AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಗಂಡಂದಿರ ಮಧ್ಯೆ ಹೆಂಡತಿಯ ಡಬಲ್ ಲವ್! ಚಿಕ್ಕಬಳ್ಳಾಪುರ ಠಾಣೆ ಮುಂದೆ ಹೈಡ್ರಾಮಾ, ಪೋಷಕರದ್ದು ಬರೀ ಗೋಳು

ಅಸಲಿಗೆ ಪುಣ್ಯಾತಗಿತ್ತಿ ದಿವ್ಯಾ ಡಬಲ್ ಗ್ರಾಜುಯೇಟ್! ದಿವ್ಯಾ ಬಿ.ಎಡ್. ಎಂ.ಎಸ್ಸಿ ವಿದ್ಯಾಭ್ಯಾಸ ಮಾಡಿದ್ದು, ಮುಳಬಾಗಿಲಿನ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಉದ್ಯೋಗದಲ್ಲಿದ್ದಳು. ಮದುವೆಯಾಗಿ ಕೆಲ ತಿಂಗಳಲ್ಲೆ ಕೋಲಾರದ ಕಂಬಂಪಲ್ಲಿ ನಿವಾಸಿ, ಕೊರಿಯರ್ ಬಾಯ್ ಚಂದ್ರಶೇಖರ್ ಗೆ ಪರಿಚಯವಾಗಿದ್ದಾಳೆ. ಪ್ರೀತಿ ಪ್ರೇಮ ಅಂತಾ ಸುತ್ತಾಡಿದ್ದಾಳೆ...

ಇಬ್ಬರು ಗಂಡಂದಿರ ಮಧ್ಯೆ ಹೆಂಡತಿಯ ಡಬಲ್ ಲವ್! ಚಿಕ್ಕಬಳ್ಳಾಪುರ ಠಾಣೆ ಮುಂದೆ ಹೈಡ್ರಾಮಾ, ಪೋಷಕರದ್ದು ಬರೀ ಗೋಳು
ಇಬ್ಬರು ಗಂಡಂದಿರ ಮಧ್ಯೆ ಹೈರಣಾದ ಕಿಲಾಡಿ ಹೆಂಡತಿ! ಚಿಕ್ಕಬಳ್ಳಾಪುರ ಠಾಣೆ ಮುಂದೆ ಹೈಡ್ರಾಮಾ, ಪೋಷಕರದ್ದು ಬರೀ ಗೋಳು!
TV9 Web
| Edited By: ಸಾಧು ಶ್ರೀನಾಥ್​|

Updated on: Nov 12, 2022 | 6:29 PM

Share

ಈ ಪ್ರೀತಿ ಪ್ರೇಮ ಪ್ರಣಯ ಅನ್ನೊದೆ ಹಾಗೆ… ಪ್ರೀತಿ ಪ್ರೇಮ ಅನುರಾಗ ಬಂಧನ ಆದ್ರೆ ಅದನ್ನು ಬಿಡಿಸೋದು ಕಷ್ಟ. ಸ್ವತಃ ತನ್ನ ಅಕ್ಕನ ಗಂಡ ಅಂದರೆ ಬಾವನನ್ನೇ ಪ್ರೀತಿಸಿದ ವಿದ್ಯಾವಂತೆಯೊಬ್ಬರು, ಹಠಕ್ಕೆ ಬಿದ್ದು ಆತನನನ್ನು ಮದುವೆ ಆಗಿದ್ದಳು. ಕೊನೆಗೆ ಕೈಹಿಡಿದ ಗಂಡನನ್ನು ಬಿಟ್ಟು ಕೊರಿಯರ್ ಬಾಯ್ ನನ್ನು ಪ್ರೀತಿಸಿದ ಆಕೆ, ಆತನನ್ನೂ ಮದುವೆ ಮಾಡಿಕೊಂಡು ಒಂದೆಡೆ ಕಾನೂನು ತೊಡಕು, ಮತ್ತೊಂದೆಡೆ ತಂದೆ ತಾಯಿಯ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ ಈ ವರದಿ ನೋಡಿ!!

