AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗೇಪಲ್ಲಿ: 13 ವರ್ಷದ ದಾಂಪತ್ಯಕ್ಕೆ ಕೊಳ್ಳಿಯಿಟ್ಟ ಗಂಡನ ಅನೈತಿಕ ಸಂಬಂಧ, ಪತ್ನಿ ನೇಣಿಗೆ ಶರಣು

ಮಗಳು ಮೋನಿಕಾ ಗಂಡನ ಮನೆಯಲ್ಲೆ ಸಾವಿಗೆ ಶರಣಾಗಿದ್ದು, ಆಕೆಯ ಗಂಡ ಬೇರೊಬ್ಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡು ತಮ್ಮ ಮಗಳಿಗೆ ಕಿರುಕುಳ ನೀಡ್ತಿದ್ದ ಅದರಿಂದಲೇ ತಮ್ಮ ಮಗಳು ನೇಣಿಗೆ ಶರಣಾಗಿದ್ದಾಳೆ ಅಂತ ಮೋನಿಕಾ ತಂದೆ ರಾಮಕೃಷ್ಣಪ್ಪ ಆರೋಪಿಸಿದ್ದಾನೆ.

ಬಾಗೇಪಲ್ಲಿ: 13 ವರ್ಷದ ದಾಂಪತ್ಯಕ್ಕೆ ಕೊಳ್ಳಿಯಿಟ್ಟ ಗಂಡನ ಅನೈತಿಕ ಸಂಬಂಧ, ಪತ್ನಿ ನೇಣಿಗೆ ಶರಣು
ಗಂಡನ ಅನೈತಿಕ ಸಂಬಂಧ ಆರೋಪ, 13 ವರ್ಷದ ದಾಂಪತ್ಯಕ್ಕೆ ಕೊಳ್ಳಿಯಿಟ್ಟಿತು! ಪತ್ನಿ ನೇಣಿಗೆ ಶರಣು
TV9 Web
| Updated By: ಸಾಧು ಶ್ರೀನಾಥ್​|

Updated on: Nov 23, 2022 | 1:18 PM

Share

ಮಗಳು ಚೆನ್ನಾಗಿರಲಿ ಅಂತ ಆಕೆಯ ತಂದೆ ತಾಯಿ 50 ಲಕ್ಷ ರೂಪಾಯಿ ಮೌಲ್ಯದ ಜಮೀನು ಮಾರಿ, ಅದ್ದೂರಿಯಾಗಿ ಮದುವೆ ಮಾಡಿ ಕೊಟ್ಟಿದ್ದರು. ಆದ್ರೆ ಕೈಹಿಡಿದ ಗಂಡ (Husband), ತನ್ನ ಪತ್ನಿಯ (Wife) ಬದಲು, ಬೇರೆ ಮಹಿಳೆಯ ಜೊತೆ ಅನೈತಿಕ ಸಂಬಂಧ (Illicit Relation) ಬೆಳೆಸಿ, ಪತ್ನಿಗೆ ಕಿರುಕುಳ ನೀಡ್ತಿದ್ದನಂತೆ. ಇದರಿಂದ ಮನನೊಂದ ಆ ಗೃಹಿಣಿ ಗಂಡನ ಮನೆಯಲ್ಲೆ ನೇಣಿಗೆ (Suicide) ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಎಸ್ ಗುಂಡ್ಲುಹಳ್ಳಿ ಗ್ರಾಮದ ರಾಮಕೃಷ್ಣಪ್ಪ ಹಾಗೂ ಅನಸೂಯಮ್ಮ ರೈತ ದಂಪತಿ, ತಾವು ಕಷ್ಟಪಟ್ಟಂತೆ ತಮ್ಮ ಮಗಳು ಮೋನಿಕಾ ಕಷ್ಟ ಪಡಬಾರದು ಎಂದೆಣೆಸಿ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಸಂತೇ ಬೀದಿ ಬಡಾವಣೆಯ ಗುರುಮೂರ್ತಿ ಎನ್ನುವವರಿಗೆ ಮದುವೆ ಮಾಡಿ ಕೊಟ್ಟಿದ್ರು. ಮಗಳ ಸಂತೋಷಕ್ಕಾಗಿ ಇರೊ 50 ಲಕ್ಷ ರೂಪಾಯಿ ಮೌಲ್ಯದ ಜಮೀನನನ್ನು ಮಾರಾಟ ಮಾಡಿ, ಮಗಳು ಹಾಗೂ ಆಳಿನ ಮೈಮೇಲೆ ಚಿನ್ನ ಹಾಕಿ ಅದ್ದೂರಿಯಾಗಿ ಮದುವೆ ಮಾಡಿದ್ದರು.

