ದೇವರ ವಿಗ್ರಹದ ಮೇಲೆ ಕಾಲಿಟ್ಟು ಮಹಿಳೆಯರು ಸ್ನಾನ ಮಾಡುವ ವಿಡಿಯೊ ವೈರಲ್

ಇತ್ತೀಚೆಗಷ್ಟೇ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಗಣೇಶ ಮೂರ್ತಿ ಮೇಲೆ ಚಪ್ಪಲಿ ಇಟ್ಟು ವಿಕೃತಿ ಮೆರೆದಿದ್ದ ಘಟನೆ ಬೆಳಕಿಗೆ ಬಂದಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಘಟನೆಯನ್ನು ಖಂಡಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೇ ರೀತಿ ದೇವರ ವಿಗ್ರಹದ ಮೇಲೆ ಕಾಲಿಟ್ಟು ಅನ್ಯ ಕೋಮಿನ ಮಹಿಳೆಯರು ಸ್ನಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ದೇವರ ವಿಗ್ರಹದ ಮೇಲೆ ಕಾಲಿಟ್ಟು  ಮಹಿಳೆಯರು ಸ್ನಾನ ಮಾಡುವ ವಿಡಿಯೊ ವೈರಲ್
Edited By:

Updated on: Oct 08, 2025 | 6:29 PM

ಚಿಕ್ಕಬಳ್ಳಾಪುರ, (ಅಕ್ಟೋಬರ್ 08): ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಗಣೇಶ ಮೂರ್ತಿ ಮೇಲೆ ಚಪ್ಪಲಿ ಇಟ್ಟಿರುವ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ (Chikkaballapur) ಅನ್ಯ ಕೋಮಿನ ಮಹಿಳೆಯರು (Women), ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿರುವ ಘಟನೆ ನಡೆದಿದೆ. ಹೌದು.. ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದ ಬಳಿ ಇರುವ ಗಂಗಮ್ಮ ವಿಗ್ರಹದ ಮೇಲೆ ಅನ್ಯಕೋಮಿನ ಮಹಿಳೆಯರು ಕಾಲಿಟ್ಟು ಸ್ನಾನ ಮಾಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ.

ಮೇಲಿನಿಂದ ಧುಮುಕುವ ನೀರಿನಲ್ಲಿ ಮೋಜು ಮಸ್ತಿ ಮಾಡುವ ಸಂದರ್ಭದಲ್ಲಿ ಮಹಿಳೆಯರು ಗಂಗಮ್ಮ ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿದ್ದಾರೆ. ಆಕಸ್ಮಿಕವೋ ದುರುದ್ದಶವೋ ಗೊತ್ತಿಲ್ಲ. ಕಳೆದ ಮೂರು ದಿನಗಳ ಹಿಂದೆ ಜಲಾಶಯಕ್ಕೆ ಬಂದವರಿಂದ ಈ ಕೃತ್ಯ ನಡೆದಿದ್ದು, ಯಾವುದರ ಮೇಲೆ ನಿಂತು ಸ್ನಾನ ಮಾಡುತ್ತಿದ್ದೇವೆ ಎನ್ನುವುದನ್ನು ಮಹಿಳೆಯರು ಅರಿತುಕೊಳ್ಳಬೇಕಿತ್ತು.  ಆದ್ರೆ, ಮೋಜು ಮಸ್ತಿಯಲ್ಲಿ ಅದ್ಯಾವುದು ಅವರಿಗೆ ಕಂಡಿಲ್ಲ.

ಇದನ್ನೂ ಓದಿ: ಬೇಲೂರು ಗಣೇಶಮೂರ್ತಿಗೆ ಚಪ್ಪಲಿ ಹಾರ ಹಾಕಿದ್ಯಾರು? ಇಲ್ಲಿದೆ CCTV ದೃಶ್ಯ

ಗಂಗಮ್ಮ ವಿಗ್ರಹದ ಮೇಲೆ ನಿಂತು ಸ್ನಾನ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಹಿಂದೂಗಳ ಭಾವನಿಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಈ ಬಗ್ಗೆ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಆದ್ರೆ, ಮುಂದೆ ಈ ಪ್ರಕರಣ ಯಾವ ಮಟ್ಟಕ್ಕೆ ಹೋಗಿ ನಿಲ್ಲುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡುತ್ತಿರುವ ವಿಡಿಯೋ

ಎಸ್.ಎಂ.ಎಂ.ಸಿ ಸಾಮಾಜಿಕ ಜಾಲತಾಣ ಮಾನಿಟರಿಂಗ್ ಘಟಕದಿಂದ ದೂರು ನೀಡಲಾಗಿದ್ದು, ಇದರ ಅನ್ವಯ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಬಿ.ಎನ್.ಎಸ್.ಎಸ್ 2023 299 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Wed, 8 October 25

Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us