ಈ ಕಥಾನಕದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ (Chikkaballapur) ಮಹಿಳಾ ಠಾಣೆ ಮುಂದೆ ನಮ್ಮ ಮಗಳನ್ನು ನಮ್ಮ ಜೊತೆ ಕಳುಹಿಸಿ ಕೊಡಿ ಅಂತ ಆ ಇಬ್ಬರು ಗಂಡಂದಿರ ಮುದ್ದಿನ ಹೆಂಡತಿಯ ವೃದ್ದ ತಂದೆ ತಾಯಿ, ಅತ್ತು ಕರೆದು ಗೋಳಾಡಿದ್ದಾರೆ. ಹೌದು!! ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮಣಿಗಾನಹಳ್ಳಿ ನಿವಾಸಿ ಜಯಮ್ಮ ಹಾಗೂ ವಿ ನಾರಾಯಣಪ್ಪ ದಂಪತಿಗೆ ಮೂರು ಜನ ಹೆಣ್ಣು ಮಕ್ಕಳು. ಅದರಲ್ಲಿ ದೊಡ್ಡ ಮಗಳು ಮಂಜುಳಾಳನ್ನು ಆಂಧ್ರದ ವಿ ಕೋಟೆ ಗ್ರಾಮದ ಸುಬ್ರಮಣ್ಯಗೆ ಕೊಟ್ಟು ಮದುವೆ ಮಾಡಿಕೊಟ್ಟಿದ್ರು.

ಮಂಜುಳಾರ ಕೊನೆಯ ತಂಗಿಯೇ ದಿವ್ಯಾ. ದಿವ್ಯಾ ಸ್ವತಃ ತನ್ನ ಅಕ್ಕನ ಗಂಡ ಬಾವ ಸುಬ್ರಮಣ್ಯ ನನ್ನು ಪ್ರೀತಿಸಿದಳು. ಕಾಡಿ ಬೇಡಿ ಅತ್ತು ಕರೆದು ಭಾವನನ್ನೇ ಮದುವೆ ಮಾಡಿಕೊಂಡಿದ್ದಳು. ಆದರೆ ಮದುವೆಯಾಗಿ ಕೇವಲ ಹತ್ತು ತಿಂಗಳು ಅಷ್ಟೆ… ಅಷ್ಟರಲ್ಲೆ ತಾಜಾ ಆಗಿ ಪರಿಚಯಸ್ಥನಾದ ಕೊರಿಯರ್ ಬಾಯ್ ಚಂದ್ರಶೇಖರ್ ಎನ್ನುವವನನ್ನು ಪ್ರೀತಿಸತೊಡಗಿದಳು. ಮನೆಯವರ ವಿರೋಧದ ನಡುವೆ ಮದುವೆಯೂ ಮಾಡಿಕೊಂಡಳು. ಇದರಿಂದಾಗಿ ದಿವ್ಯಾ ಪೋಷಕರಿಗೆ ಈ ಗೋಳಾಟ.

ಅಸಲಿಗೆ ಪುಣ್ಯಾತಗಿತ್ತಿ ದಿವ್ಯಾ ಡಬಲ್ ಗ್ರಾಜುಯೇಟ್!

ಅಸಲಿಗೆ ಪುಣ್ಯಾತಗಿತ್ತಿ ದಿವ್ಯಾ ಡಬಲ್ ಗ್ರಾಜುಯೇಟ್! ದಿವ್ಯಾ ಬಿ.ಎಡ್. ಎಂ.ಎಸ್ಸಿ ವಿದ್ಯಾಭ್ಯಾಸ ಮಾಡಿದ್ದು, ಮುಳಬಾಗಿಲಿನ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಸೀನಿಯರ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಳು. ಮದುವೆಯಾಗಿ ಕೆಲ ತಿಂಗಳಲ್ಲೆ ಕೋಲಾರದ ಕೆ.ಜೆ.ಎಫ್​ ನ ಕಂಬಂಪಲ್ಲಿ ನಿವಾಸಿ 29 ವರ್ಷದ ಕೊರಿಯರ್ ಬಾಯ್ ಚಂದ್ರಶೇಖರ್ ಗೆ ಪರಿಚಯವಾಗಿದ್ದಾಳೆ. ಪ್ರೀತಿ ಪ್ರೇಮ ಅಂತಾ ಸುತ್ತಾಡಿದ್ದಾಳೆ. ಇದ್ದನ್ನರಿತ ಆಕೆಯ ಪೋಷಕರು ಮಗಳು ದಿವ್ಯಾಳನ್ನು ಕೋಲಾರ ಜಿಲ್ಲೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಡಿ.ಸಿ.ಸಿ ಬ್ಯಾಂಕ್ ಗೆ ವರ್ಗಾವಣೆ ಮಾಡಿಸಿದ್ದರು.