ಆದ್ರೆ ಈಗ ಮಗಳು ಗಂಡನ ಮನೆಯಲ್ಲೆ ಸಾವಿಗೆ ಶರಣಾಗಿದ್ದು, ಆಕೆಯ ಗಂಡ ಬೇರೊಬ್ಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡು ತಮ್ಮ ಮಗಳಿಗೆ ಕಿರುಕುಳ ನೀಡ್ತಿದ್ದ ಅದರಿಂದಲೇ ತಮ್ಮ ಮಗಳು ನೇಣಿಗೆ ಶರಣಾಗಿದ್ದಾಳೆ ಅಂತ ಮೋನಿಕಾ ತಂದೆ ರಾಮಕೃಷ್ಣಪ್ಪ ಆರೋಪಿಸಿದ್ದಾನೆ.

ಇನ್ನು ಮೋನಿಕಾ ಹಾಗೂ ಗುರುಮೂರ್ತಿಗೆ ಮದುವೆಯಾಗಿ ಬರೋಬ್ಬರಿ 13 ವರ್ಷಗಳೆ ಕಳೆದಿದ್ದು, 11 ವರ್ಷದ ವಿಷ್ಣುಪ್ರಿಯಾ ಎಂಬ ಮಗಳು ಇದ್ದಾಳೆ. ಆದ್ರೆ ಗುರುಮೂರ್ತಿ ತನ್ನ ಹೆಂಡತಿ ಮತ್ತು ಮಗಳ ಮುಖ ನೋಡಿಕೊಂಡು ಸುಖ ಸಂಸಾರ ಮಾಡದೆ… ಬೇರೆ ಮಹಿಳೆಯ ಹಿಂದೆ ಬಿದ್ದಿದ್ದನಂತೆ. ಇದ್ರಿಂದ ನೊಂದು ಮೋನಿಕಾ ಆತ್ಮಹತ್ಯೆ ದಾರಿ ಹಿಡಿದಿದ್ದಾಳೆ. ಇದ್ರಿಂದ ಬಾಗೇಪಲ್ಲಿ ಠಾಣೆ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಗಳು ಮೋನಿಕಾ ಸಾವಿನ ಮನೆ ಸೇರಿದ್ದಾಳೆ. 11 ವರ್ಷದ ಮುದ್ದಾದ ಮಗಳನ್ನು ಬಿಟ್ಟು ಮೋನಿಕಾ ಮೃತಪಟ್ಟಿದ್ದು, 11 ವರ್ಷದ ಮೊಮ್ಮಗಳ ಜವಾಬ್ದಾರಿ ಮೋನಿಕಾ ತಂದೆ ತಾಯಿ ಮೇಲೆ ಇದೆ. ಇದ್ರಿಂದ ನಾಲ್ಕು ಜನ ಹಿರಿಯರು ಸೇರಿ, ಆಗಿದ್ದು ಆಗಿ ಹೋಗಿದೆ. ಪೊಲೀಸರು ತನಿಖೆ ಮಾಡಿಕೊಳ್ಳಲಿ, ಆದ್ರೆ ಗುರುಮೂರ್ತಿಗೆ ಸೇರಿದ್ದ ಮನೆ, ನಿವೇಶನ ಹಾಗೂ ಜಮೀನನ್ನು ಆತನ ಮಗಳ ಹೆಸರಿಗೆ ನೋಂದಣಿ ಮಾಡಿಸಲಿ ಎಂದು ತಿರ್ಮಾನಿಸಿದ್ದಾರೆ. (ವರದಿ: ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ)

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!