AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮೆಟೊ ತೋಟಕ್ಕೆ ಸರ್ಕಾರಿ ಬೋರ್ ವೇಲ್ ದುರ್ಬಳಕೆ: ವಾಟರ್ ಮ್ಯಾನ್​ ವಿರುದ್ಧ ಗ್ರಾಮಸ್ಥರು ಆಕ್ರೋಶ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಕಾನಗಮಾಕಲಪಲ್ಲಿ ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್​​​ ಶ್ರೀರಾಮನಾಯಕ್ ಎನ್ನುವವರು ಸರ್ಕಾರಿ ಬೋರ್ ವೆಲ್ ನೀರನ್ನ ತನ್ನ ಜಮೀನಿಗೆ ಹರಿಸಿಕೊಂಡು ಟೊಮೆಟೊ ಬೆಳೆಯುತ್ತಿದ್ದಾರೆ.

ಟೊಮೆಟೊ ತೋಟಕ್ಕೆ ಸರ್ಕಾರಿ ಬೋರ್ ವೇಲ್ ದುರ್ಬಳಕೆ: ವಾಟರ್ ಮ್ಯಾನ್​ ವಿರುದ್ಧ ಗ್ರಾಮಸ್ಥರು ಆಕ್ರೋಶ
ವಾಟರ್ ಮ್ಯಾನ್​​ ಶ್ರೀರಾಮನಾಯಕ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 23, 2023 | 6:20 PM

Share

ಚಿಕ್ಕಬಳ್ಳಾಪುರ, ಜುಲೈ 23: ಇತ್ತೀಚೆಗೆ ಟೊಮೆಟೊ (tomato) ಬೆಲೆ ಗಗನಕ್ಕೆ ಏರಿದ ಹಿನ್ನೆಲೆ ತಾನು ಟೊಮೆಟೊ ಬೆಳೆದು ಲಕ್ಷ ಲಕ್ಷ ಸಂಪಾದನೆ ಮಾಡಬುದು ಎಂದು ದುರಾಸೆಗೆ ಬಿದ್ದ ಗ್ರಾಮ ಪಂಚಾಯತಿಯೊಂದರ ವಾಟರ್ ಮ್ಯಾನ್ (water man) ಕುಡಿಯುವ ನೀರಿನ ಸರ್ಕಾರಿ ಬೋರ್ ವೇಲ್ ನನ್ನು ತನ್ನ ಸ್ವಂತ ಟೊಮೆಟೊ ತೋಟಕ್ಕೆ ಬಳಸಿಕೊಳ್ಳುತ್ತಿರುವ ಪ್ರಕರಣ ಬಯಲಾಗಿದೆ.

ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಕಾನಗಮಾಕಲಪಲ್ಲಿ ಗ್ರಾಮ ಪಂಚಾಯಿತಿಯ ವಾಟರ್ ಮನ್ ಶ್ರೀರಾಮನಾಯಕ್ ಎನ್ನುವವರು ಸರ್ಕಾರಿ ಬೋರ್ ವೆಲ್ ನೀರನ್ನ ತನ್ನ ಜಮೀನಿಗೆ ಹರಿಸಿಕೊಂಡು ಟೊಮೆಟೊ ಬೆಳೆಯುತ್ತಿದ್ದಾರೆ. ಇತ್ತ ಗ್ರಾಮದ ನಲ್ಲಿಯಲ್ಲಿ ನೀರು ಯಾಕೆ ಬರುತ್ತಿಲ್ಲ ಅಂತ ವಿಚಾರಿಸಿದಾಗ ವಾಟರ್ ಮ್ಯಾನ್​ನ ಅಸಲಿ ಕರಾಮತ್ತು ಬಯಲಾಗಿದೆ.

ಇದನ್ನೂ ಓದಿ: Chikkaballapur News: ಹಣ ದ್ವಿಗುಣದ ಆಸೆಗೆ 3.21 ಲಕ್ಷ ರೂಪಾಯಿ ಕಳೆದುಕೊಂಡ ಚಿಕ್ಕಬಳ್ಳಾಪುರ ಶಿಕ್ಷಕಿ!

ಕಾನಗಮಾಕಲಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂರಗಮಾಕಲಪಲ್ಲಿ ಗ್ರಾಮಕ್ಕೆ ಒಂದು ವಾರದಿಂದ ನೀರು ಪೂರೈಕೆಯಾಗಿಲ್ಲ. ಇದರಿಂದ ಗ್ರಾಮದ ಮಹಿಳೆಯರು ಗ್ರಾಮ ಹೊರವಲಯದ ಕಿಲೋಮೀಟರ್ ದೂರ ಸಾಗಿ ಖಾಸಗಿ ಬೋರ್ ವೆಲ್​ಗಳಿಂದ ನೀರು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರಿ ಬೋರ್ ವೇಲ್​ನಿಂದ ಗ್ರಾಮಕ್ಕೆ ನೀರು ಪೂರೈಕೆ ಮಾಡುತ್ತಿಲ್ಲ ಅಂತ ಕೇಳಿದ ಗ್ರಾಮಸ್ಥರಿಗೆ ವಾಟರ್ ಮ್ಯಾನ್ ಶ್ರೀರಾಮನಾಯಕ್ ಧಮ್ಕಿ ಹಾಕ್ತಿದ್ದಾನಂತೆ. ಇದರಿಂದ ರೋಸಿಹೋದ ಗ್ರಾಮಸ್ಥರು ಶ್ರೀರಾಮನಾಯಕ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ರೇಷ್ಮೆ ಗೂಡಿನ ಬಾಕಿ ಹಣ ಕೊಡದೆ ಪ್ರಾಣ ಬೆದರಿಕೆ ಹಾಕಿದ ವ್ಯಾಪಾರಿ: ನ್ಯಾಯ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತರು

ಶ್ರೀರಾಮನಾಯಕ್ ಸ್ಥಳೀಯ ಗ್ರಾಮಪಂಚಾಯಿತಿ ಸದಸ್ಯನ ಜೊತೆ ಸೇರಿ ಉದ್ದಟತನದಿಂದ ವರ್ತಿಸುತ್ತಿದ್ದಾನಂತೆ. ಈತನ ವರ್ತನೆ ವಿರುದ್ದ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಪಂಚಾಯಿತಿ ಪಿಡಿಓ ಸೇರಿದಂತೆ ಹಲವು ಅಧಿಕಾರಿಗಳಿಗೆ ದೂರು ನೀಡಿದ್ರೂ ಯಾರೂ ಏನೂ ಕ್ರಮ ಕೈಗೊಂಡಿಲ್ಲವಂತೆ. ಗ್ರಾಮದ ಜನರಿಗೆ ನೀರು ಸರಬರಾಜು ಮಾಡದೆ ತನ್ನ ಜಮೀನಿಗೆ ನೀರು ಹಾಯಿಸಿಕೊಳ್ಳುತ್ತಿರುವ ವಾಟರ್ ಮ್ಯಾನ್ ವಿರುದ್ದ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್