ಅಲ್ಲಿಯೂ ದಿವ್ಯ ಜೋಡಿ ತನ್ನ ಪ್ರೇಮ ಪುರಾಣ ಮುಂದುವರೆಸಿದೆ. ದಿವ್ಯಾ-ಚಂದ್ರಶೇಖರ್ ಪ್ರೇಮಕ್ಕೆ, ಮರು ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾದ ಕಾರಣ ಇಬ್ಬರೂ ಇದ್ದಕ್ಕಿದ್ದಂತೆ ಜೂಟ್​ ಆಗಿದ್ರು. ಇದರಿಂದ ಆಕೆಯ ಪೋಷಕರು ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ದೂರು ದಾಖಲು ಮಾಡಿದ್ರು. ಪೊಲೀಸರು ಇಬ್ಬರನ್ನೂ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ. ಇಬ್ಬರೂ ಜೂನ್ 10ರಂದೇ ಮದುವೆ ಆಗಿದ್ದು, ಅಗಸ್ಟ್​ 10ರಂದು ಬಂಗಾರಪೇಟೆಯಲ್ಲಿ ಮದುವೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಇದರಿಂದ ತಮ್ಮನ್ನು ತಮ್ಮ ಪಾಡಿಗೆ ಬದುಕಲು ಬಿಡಿ ಅಂತ ಪೊಲೀಸರು ಹಾಗೂ ತಂದೆ ತಾಯಿಯ ಎದುರು ಗೋಗರೆದಿದ್ದಾರೆ.

ದಿವ್ಯಾ ಪೋಷಕರು ಸುಮಾರು 15 ಲಕ್ಷ ರೂಪಾಯಿ ಖರ್ಚು ಮಾಡಿ ಮಗಳಿಗೆ ಬಾವನ ಜೊತೆಯೇ ಮೊದಲ ಮದುವೆ ಮಾಡಿಸಿದ್ದರು. ದಿವ್ಯಾಳಿಗೆ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಉದ್ಯೋಗವನ್ನೂ ಕೊಡಿಸಿದ್ದರಂತೆ! ಆದ್ರೆ ಭಾವನ ಜೊತೆ ಮದುವೆ ಬೇಡ ಅಂದರೂ ಕೇಳಿರಲಿಲ್ಲ. ಈಗ ಬಾವನನ್ನು ಬಿಟ್ಟು ಬೇರೊಬ್ಬರ ಜೊತೆ ಮದುವೆ ಆಗುವುದಕ್ಕೆ ವಿರೋಧವಿದ್ರೂ ಕೇಳದ ದಿವ್ಯಾ, ಹೊಸ ಪ್ರಿಯತಮ ಚಂದ್ರಶೇಖರನ ಜೊತೆ ಲವ್ವಿಡವ್ವಿ ಮದುವೆ ಆಗಿ, ಒಂದೆಡೆ ಕಾನೂನು ತೊಡಕು, ಮತ್ತೊಂದೆಡೆ ಮನೆಯವರ ವಿರೋಧ ಕಟ್ಟಿಕೊಂಡಿದ್ದಾಳೆ. ಪ್ರೀತಿಸಿದ ಚಂದ್ರುವಿನ ಜೊತೆಯೇ ಹೋಗಿದ್ದಾಳೆ. ಮಾಯೆಯೆಂಬ ಪ್ರೀತಿ-ಪ್ರೇಮದ ಕಥೆ ಮುಂದೆ ಏನು ತಿರುವುದು ಪಡೆಯುವುದೋ ಕಾದುನೋಡುವ! (ವರದಿ: ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ)

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!