AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿಗೆ ನೀರು ಕಲಬೆರಕೆ: ವಿಸ್ತರಣಾಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಅಮಾನತು

ಚಿಕ್ಕಬಳ್ಳಾಪುರದ ಚಿಮುಲ್ ಡೈರಿಯಲ್ಲಿ ಹಾಲಿಗೆ ನೀರು ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಡಿಕೆರೆ ಹಾಲಿನ ಡೇರಿ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಚಿಮುಲ್ ವಿಸ್ತರಣಾಧಿಕಾರಿ ಕೆ.ನಾರಾಯಣಸ್ವಾಮಿರನ್ನು ಅಮಾನತು ಮಾಡಲಾಗಿದೆ. ತನಿಖೆಯಲ್ಲಿ ಸುಮಾರು 10,000 ಲೀಟರ್ ನೀರು ಬೆರೆಸಿರುವುದು ಬಯಲಾಗಿದೆ. ಇದು ಟಿವಿ9 ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.

ನಂದಿನಿ ಹಾಲಿಗೆ ನೀರು ಕಲಬೆರಕೆ: ವಿಸ್ತರಣಾಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಅಮಾನತು
ನಂದಿನಿ ಹಾಲಿಗೆ ನೀರು ಕಲಬೆರಕೆ: ವಿಸ್ತರಣಾಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಅಮಾನತು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jan 29, 2025 | 4:08 PM

Share

ಚಿಕ್ಕಬಳ್ಳಾಪುರ, ಜನವರಿ 28: ನಂದಿನಿ ಹಾಲು (Milk) ಹಾಗೂ ಹಾಲಿನ ಉತ್ಪನ್ನಗಳು ಅಂದರೆ ಜನರಿಗೆ ನಂಬಿಕೆ. ಆದರೆ ಅಂತಹ ನಂದಿನಿ ಹಾಲಿಗೆ ಸ್ವತಃ ಹಾಲಿನ ಡೈರಿಯ ಸಿಬ್ಬಂದಿಯೇ ನೀರು ಮಿಶ್ರಣ ಮಾಡಿ ನಂದಿನಿ ಹಾಲಿಗೆ ಅಪಚಾರ ಮಾಡಿದ್ದರು. ಈ ಕುರಿತು ಜನವರಿ 18ರಂದು ಟಿವಿ9 ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಚಿಮುಲ್ ತನಿಖೆ ಮಾಡಿತ್ತು. ತನಿಖೆಯಲ್ಲಿ ಸಿಬ್ಬಂದಿಗಳ ಕಳ್ಳಾಟ ಬಯಲಾಗಿದ್ದು, ತಪ್ಪು ಮಾಡಿದವರನ್ನು ಈಗ ಅಮಾನತು ಮಾಡಲಾಗಿದೆ.

ಜಿಲ್ಲೆಯ ಚಿಂತಾಮಣಿ ತಾಲೂಕು ಮಾಡಿಕೆರೆ ಗ್ರಾಮದ ಹಾಲಿನ ಬಿ.ಎಂ.ಸಿ ಡೈರಿಯಲ್ಲಿ ಸಿಬ್ಬಂದಿಗಳೇ ರೈತರು ತಂದು ಹಾಕುವ ಹಾಲಿಗೆ ನೀರು ಕಲಬೆರಕೆ ಮಾಡುತ್ತಿದ್ದರು. ಇದರಿಂದ ಎಚ್ಚೆತ್ತ ಚಿಕ್ಕಬಳ್ಳಾಪುರ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಎಂಡಿ ಶ್ರೀನಿವಾಸಗೌಡ ತನಿಖೆಗೆ ಆದೇಶಿಸಿದ್ದರು. ತನಿಖೆಯಲ್ಲಿ ಅಕ್ರಮ ಅವ್ಯವಹಾರ ಬಯಲಾಗಿದ್ದು, ಚಿಮುಲ್ ವಿಸ್ತರಣಾಧಿಕಾರಿ ಕೆ.ನಾರಾಯಣಸ್ವಾಮಿ ಸೇರಿದಂತೆ ಮಾಡಿಕೆರೆ ಹಾಲಿನ ಡೇರಿ ಕಾರ್ಯದರ್ಶಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ

ಇನ್ನೂ ಚಿಮುಲ್ ಅಧಿಕಾರಿಗಳ ತಂಡ ನಡೆಸಿದ ಸಮಗ್ರ ತನಿಖೆಯಲ್ಲಿ, ರೈತರು ತಂದು ಹಾಕುವ ಪರಿಶುದ್ಧ ಹಾಲಿಗೆ ಇದುವರೆಗೂ ಹತ್ತು ಸಾವಿರದ 182 ಲೀಟರ್ ನೀರು ಬೆರೆಸಿರುವುದು ಬಯಲಾಗಿದೆ. ಇದರ ಮೌಲ್ಯ ಬರೋಬ್ಬರಿ 3,53,376 ರೂ. ಆಗಿದೆ. ಇನ್ನೂ ಹಾಲಿಗೆ ಮಿಶ್ರಣ ಮಾಡಿರುವ ನೀರಿಗೆ ಕ್ಷೀರ ಸಿರಿ ಯೋಜನೆಯಡಿ 50,939 ರೂ. ಪ್ರೋತ್ಸಾಹಧನವನ್ನು ಅಕ್ರಮವಾಗಿ ಪಡೆದುಕೊಂಡಿರುವುದು ಬಯಲಾಗಿದೆ. ಒಟ್ಟು 4,04,675 ರೂ. ಅಕ್ರಮವಾಗಿ ಅನಧಿಕೃತವಾಗಿ ಹಣ ಪಡೆದುಕೊಂಡಿರುವುದು ಬಯಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹಾಲು ಉತ್ಪಾದನೆಯಲ್ಲಿ ಕುಂಠಿತ: ಹೈನೋದ್ಯಮದಿಂದ ವಿಮುಖರಾಗುತ್ತಿದ್ದಾರಾ ರೈತರು?

ಶುದ್ಧ ಹಾಲಿಗೆ ನೀರು ಮಿಶ್ರಣ ಮಾಡಿ ಲೂಟಿ ಹೊಡೆದಿರುವ ಹಣವನ್ನ ಮರಳಿ ಒಕ್ಕೂಟಕ್ಕೆ ಕಟ್ಟುವಂತೆ ಚಿಕ್ಕಬಳ್ಳಾಪುರ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಎಂ.ಡಿ ಶ್ರೀನಿವಾಸಗೌಡ ಆದೇಶ ಮಾಡಿದ್ದು, ವಜಾಗೊಂಡಿರುವ ಸಿಬ್ಬಂದಿ, ಅಧಿಕಾರಿಗಳು ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:33 pm, Tue, 28 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್