ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್​

ಚಿಕ್ಕಬಳ್ಳಾಪುರದಲ್ಲಿ ಒಂದು ವರ್ಷದ ಹಿಂದೆ ನಡೆದ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮಹಿಳೆಯ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಗುರುತು ಸಿಗದಂತೆ ಮಾಡಲಾಗಿತ್ತು. ಬುರುಡೆ ಮತ್ತು ಮೂಳೆಗಳ ಆಧಾರದ ಮೇಲೆ ಇದೀಗ ಮೃತ ಮಹಿಳೆಯ ಗುರುತು ಪತ್ತೆ ಮಾಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್​
ಕೊಲೆಯಾದ ಮಹಿಳೆ, ಬಂಧಿತರು
Image Credit source: tv9 kannada
Edited By:

Updated on: Apr 17, 2026 | 8:16 PM

ಚಿಕ್ಕಬಳ್ಳಾಪುರ, ಏಪ್ರಿಲ್​ 17: ವರ್ಷದ ಹಿಂದೆ ಓರ್ವ ಮಹಿಳೆಯನ್ನ ಕೊಂದು (kill) ಶವದ ಗುರುತು ಸಿಗದಂತೆ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿತ್ತು. ಸಿಕ್ಕ ಬುರುಡೆ ಹಾಗೂ ಮೂಳೆಗಳ ಆಧಾರದಲ್ಲಿ ಪೊಲೀಸರು ಇದೀಗ ಕೊಲೆಯಾದ ಮಹಿಳೆಯ (woman) ಗುರುತು ಪತ್ತೆಹಚ್ಚಿದ್ದು, ಕೊಲೆ ಮಾಡಿ ಏನು ಗೊತ್ತಿಲ್ಲದಂತೆ ಇದ್ದ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ತಲೆ ಬುರುಡೆ, ಮೂಳೆಗಳು ಪತ್ತೆ

2025 ಅಕ್ಟೋಬರ್ 19. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಧ್ಯೆದ ಕುರುಚಲು ಕಾಡಿನ ಕಣಿವೆ ಪ್ರದೇಶದಲ್ಲಿ, ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆಯಾಗಿದ್ದವು. ಸ್ಥಳಕ್ಕೆ ಭೇಟಿ ನೀಡಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ, ಸ್ಥಳದಲ್ಲಿ ಅರೆಬೆರೆ ಸುಟ್ಟ ಬಟ್ಟೆ, ಮೂಗುತಿ, ಸೀರೆ ಸೇರಿದಂತೆ ಮಹಿಳೆಯರು ಧರಿಸುವ ಕೆಲವು ವಸ್ತುಗಳು ಸಿಕ್ಕಿದ್ದವು. ಇದರಿಂದ ಮೃತಪಟ್ಟಿರುವುದು ಮಹಿಳೆ ಎನ್ನುವುದು ಗೊತ್ತಾಗಿತ್ತು.

ಇದನ್ನೂ ಓದಿ: ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ: ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

ಮೃತ ಮಹಿಳೆಯ ಗುರುತು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಟ್ಟಿದ್ದರು. ಕೊನೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿ ಮಾಹಿತಿ ನೀಡಿದವರಿಗೆ ಬಹುಮಾನ ನೀಡುವ ಘೋಷಣೆ ಮಾಡಿದ್ದರು. ಆದರೂ ಮೃತರ ಗುರುತು ಪತ್ತೆಯಾಗಿರಲಿಲ್ಲ. ಬರೋಬ್ಬರಿ ವರ್ಷದ ನಂತರ ಈಗ ಪೊಲೀಸರು ಮೃತ ಮಹಿಳೆಯ ಗುರುತು ಪತ್ತೆಹಚ್ಚಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಪ್ಪರಾಯನದುರ್ಗ ನಿವಾಸಿ ನುಣಕಮ್ಮ (52) ಕೊಲೆ ಆಗಿದ್ದ ಮಹಿಳೆ.

ಚಿಕಿತ್ಸೆ ನೆಪದಲ್ಲಿ ಕರೆದುಕೊಂಡು ಹೋಗಿ ಕೊಲೆ

ಇನ್ನು ನುಣಕಮ್ಮಗೆ ಗಂಡ ಮಕ್ಕಳು ಇರಲಿಲ್ಲ. ಅಣ್ಣನ ಮನೆಯಲ್ಲಿ ಇದ್ದರು. ನುಣಕಮ್ಮಳಿಗೆ ಮಗಳು ಆಗಬೇಕಿದ್ದ 32 ವರ್ಷದ ನಾಗಲಕ್ಷ್ಮಿ ಹಾಗೂ ಆಕೆಯ ಪ್ರೀಯಕರ ಆಂಧ್ರದ ಮಡಕಸಿರ ನಿವಾಸಿ ಅಶೋಕ್ ಕುಮಾರ್ (27) ಸೇರಿ ಕೊಲೆ ಮಾಡಿದ್ದು ಬಯಲಾಗಿದೆ. ಪಿಡ್ಸ್ ಬರುತ್ತಿದೆ ಎಂದು ನುಣಕಮ್ಮಳನ್ನ ಚಿಕಿತ್ಸೆ ಕೊಡಿಸುವುದಾಗಿ ನಂಬಿಸಿ, ಬೈಕ್​​ನಲ್ಲಿ ಕರೆದುಕೊಂಡು ಸೆಪ್ಟೆಂಬರ್ 20 ರಂದು ಚಿಕ್ಕಬಳ್ಳಾಪುರದ ಅರಣ್ಯದಲ್ಲಿ ಕೊಂದು ಶವ ಬಿಸಾಡಿ ಹೋಗಿದ್ದರು.

ವರ್ಷದ ಬಳಿಕ ಇಬ್ಬರ ಬಂಧನ

ಇನ್ನು ನುಣಕಮ್ಮಳ ಬಳಿ ಇದ್ದ ಮನೆಯ ಬೀರು ಬೀಗ ತೆಗೆದುಕೊಂಡು, ಆಕೆಯ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ ಮಾಡಿ ನೆಮ್ಮದಿಯಾಗಿದ್ದರು. ಕೊಲೆ ಮಾಡಿದ ನಾಲ್ಕು ದಿನಗಳ ನಂತರ ಮತ್ತೆ ವಾಪಸ್ ಬಂದು ಶವಕ್ಕೆ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು. ನಂತರ ಏನು ಗೊತ್ತಿಲ್ಲದಂತೆ ಇದ್ದರು. ಆದರೆ ಪೊಲೀಸರು ವರ್ಷದ ನಂತರ ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ

ಆರೋಪಿಗಳು ಚಾಪೆ ಕೆಳಗೆ ತೂರಿದರೆ, ಪೊಲೀಸರು ರಂಗೋಲಿ ಕೆಳಗೆ ತೂರಿ, ಕೊಲೆ ಪ್ರಕರಣ ಭೇದಿಸಿದ್ದಾರೆ. ಆದರೆ ಆರೋಪಿ ನಾಗಲಕ್ಷ್ಮಿ ಹಣ, ಚಿನ್ನಾಭರಣ ಹಾಗೂ ಚೀಟಿ ಹಣಕ್ಕೆ ಪ್ರಿಯಕರನ ಜೊತೆ ಸೇರಿ ಸ್ವಂತ ಚಿಕ್ಕಮ್ಮಳನ್ನು ಕೊಂದು ನಾಟಕವಾಡಿದ್ದು ಮಾತ್ರ ವಿಪರ್ಯಾಸ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us