AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿಗೆ ನೀರು ಕಲಬೆರಕೆ: ವಿಸ್ತರಣಾಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಅಮಾನತು

ಚಿಕ್ಕಬಳ್ಳಾಪುರದ ಚಿಮುಲ್ ಡೈರಿಯಲ್ಲಿ ಹಾಲಿಗೆ ನೀರು ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಡಿಕೆರೆ ಹಾಲಿನ ಡೇರಿ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಚಿಮುಲ್ ವಿಸ್ತರಣಾಧಿಕಾರಿ ಕೆ.ನಾರಾಯಣಸ್ವಾಮಿರನ್ನು ಅಮಾನತು ಮಾಡಲಾಗಿದೆ. ತನಿಖೆಯಲ್ಲಿ ಸುಮಾರು 10,000 ಲೀಟರ್ ನೀರು ಬೆರೆಸಿರುವುದು ಬಯಲಾಗಿದೆ. ಇದು ಟಿವಿ9 ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.

ನಂದಿನಿ ಹಾಲಿಗೆ ನೀರು ಕಲಬೆರಕೆ: ವಿಸ್ತರಣಾಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಅಮಾನತು
ನಂದಿನಿ ಹಾಲಿಗೆ ನೀರು ಕಲಬೆರಕೆ: ವಿಸ್ತರಣಾಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಅಮಾನತು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jan 29, 2025 | 4:08 PM

Share

ಚಿಕ್ಕಬಳ್ಳಾಪುರ, ಜನವರಿ 28: ನಂದಿನಿ ಹಾಲು (Milk) ಹಾಗೂ ಹಾಲಿನ ಉತ್ಪನ್ನಗಳು ಅಂದರೆ ಜನರಿಗೆ ನಂಬಿಕೆ. ಆದರೆ ಅಂತಹ ನಂದಿನಿ ಹಾಲಿಗೆ ಸ್ವತಃ ಹಾಲಿನ ಡೈರಿಯ ಸಿಬ್ಬಂದಿಯೇ ನೀರು ಮಿಶ್ರಣ ಮಾಡಿ ನಂದಿನಿ ಹಾಲಿಗೆ ಅಪಚಾರ ಮಾಡಿದ್ದರು. ಈ ಕುರಿತು ಜನವರಿ 18ರಂದು ಟಿವಿ9 ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಚಿಮುಲ್ ತನಿಖೆ ಮಾಡಿತ್ತು. ತನಿಖೆಯಲ್ಲಿ ಸಿಬ್ಬಂದಿಗಳ ಕಳ್ಳಾಟ ಬಯಲಾಗಿದ್ದು, ತಪ್ಪು ಮಾಡಿದವರನ್ನು ಈಗ ಅಮಾನತು ಮಾಡಲಾಗಿದೆ.

ಜಿಲ್ಲೆಯ ಚಿಂತಾಮಣಿ ತಾಲೂಕು ಮಾಡಿಕೆರೆ ಗ್ರಾಮದ ಹಾಲಿನ ಬಿ.ಎಂ.ಸಿ ಡೈರಿಯಲ್ಲಿ ಸಿಬ್ಬಂದಿಗಳೇ ರೈತರು ತಂದು ಹಾಕುವ ಹಾಲಿಗೆ ನೀರು ಕಲಬೆರಕೆ ಮಾಡುತ್ತಿದ್ದರು. ಇದರಿಂದ ಎಚ್ಚೆತ್ತ ಚಿಕ್ಕಬಳ್ಳಾಪುರ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಎಂಡಿ ಶ್ರೀನಿವಾಸಗೌಡ ತನಿಖೆಗೆ ಆದೇಶಿಸಿದ್ದರು. ತನಿಖೆಯಲ್ಲಿ ಅಕ್ರಮ ಅವ್ಯವಹಾರ ಬಯಲಾಗಿದ್ದು, ಚಿಮುಲ್ ವಿಸ್ತರಣಾಧಿಕಾರಿ ಕೆ.ನಾರಾಯಣಸ್ವಾಮಿ ಸೇರಿದಂತೆ ಮಾಡಿಕೆರೆ ಹಾಲಿನ ಡೇರಿ ಕಾರ್ಯದರ್ಶಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ

ಇನ್ನೂ ಚಿಮುಲ್ ಅಧಿಕಾರಿಗಳ ತಂಡ ನಡೆಸಿದ ಸಮಗ್ರ ತನಿಖೆಯಲ್ಲಿ, ರೈತರು ತಂದು ಹಾಕುವ ಪರಿಶುದ್ಧ ಹಾಲಿಗೆ ಇದುವರೆಗೂ ಹತ್ತು ಸಾವಿರದ 182 ಲೀಟರ್ ನೀರು ಬೆರೆಸಿರುವುದು ಬಯಲಾಗಿದೆ. ಇದರ ಮೌಲ್ಯ ಬರೋಬ್ಬರಿ 3,53,376 ರೂ. ಆಗಿದೆ. ಇನ್ನೂ ಹಾಲಿಗೆ ಮಿಶ್ರಣ ಮಾಡಿರುವ ನೀರಿಗೆ ಕ್ಷೀರ ಸಿರಿ ಯೋಜನೆಯಡಿ 50,939 ರೂ. ಪ್ರೋತ್ಸಾಹಧನವನ್ನು ಅಕ್ರಮವಾಗಿ ಪಡೆದುಕೊಂಡಿರುವುದು ಬಯಲಾಗಿದೆ. ಒಟ್ಟು 4,04,675 ರೂ. ಅಕ್ರಮವಾಗಿ ಅನಧಿಕೃತವಾಗಿ ಹಣ ಪಡೆದುಕೊಂಡಿರುವುದು ಬಯಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹಾಲು ಉತ್ಪಾದನೆಯಲ್ಲಿ ಕುಂಠಿತ: ಹೈನೋದ್ಯಮದಿಂದ ವಿಮುಖರಾಗುತ್ತಿದ್ದಾರಾ ರೈತರು?

ಶುದ್ಧ ಹಾಲಿಗೆ ನೀರು ಮಿಶ್ರಣ ಮಾಡಿ ಲೂಟಿ ಹೊಡೆದಿರುವ ಹಣವನ್ನ ಮರಳಿ ಒಕ್ಕೂಟಕ್ಕೆ ಕಟ್ಟುವಂತೆ ಚಿಕ್ಕಬಳ್ಳಾಪುರ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಎಂ.ಡಿ ಶ್ರೀನಿವಾಸಗೌಡ ಆದೇಶ ಮಾಡಿದ್ದು, ವಜಾಗೊಂಡಿರುವ ಸಿಬ್ಬಂದಿ, ಅಧಿಕಾರಿಗಳು ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:33 pm, Tue, 28 January 25

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