೆ ಭೇಟಿ ನೀಡಿದ್ದರು. ನಂದಿಗಿರಿಯ ಸುಂದರವಾದ ವಾತಾವರಣದಲ್ಲಿ ಪ್ರೇಮಿಗಳು ಸ್ವಚ್ಛಂದವಾಗಿ ತಮ್ಮ ಪ್ರೇಮವನ್ನು ವ್ಯಕ್ತಪಡಿಸಿದರು. ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರೂ, ಕೆಲವು ಜೋಡಿಗಳು ಸಾರ್ವಜನಿಕವಾಗಿಯೇ ಯಾರ ಅಂಜಿಕೆ ಅಳುಕು ಇಲ್ಲದೆ ಕಿಸ್ಸಿಂಗ್ ಮಾಡಿರುವಂತಹ ಘಟನೆ ನಡೆದಿದೆ.

ನಂದಿಗಿರಿಧಾಮದಲ್ಲಿ ಜೋಡಿ ಹಕ್ಕಿಗಳ ಕಲರವ: ಪೊಲೀಸರನ್ನ ಕಂಡು ಪೊದೆಯಿಂದ ಬಂದ ಪ್ರೇಮಿಗಳು
ನಂದಿಗಿರಿಧಾಮದಲ್ಲಿ ಜೋಡಿ ಹಕ್ಕಿಗಳ ಕಲರವ: ಪೊಲೀಸರನ್ನ ಕಂಡು ಪೊದೆಯಿಂದ ಬಂದ ಪ್ರೇಮಿಗಳು
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 14, 2025 | 7:30 PM

ಚಿಕ್ಕಬಳ್ಳಾಪುರ, ಫೆಬ್ರವರಿ 14: ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ (Valentine’s Day). ಈ ದಿನ ವಿಶ್ವದಾದ್ಯಂತ ಬಲು ಸಂಭ್ರಮದಿಂದ ಆಚರಿಸಲಾಗುತ್ತದೆ. ವ್ಯಾಲೆಂಟೈನ್ಸ್ ಡೇ ಪಾಶ್ಚಾತ್ಯ ದೇಶದ ಆಚರಣೆಯಾಗಿದ್ದರೂ, ಇಂದು ಭಾರತದ ಎಲ್ಲೆಡೆ ಸಡಗರದಿಂದ ಆಚರಿಸಲಾಗುತ್ತಿದೆ. ಇದೇ ಪ್ರೀತಿಗೆ ಇರುವ ಶಕ್ತಿ ಎಂದೇ ಹೇಳಬಹುದು. ಆದರೆ ಇಂದು ನಂದಿಗಿರಿಧಾಮದ ಪ್ರೇಮಿಗಳ ಸರಸ ಸಲ್ಲಾಪಕ್ಕೆ ಸಾಕ್ಷಿಯಾಗಿತ್ತು.

ರಾಜಧಾನಿ ಬೆಂಗಳೂರು ಪ್ರೇಮಿಗಳಿಗೆ ಅಚ್ಚುಮೆಚ್ಚಿನ ತಾಣಗಳಲ್ಲಿ ಒಂದು. ಆದರೆ ಇಂದು ವಾಲೆಂಟೈನ್ಸ್ ಡೇ ಹಿನ್ನಲೆ ರಾಜಧಾನಿ ಬೆಂಗಳೂರಿನ ಪ್ರೇಮಿಗಳು ಕೂಡ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಲಗ್ಗೆ ಇಟ್ಟಿದ್ದರು. ಅದರಲ್ಲಿ ಕೆಲವು ಜೋಡಿಗಳು ಯಾರ ಅಂಜು ಅಳುಕು, ಮುಲಾಜು ಇಲ್ಲದೆ ಸ್ವಚ್ಚಂದವಾಗಿ ಒಬ್ಬರಿಗೊಬ್ಬರು ತಬ್ಬಿ, ಮುದ್ದಾಡಿಕೊಂಡು ಪ್ರೇಮಿಗಳ ದಿನ ಆಚರಿಸಿದ್ದಾರೆ.

ಇದನ್ನೂ ಓದಿ: ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ

ಇಂದು ಬೆಂಗಳೂರು ಸೇರಿದಂತೆ ಸ್ಥಳಿಯ ಕೆಲವು ಪ್ರಣಯ ಪಕ್ಷಿಗಳು ನಂದಿಗಿರಿಧಾಮದಲ್ಲಿ ಪ್ರೇಮಿಗಳ ದಿನ ಆಚರಿಸಿಕೊಂಡಿದ್ದು ವಿಶೇಷವಾಗಿತ್ತು. ಇನ್ನೂ ನಂದಿಗಿರಿಧಾಮ ಅಂದರೆ ಪ್ರೀತಿ, ಪ್ರೇಮ ಪ್ರಣಯಕ್ಕೆ ಖ್ಯಾತಿ. ಪ್ರೇಮಿಗಳ ದಿನ ಅಂದರೆ ಕೇಳಬೇಕಾ. ಗಿರಿಧಾಮದದಲ್ಲಿ ಎತ್ತ ನೋಡಿದ್ರೂ ಪ್ರೀತಿಸುವ ಯುವ ಜೋಡಿಗಳೇ ಕಾಣುತ್ತಿದ್ದರು. ಇದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನಂದಿಗಿರಿಧಾಮ ಪೊಲೀಸ್ ಠಾಣೆಯ ಪೊಲೀಸರು ಗಿರಿಧಾಮದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ಪೊದೆಗಳಲ್ಲಿ ಅಡಗಿರುವ ಪ್ರೇಮಿಗಳನ್ನು ಬೈಯ್ದು ಕಳುಹಿಸಿದ್ದಾರೆ.

ಇದನ್ನೂ ಓದಿ: ವ್ಯಾಲೆಂಟೈನ್ಸ್ ಡೇಗೆ ಬಾಡಿಗೆ ಬಾಯ್ ಫ್ರೆಂಡ್: ಬೆಂಗಳೂರಿನಲ್ಲಿ ಸಂಚನ ಮೂಡಿಸಿದ QR ಕೋಡ್​​

ಪ್ರೀತಿ ಪ್ರೇಮ ಪ್ರಣಯದ ಹೆಸರಿನಲ್ಲಿ ಪ್ರೇಮ ದಿನಾಚರಣೆ ಮಾಡಿಕೊಂಡರೆ ಎಲ್ಲಿ ಸ್ನೇಹಿತರು ಹಾಗೂ ಸಂಬಂಧಿಗಳ ಕೈಗೆ ಸಿಕ್ಕಿ ಬೀಳುತ್ತೇವೆ ಅಂತ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ನಂದಿಗಿರಿಧಾಮಕ್ಕೆ ಆಗಮಿಸಿ ಕೆಲವು ಜೋಡಿಗಳು ಪ್ರೇಮ ನಿವೇದನೆಯಲ್ಲಿ ತೊಡಗಿದ್ದು ವಿಶೇಷವಾಗಿತ್ತು.

ಕರ್ನಾಟಕದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್